Prajwal Revanna: ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರಜ್ವಲ್ ರೇವಣ್ಣ ಹೇಳಿದ್ದಿಷ್ಟು
ಹಾಸನ, ಆಗಸ್ಟ್, 01: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಕ್ರಮ ಎಸಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಇಂದು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಅಲ್ಲದೆ ಪ್ರಜ್ವಲ್ ರೇವಣ್ಣ ಅವರು ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆದೇಶ ನೀಡಿದ್ದು, ಇದಕ್ಕೆ ಪ್ರಜ್ವಲ್ ರೇವಣ್ಣ ಅವರು ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಹೊಳೆನರಸೀಪುರದಲ್ಲಿ ಈ ಬಗ್ಗೆ ಮಾತನಾಡಿದ ಪ್ರಜ್ವಲ್ ರೇವಣ್ಣ ಅವರು, ಹೈಕೋರ್ಟ್ ತೀರ್ಪು ಕೊಟ್ಟಿದೆ ಎಂದು ಈಗ ನನಗೆ ಗೊತ್ತಾಯ್ತು. ಇನ್ನು ನನಗೆ ಪೂರ್ತಿ ವಿಚಾರ ತಿಳಿದಿಲ್ಲ. ಆದೇಶ ಕಾಫಿಯನ್ನು ನೋಡಿಲ್ಲ. ವಕೀಲರ ಜೊತೆ ಚರ್ಚಿಸಿದ ನಂತರ ತೀರ್ಮಾನಕ್ಕೆ ಬರುತ್ತೇನೆ ಎಂದು ಹೇಳಿದರು.

ನಮಗೆ ಪ್ರೊಸಿಡಿಂಗ್ಸ್ ಏನಾಗಿದೆ ಅನ್ನೋದು ಇನ್ನು ಗೊತ್ತಿಲ್ಲ. ಆದ್ದರಿಂದ ವಕೀಲರ ಜೊತೆ ಮೊದಲು ಮಾತನಾಡುತ್ತೇನೆ. ಈಗಾಗಲೇ ಅವರಿಗೆ ಕರೆ ಮಾಡಿದ್ದೇನೆ. ನಮ್ಮ ವಕೀಲರು ಬ್ಯುಸಿ ಇದ್ದೇನೆ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.
ಇನ್ನು ಎ ಮಂಜು ಅವರು ಏನು ಹೇಳಿಕೆ ಕೊಟ್ಟಿದ್ದಾರೆ ನನಗೆ ಗೊತ್ತಿಲ್ಲ. ಹಾಗೂ ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಅಂತಲೂ ಗೊತ್ತಿಲ್ಲ. ಅದನ್ನು ತಿಳಿದುಕೊಂಡ ನಂತರ ಪ್ರತಿಕ್ರಿಯಿಸುತ್ತೇನೆ. ಆದರೆ ಕೋರ್ಟ್ ಆದೇಶ ಕೊಟ್ಟಾಗ ಎಲ್ಲರೂ ಸ್ವೀಕಾರ ಮಾಡಲೇಬೇಕು. ಕಾನೂನಿಗಿಂತ ಮೇಲೆ ಯಾರೂ ಕೂಡ ಇಲ್ಲ ಎಂದರು.
ನಾನು ಬೇರೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರಿಂದ ಜಡ್ಜ್ಮೆಂಟ್ ಕಾಫಿಯನ್ನು ಇನ್ನು ನೋಡಿಲ್ಲ. ಜಡ್ಜ್ಮೆಂಟ್ ಕಾಫಿ ಬಂದ ನಂತರ ನಾನು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ಅಲ್ಲದೆ ದೊಡ್ಡವರು ರೇವಣ್ಣ ಸಾಹೇಬರು ಇಂದು ಹೊಳೆನರಸೀಪುರಕ್ಕೆ ಬರುತ್ತಿದ್ದಾರೆ. ಅವರ ಸಲಹೆಯನ್ನೂ ತೆಗೆದುಕೊಂಡು ಮುಂದುವರೆಯುತ್ತೇನೆ ಎಂದರು.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications