Preetham Gowda: ಭವಾನಿ ರೇವಣ್ಣ ಮತ್ತು ನನ್ನ ನಡುವೆ ಉತ್ತಮ ಅಕ್ಕ, ತಮ್ಮನ ಸಂಬಂಧವಿದೆ: ಪ್ರೀತಂ ಗೌಡ
ಹಾಸನ, ಏಪ್ರಿಲ್, 27: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೆ ರಾಜಕೀಯ ನಾಯಕರ ನಡುವೆಯೂ ವಾಕ್ಸಮರಗಳು ಹೆಚ್ಚಾಗುತ್ತಲೇ ಇವೆ. ಹಾಗೆಯೆ ಈ ಹಿಂದೆ ಹಾಸನ ಶಾಸಕ ಪ್ರೀತಂ ಗೌಡ ಅವರು ಭವಾನಿ ರೇವಣ್ಣ ಅವರನ್ನು ಬಾಯಿಗೆ ಬಂದಂತೆ ನಿಂದಿಸಿದ್ದರು. ಇದೀಗ ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನನ್ನ ಮತ್ತು ಭವಾನಿ ರೇವಣ್ಣ ಅವರ ನಡುವೆ ಉತ್ತಮ ಅಕ್ಕ, ತಮ್ಮನ ಸಂಬಂಧ ಇದೆ ಎಂದು ಹೇಳುವ ಮೂಲಕ ಜಾರಿಕೊಂಡಿದ್ದಾರೆ.
ಇನ್ನು ನವೆಂಬರ್ 1ರಂದು ಆಡಿದ ಮಾತಿಗೆ ಬದ್ಧರಾಗಿದ್ದೀರಾ ಅನ್ನುವ ಮಾದ್ಯಮಗಳ ಪ್ರಶ್ನೆಗೆ ಪ್ರೀತಂಗೌಡ ಅವರು ಗರಂ ಆಗಿದ್ದಾರೆ. ಭವಾನಿ ರೇವಣ್ಣ ನಶೆಯಲ್ಲಿ ಮಾತಾಡುತ್ತಾರೆ ಎಂದು ಟೀಕೆ ಮಾಡಿದ್ದೀರಿ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನೀವು ಕೇಳಿದಕ್ಕೆಲ್ಲಾ ಉತ್ತರ ಕೊಡಬೇಕಿಲ್ಲ. ನಾನು ಹೇಳಿದ್ದನ್ನು ಕೇಳಿ ಎಂದು ಗುಡುಗಿದರು.

ಅಲ್ಲದೆ ನಿಮ್ಮಿಷ್ಟದಂತೆ ನಾನು ಮಾತನಾಡುವುದಕ್ಕೆ ಆಗುವುದಿಲ್ಲ. ನನಗೆ ನನ್ನದೆ ಆದ ಇತಿ, ಮಿತಿ ಇದೆ. ಭವಾನಿ ರೇವಣ್ಣ ಅವರು ಅಭ್ಯರ್ಥಿ ಅಲ್ಲ, ಈಗ ಅವರ ವಿಚಾರ ಬೇಡ. ಅವರನ್ನು ಭೇಟಿಯಾದಾಗ ವಿಶ್ವಾದದಿಂದ ಮಾತನಾಡಿದ್ದೇನೆ. ಅವರು ಕೂಡ ವಿಶ್ವಾಸದಿಂದಲೇ ಮಾತನಾಡಿಸಿದ್ದಾರೆ. ಮತ್ತೆ ಭೇಟಿಯಾಗಿ ಮಾತಾಡುತ್ತೇನೆ, ಸ್ವರೂಪ್ ಅವರನ್ನ ಮಗ ಅಂದಿದ್ದಾರೆ. ನಾಳೆ ಪ್ರೀತಂಗೌಡ ತಮ್ಮ ಎಂದರೂ ಅಚ್ಚರಿಯಿಲ್ಲ. ಕಾರಣ ನಾನು ಬಾಯಿ ತುಂಬಾ ಅಕ್ಕ ಅಂತಾ ಕರೆಯುತ್ತೇನೆ ಎಂದರು.
ಭವಾನಿ ರೇವಣ್ಣ ನನ್ನ ನಡುವೆ ಉತ್ತಮ ಅಕ್ಕ, ತಮ್ಮನ ಸಂಬಂಧವಿದೆ. ಅವರು ನನ್ನನ್ನು ಭೇಟಿಯಾದಾಗ ಬಾಯಿ ತುಂಬಾ ತಮ್ಮ ಎಂದು ಕರೆಯುತ್ತಾರೆ.
— oneindiakannada (@OneindiaKannada) April 27, 2023
- ಹಾಸನ ಶಾಸಕ ಪ್ರೀತಂ ಗೌಡ#preethamgowda #preethamgowdaforhassan #bhavanirevanna #bjp #jds #KarnatakaElections2023 pic.twitter.com/RPPVPJ4Fax
ಹೊಂದಾಣಿಕೆ ಉತ್ತಮವಾದ ಬೆಳವಣಿಗೆ
ಸ್ವರೂಪ್ ನನ್ನ ಮಗ ಎಂಬ ಭವಾನಿ ರೇವಣ್ಣ ಹೇಳಿಕೆ ವಿಚಾರಕ್ಕೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದು, ಅವರ ಪ್ರೀತಿ ಸ್ವರೂಪ್ ಮೇಲಿದೆ, ಅದು ಎಲ್ಲಾರಿಗೂ ಗೊತ್ತಾಗಿದೆ. ಇಬ್ಬರೂ ಹೊಂದಾಣಿಕೆ ಮಾಡಿಕೊಂಡಿರುವುದು ಉತ್ತಮವಾದ ಬೆಳವಣಿಗೆ ಎಂದು ವ್ಯಂಗ್ಯವಾಡಿದರು.
ಅವರ ಪಕ್ಷದ ಹಿತದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯಾಗಿದೆ. ಆದರೆ 2024ಕ್ಕೆ ಅವರ ಮಗ ಎಂಪಿ ಅಭ್ಯರ್ಥಿ ಆಗುವುದರಿಂದ ಅವರು ಈ ಎಲ್ಲಾ ಸರ್ಕಸ್ ಮಾಡಬೇಕಾಗುತ್ತದೆ. ಅವರು ಚುನಾವಣೆ ಮಾಡುತ್ತಾ ಇರುವುದು 2023ರ ಜೆಡಿಎಸ್ ಅಭ್ಯರ್ಥಿ ಗೆಲ್ಲಲಿ ಅಂತಾ ಅಲ್ಲ. 2024ಕ್ಕೆ ಹಾಸನ ವಿಧಾನಸಭಾ ಕ್ಷೇತ್ರದಿಂದ ಚುನಾವಣೆ ಮಾಡೋದಕ್ಕೆ ಎಂದು ದೂರಿದರು.
ಕಾರ್ಯಕರ್ತರನ್ನು ಉಳಿಸಿಕೊಳ್ಳಬೇಕು ಅನ್ನುವ ಕಾರಣಕ್ಕೆ ಚುನಾವಣೆ ಮಾಡುತ್ತಿದ್ದಾರೆ. ಈಗ ಏನು ಮಾಡಿದರೂ ಜನಸಾಮಾನ್ಯರಿಗೆ ಅರ್ಥ ಆಗುತ್ತದೆ. ಮತ್ತೊಂದೆಡೆ ಬಿಟ್ಟೊಹೋಗಿದ್ದ ದತ್ತಣ್ಣನನ್ನ ವಾಪಸ್ ಎಲ್ಲರೂ ಹೋಗಿ ಕರೆದುಕೊಂಡು ಬಂದಿದ್ದು ಯಾಕೆ? ಎಂದು ಪ್ರಶ್ನಿಸಿದರು. ಹಾಗೆಯೆ ಹಾಸನದಲ್ಲಿ ಯಾರು ಅಭ್ಯರ್ಥಿ ಎಂದು ಕೇಳಿದರೆ ಅವರು ಹೆಸರು ಗೊತ್ತಿಲ್ಲ ಅಂತಾ ಹೇಳಿದ್ದರು. ಈಗ ನನ್ನ ಮಗ ಅಂತಾ ಹೇಳುತ್ತಿದ್ದಾರೆ ಎಂದು ಹರಿಹಾಯ್ದರು.
2024ರದ್ದು ಜ್ಞಾಪಕ ಆಗುತ್ತಿದೆ, 2023ರದ್ದು ಫಲಿತಾಂಶ ಮುಗಿದು ಹೋಗಿದೆ. 2024ಕ್ಕೆ ಉಳಿದುಕೊಳ್ಳಬೇಕು ಅಂದರೆ ಏನಾದರೂ ತಂತ್ರ ಮಾಡಬೇಕೆಂದು ಮಗ, ಅಮ್ಮ, ತಂದೆ, ತಾಯಿ ಈ ಎಲ್ಲಾ ಪದಗಳನ್ನು ಜ್ಞಾಪಕ ಮಾಡಿಕೊಳ್ಳುತ್ತಾ ಇದ್ದಾರೆ ಎಂದರು.
ಒಟ್ಟಿನಲ್ಲಿ ಅವರು ಅದೇ ರೀತಿ ಇದ್ದು ಪಕ್ಷದ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಲಿ. ಯಾಕೆಂದರೆ ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ ಇರಲೇಬೇಕು. ವಿರೋಧ ಪಕ್ಷ ಇರಲಿಲ್ಲ ಅಂದರೆ ಪರಿಣಾಮಕಾರಿಯಾಗಿ ಕೆಲಸ ಮಾಡುವುದಕ್ಕೆ ಆಗುವುದಿಲ್ಲ. ಹಾಗಾಗಿ ಅವರ ಪಕ್ಷದ ಬಗ್ಗೆ ಏನೂ ಮಾತನಾಡುವುದಿಲ್ಲ ಎಂದರು.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications