Prajwal Revanna Pendrive Case: ಡಿ.ಕೆ.ಶಿವಕುಮಾರ್ ಅಪ್ಪಣೆ ಪಡೆದು ಕಾರ್ತಿಕ್ ವಿಡಿಯೋ ಹಂಚಿದ್ದಾನೆ: ಗಂಭೀರ ಆರೋಪ
ಮೈಸೂರು, ಮೇ, 07: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಬರೀ ರಾಜ್ಯ ಅಲ್ಲದೆ, ಇಡೀ ರಾಷ್ಟ್ರದಲ್ಲೇ ಸದ್ದು ಮಾಡುತ್ತಿದೆ. ಇನ್ನು ಪೆನ್ಡ್ರೈವ್ ಹಂಚಿದ್ದಾರೆ ಎನ್ನಲಾದ ಡ್ರೈವರ್ ಕಾರ್ತಿಕ್ನನ್ನು ಹೊರ ದೇಶಕ್ಕೆ ಕಳುಹಿಸಿದ್ದು ಕಾಂಗ್ರೆಸಿಗರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಪ್ಪಣೆ ಪಡೆದು ಕಾರ್ತಿಕ್ ಪೆನ್ಡ್ರೈವ್ ಹಂಚಿದ್ದಾನೆ ಎಂದು ಶಾಸಕ ಜಿ.ಟಿ.ದೇವೇಗೌಡ ಗಂಭಿರ ಆರೋಪ ಮಾಡಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾರನ್ನೂ ಬಂಧಿಸಬೇಕು, ಯಾರನ್ನು ಎ 1 ಮಾಡಬೇಕು, ಯಾರನ್ನು ಎ 2 ಮಾಡಬೇಕು ಎಂಬ ನಿರ್ದೇಶನ ಸಿಎಂ ಹಾಗೂ ಡಿಸಿಎಂ ಮಾಡುತ್ತಿದ್ದಾರೆ. ಹಾಲಿ ನ್ಯಾಯಾಧೀಶರ ಮೂಲಕ ನ್ಯಾಯಾಂಗ ತನಿಖೆ ಆಗಬೇಕು. ಡಿಸಿಎಂ ಈ ವಿಚಾರದಲ್ಲಿ ಸಂಪೂರ್ಣ ನೇತೃತ್ವ ವಹಿಸಿದ್ದಾರೆ. ಅವರು ಇದರಲ್ಲಿ ತಪ್ಪಿಸ್ಥರ ರೀತಿ ಕಾಣುತ್ತಿದ್ದಾರೆ ಎಂದು ದೂರಿದರು.

ಮಾಜಿ ಶಾಸಕ ಸಾರಾ ಮಹೇಶ್ ಮಾತನಾಡಿ, ಡಿಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವೆ ಸರ್ಕಾರ ಅವರನ್ನು ವಜಾ ಮಾಡಲಿ ಎಂದು ಆಗ್ರಹಿಸಿದರು. ಇನ್ನು ಎಚ್.ಡಿ.ರೇವಣ್ಣ ವಿರುದ್ಧ ಕೆ.ಆರ್.ನಗರದಲ್ಲಿ ಕೇಸ್ ದಾಖಲು ಆಗವುದಕ್ಕೆ ಮುಂಚೆಯೇ ಮಾಧ್ಯಮಗಳಿಗೆ ಹೇಗೆ ಗೊತ್ತಾಯ್ತು?. ತೋಟದಲ್ಲಿ ಆ ಮಹಿಳೆ ಇದ್ದರು ಎಂಬುದರ ಒಂದು ವೀಡಿಯೋ ಯಾಕೆ ಬಂದಿಲ್ಲ? ಸಂತ್ರಸ್ತ ಮಹಿಳೆ ತೋಟದಲ್ಲಿ ಸಿಕ್ಕಿಲ್ಲ ಎಂದು ಹೇಳಿದರು.
ಹುಣಸೂರಿನ ಕರಿಗೌಡ ರಸ್ತೆಯಲ್ಲಿ ಪವಿತ್ರ ಹರೀಶ್ ಅವರ ಮನೆಯಿಂದ ಸಂತ್ರಸ್ತ ಮಹಿಳೆಯನ್ನು ಪೊಲೀಸರು ಕರೆದು ಕೊಂಡು ಹೋಗಿದ್ದಾರೆ. ಪವಿತ್ರ ಹರೀಶ್ ಸಂತ್ರಸ್ತೆ ಮಹಿಳೆ ಸಂಬಂಧಿ. ಎಸ್ಐಟಿಯಲ್ಲಿ ಇರುವ ಕೆಲ ಅಧಿಕಾರಿಗಳು ಕಾಂಗ್ರೆಸನ ಕೈಗೊಂಬೆ ರೀತಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ಜೆಡಿಎಸ್ ಮುಖಂಡರನ್ನು ಹತ್ತಿಕುವ ಕೆಲಸ ಈ ಪ್ರಕರಣದ ಮೂಲಕ ಆಗುತ್ತಿದೆ. ಸಂತ್ರಸ್ತ ಮಹಿಳೆಯನ್ನು ಇನ್ನೂ ಯಾಕೆ ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ? ಆ ಸಂತ್ರಸ್ತ ಮಹಿಳೆಯನ್ನು ಎಲ್ಲಿಗೆ ಕರೆದುಕೊಂಡು ಹೋಗಿದ್ದೀರಾ?
ಎಸ್ಐಟಿ ಅಧಿಕಾರಿಗಳನ್ನು ಇಟ್ಟುಕೊಂಡು ನಮ್ಮ ನಾಯಕರನ್ನು ಹೆದರಿಸುವ ಕೆಲಸ ಮಾಡುತ್ತಿದೆ. ಪೆನ್ಡ್ರೈವ್ ಹಂಚಿದವರನ್ನು ಯಾಕೆ ಇನ್ನೂ ಬಂಧಿಸಿಲ್ಲ? ರಾಜಗೋಪಾಲ್ ತೋಟದಿಂದ ಸಂತ್ರಸ್ತ ಮಹಿಳೆಯನ್ನು ರಕ್ಷಿಸಿಲ್ಲ ಎಂದು ದೂರಿದರು.
ಇನ್ನು ಈ ವೇಳೆ ಶಾಸಕ ಜಿ.ಡಿ.ಹರೀಶ್ ಗೌಡ ಸೇರಿದಂತೆ ಇತರ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications