ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚನ್ನರಾಯಪಟ್ಟಣ ಠಾಣೆ ಪಿಎಸ್ ಐ ಕಿರಣ್ ಆತ್ಮಹತ್ಯೆ

By ಹಾಸನ ಪ್ರತಿನಿಧಿ
|
Google Oneindia Kannada News

ಹಾಸನ, ಜುಲೈ 31: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ನಗರ ಠಾಣೆಯ ಪಿಎಸ್ ಐ ಕಿರಣ್ ಕುಮಾರ್ ಅವರು ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಮಧ್ಯ ರಾತ್ರಿಯಷ್ಟೇ ಒಂದು ಕೊಲೆ ಪ್ರಕರಣ ಭೇದಿಸಿದ್ದ ಅವರು, ಆರೋಪಿ‌ ಬಂಧನ ಸಂಬಂಧ ಕಾರ್ಯಪ್ರವೃತ್ತರಾಗಿದ್ದರು. ಕೊಲೆ‌ ಸಂಬಂಧ ಕಾನೂನು ಪ್ರಕ್ರಿಯೆಯನ್ನು ಮುಗಿಸಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮನೆಗೆ ಬಂದಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ.

PSI Kiran Committed Suicide In Channarayapatna Town Of Hassan

 ಧಾರವಾಡ; ಉದ್ಯೋಗ ನಷ್ಟ, ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಧಾರವಾಡ; ಉದ್ಯೋಗ ನಷ್ಟ, ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಆತ್ಮಹತ್ಯೆಗೆ ನಿಖರ ಕಾರಣವಿನ್ನೂ ತಿಳಿದುಬಂದಿಲ್ಲ. ಆದರೆ ಎರಡು ದಿನಗಳ ಹಿಂದೆ ನಡೆದಿದ್ದ ಕೊಲೆಗಳಿಗೂ ಪಿಎಸ್ ಐ ಆತ್ಮಹತ್ಯೆಗೂ ಸಂಬಂಧವಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.ನಿನ್ನೆ, ಮೊನ್ನೆ ಎರಡು ದಿನ ಚನ್ನರಾಯಪಟ್ಟಣದಲ್ಲಿ ಇಬ್ಬರ ಹತ್ಯೆಯಾಗಿತ್ತು.

ಕಳೆದ ಎರಡು ದಿನಗಳಿಂದಲೂ ಕಿರಣ್ ಅವರು ಈ ಕೊಲೆಗಳ ಜಾಡು ಹಿಡಿದಿದ್ದರು. ಆದರೆ ಚನ್ನರಾಯಪಟ್ಟಣದ ಕೆಲವು ವಾಟ್ಸ್ ಆಪ್ ಗ್ರೂಪ್ ಗಳಲ್ಲಿ ಕೊಲೆಗೆ ಪೊಲೀಸರ ನಿರ್ಲಕ್ಷ್ಯ ಕಾರಣ ಎಂದು ಮೆಸೇಜ್ ಹರಿಬಿಡಲಾಗಿತ್ತು. ಈ ಕುರಿತು ಅಸಮಾಧಾನಗೊಂಡಿದ್ದರು ಕಿರಣ್ ಕುಮಾರ್, ತಮ್ಮನ್ನು ಸಸ್ಪೆಂಡ್ ಮಾಡಬಹುದು ಎಂದು ಸಹೋದ್ಯೋಗಿಯೊಟ್ಟಿಗೂ ಹೇಳಿಕೊಂಡಿದ್ದರು ಎಂದು ತಿಳಿದುಬಂದಿದೆ.

ಇಂದು ಚನ್ನರಾಯಪಟ್ಟಣಕ್ಕೆ ಐಜಿ-ಎಸ್ಪಿ ಭೇಟಿ ನೀಡಲಿದ್ದರು. ಆದರೆ ಅದಕ್ಕೂ ಮುನ್ನ ಕಿರಣ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸ್ ಅಧಿಕಾರಿಯ ಆತ್ಮಹತ್ಯೆಯಿಂದ ಪೊಲೀಸ್ ವಲಯದಲ್ಲಿ ದಿಗ್ಭ್ರಮೆ ಉಂಟಾಗಿದೆ.

English summary
PSI Kiran of Channarayapatnam city police station in Hassan district committed suicide today morning
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X