ಕಣ್ಣೀರ 'ಹೊಳೆ' ಹರಿಸಿ, ಪ್ರಜ್ವಲ್ ರೇವಣ್ಣ ಅಭ್ಯರ್ಥಿ ಎಂದ ದೇವೇಗೌಡ್ರು
Recommended Video

ಹಾಸನ ಲೋಕಸಭಾ ಕ್ಷೇತ್ರಕ್ಕೆ ಪ್ರಜ್ವಲ್ ರೇವಣ್ಣ ಜೆಡಿಎಸ್ ನ ಅಧಿಕೃತ ಅಭ್ಯರ್ಥಿ ಎಂದು ಕಣ್ಣೀರ 'ಹೊಳೆ' ಹರಿಸಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಇಂದು ಹೊಳೆನರಸೀಪುರದಲ್ಲಿ ಘೋಷಿಸಿದರು.
ಕೊಟ್ಟ ಮಾತಿನಂತೆ ನನ್ನ ಮೊಮ್ಮಗನಿಗಾಗಿ ಕ್ಷೇತ್ರ ಬಿಟ್ಟು ಕೊಟ್ಟಿದ್ದೇನೆ. ಇನ್ನು ನಿಮ್ಮ ಮಡಿಲಿಗೆ ಪ್ರಜ್ವಲ್ನನ್ನು ಹಾಕಿದ್ದೇನೆ. ನಿಮ್ಮ ಅನುಮತಿ ಪಡೆದೆ ನಾನು ಪ್ರಜ್ವಲ್ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದೇನೆ. ನಿಮ್ಮ ಆಶೀರ್ವಾದ ಪ್ರಜ್ವಲ್ಮೇಲೆ ಇರಲಿ ಎಂದು ದೇವೇಗೌಡರು ಕಣ್ಣೀರಿಟ್ಟರು. ದೇವೇಗೌಡರು ಕಣ್ಣೀರು ಸುರಿಸಿದ್ದು ನೋಡಿ, ಅವರ ಪುತ್ರ ರೇವಣ್ಣ ಅವರು ಕಣ್ಣು ಒರೆಸಿಕೊಂಡರು, ವೇದಿಕೆಯಲ್ಲಿದ್ದ ಮೊಮ್ಮಗ ಪ್ರಜ್ವಲ್ ಅವರ ಕಣ್ಣಾಲಿಗಳು ತುಂಬಿ ಬಂದವು. ಒಟ್ಟಾರೆ, ಕಣ್ಣೀರು ಸಾಂಕ್ರಾಮಿಕವಾಗಿತ್ತು.
ಪ್ರಜ್ವಲ್ಅಭ್ಯರ್ಥಿ ಎಂದು ಘೋಷಣೆಯಾಗುವುದಕ್ಕೂ ಮುನ್ನ ಸಚಿವ ಎಚ್ ಡಿ ರೇವಣ್ಣ ಅವರ ಕುಟುಂಬದವರು ದೇಗುಲಕ್ಕೆ ಭೇಟಿ ನೀಡಿದರು. ಚುನಾವಣಾ ಪ್ರಚಾರ ನಿರ್ವಿಘ್ನವಾಗಿ ನಡೆಯಲಿ ಎಂದು ಕೋರುತ್ತಾ ಹೊಳೆನರಸೀಪುರ ತಾಲೂಕು ಮೂಡಲಹಿಪ್ಪೆ ಚನ್ನಕೇಶವ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲಿಂದ ಸಮಾವೇಶದ ವೇದಿಕೆ ತನಕ ತೆರದ ವಾಹನದಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಅಭ್ಯರ್ಥಿ ಪ್ರಜ್ವಲ್, ರೇವಣ್ಣ ದಂಪತಿ ಪ್ರಚಾರ ನಡೆಸಿದರು.

ದೇವೇಗೌಡರ ಭಾವನಾತ್ಮಕ ಭಾಷಣ
ಮೂಡಲಹಿಪ್ಪೆಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ದೇವೇಗೌಡರು, ಯಾವ ಸುದ್ದಿ ಮಾಧ್ಯಮ ನೋಡಿದರೂ ನಮ್ಮ ಕುಟುಂಬದ ವಿರುದ್ಧವೇ ಸುದ್ದಿ ಬರುತ್ತಿದೆ. ನಾನು ಕೇವಲ ನನ್ನ ಮಕ್ಕಳಿಗಾಗಿ ಹೋರಾಟ ಮಾಡುತ್ತೇನೆ ಎಂದು ಆರೋಪಿಸುತ್ತಾರೆ. ಆದರೆ, ನಾನು ಯಾರಿಗೆ ಮೋಸ ಮಾಡಿದ್ದೇನೆ ಹೇಳಿ ಎಂದು ನೆರೆದಿದ್ದವರನ್ನು ಪ್ರಶ್ನಿಸಿ ಕಣ್ಣೊರೆಸಿಕೊಂಡರು.

ರೇವಣ್ಣರನ್ನು ಹೊಗಳಿದ ದೇವೇಗೌಡರು
ನಿಮ್ಮ ಅಪೇಕ್ಷೆಯಂತೆ ನನ್ನ ಮೊಮ್ಮಗನನ್ನೇ ನಿಲ್ಲಿಸುವ ತೀರ್ಮಾನಕ್ಕೆ ಬಂದಿದ್ದೇನೆ.ಈ ಬಗ್ಗೆ ಹಲವು ಮುಖಂಡರ ಜೊತೆ ಈಗಾಗಲೇ ಮಾತಾಡಿ ತೀರ್ಮಾನ ಮಾಡಿದ್ದೇನೆ. ರೇವಣ್ಣ ಸ್ವಲ್ಪ ಕೋಪಿಷ್ಟ, ಕೋಪ ಬಿಟ್ಟರೆ ಅವನಂಥ ನಾಯಕನಿಲ್ಲ ಎಂದು ಮಗನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಪ್ಪನ ಮಾತು ಕೇಳಿಸಿಕೊಂಡ ರೇವಣ್ಣ ಅವರು ಕಣ್ಣೀರಿಟ್ಟರು.

ಪ್ರಜ್ವಲ್ ಮತ್ತು ಸೂರಜ್ ಲವಕುಶರಿದ್ದಂತೆ
ಪ್ರಜ್ವಲ್ ಗೆ ವಿದೇಶಕ್ಕೆ ಹೋಗಿ ವ್ಯಾಸಂಗ ಮಾಡು ಅಂತಾ ಹೇಳಿದ್ದೆ, ಅವನು ಹೋಗಲಿಲ್ಲ, ಸೂರಜ್ ಒಳ್ಳೆಯ ವೈದ್ಯನಾದ. ಪ್ರಜ್ವಲ್ ಮತ್ತು ಸೂರಜ್ ಲವಕುಶರಿದ್ದಂತೆ. ನಿಮ್ಮೆಲ್ಲರ ಆಶೀರ್ವಾದ ಪ್ರಜ್ವಲ್ ಮತ್ತು ಸೂರಜ್ ಮೇಲಿರಲಿ. ಅಣ್ಣ-ತಮ್ಮ ಇಬ್ಬರೂ ಒಟ್ಟಿಗೆ ಹೋಗಿ ಮೂಡಲಹಿಪ್ಪೆ ಚನ್ನಕೇಶವ ದೇಗುಲದಲ್ಲಿ ನಾಮಪತ್ರ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಅವರಿಗೆ ಒಳಿತಾಗಲಿ ಎಂದು ಹಾರೈಸಿದರು.

ಐದು ಹಳ್ಳಿಗಳಲ್ಲಿ ಸಾಂಕೇತಿಕ ಜೆಡಿಎಸ್ ಪ್ರಚಾರ ನಡೆಸಲಿದೆ
ಐದು ಹಳ್ಳಿಗಳಲ್ಲಿ ಸಾಂಕೇತಿಕ ಜೆಡಿಎಸ್ ಪ್ರಚಾರ ನಡೆಸಲಾಯಿತು. ಸಂಪ್ರದಾಯದಂತೆ ಪೂರ್ವ ದಿಕ್ಕಿಗೆ ತೆರಳಿ ಪ್ರಚಾರ ನಡೆಸಲಾಗುತ್ತದೆ. ಈ ವೇಳೆ ಜಿಲ್ಲೆಯ ಜೆಡಿಎಸ್ ಶಾಸಕರು, ಜೆಡಿಎಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications