ಶಾಸ್ತ್ರ ಕೇಳಿದ್ದೇವೆ, ಕನ್ನಡಿಗರೇ ಮತ್ತೆ ಪ್ರಧಾನಿ ಅನ್ಬೇಡಿ; ಎ ಮಂಜು ಭರ್ಜರಿ ಟಾಂಗ್
ದೇವೇಗೌಡ ಕುಟುಂಬವನ್ನು ಟೀಕಿಸುತ್ತಲೇ ಬರುತ್ತಿರುವ ಕಾಂಗ್ರೆಸ್ ಮುಖಂಡ ಎ ಮಂಜು, ದೇವೇಗೌಡರು ಹಾಸನದಲ್ಲಿ ನಿಂತರೆ ಮಾತ್ರ ನಮ್ಮ ಬೆಂಬಲ, ಅವರ ಜಾಗಕ್ಕೆ ಬೇರೆಯವರನ್ನು ನಿಲ್ಲಿಸಿದರೆ, ನಾವು ಜೆಡಿಎಸ್ ಪರ ಪ್ರಚಾರ ಮಾಡುವುದಿಲ್ಲ ಎಂದಿದ್ದಾರೆ.
ಹಾಸನ, ಮಾರ್ಚ್ 9: ದೇವೇಗೌಡರ ಕುಟುಂಬವನ್ನು ಟೀಕಿಸುತ್ತಲೇ ಬರುತ್ತಿರುವ ಕಾಂಗ್ರೆಸ್ ಮುಖಂಡ ಎ ಮಂಜು, ದೇವೇಗೌಡರು ಹಾಸನದಲ್ಲಿ ನಿಂತರೆ ಮಾತ್ರ ನಮ್ಮ ಬೆಂಬಲ, ಅವರ ಜಾಗಕ್ಕೆ ಬೇರೆಯವರನ್ನು ನಿಲ್ಲಿಸಿದರೆ, ನಾವು ಜೆಡಿಎಸ್ ಪರ ಪ್ರಚಾರ ಮಾಡುವುದಿಲ್ಲ ಎಂದಿದ್ದಾರೆ.
ನಮ್ಮ ಪಕ್ಷದವರು ಮೊದಲು ಎಚ್ಚೆತ್ತುಕೊಳ್ಳಬೇಕು, ಎಲ್ಲೋ ಶಾಸ್ತ್ರ ನೋಡಿದ್ದೇವೆ, ಅದರಲ್ಲಿ ಕನ್ನಡಿಗರೇ ಮತ್ತೆ ಪ್ರಧಾನಿಯಾಗುವ ಅವಕಾಶವಿದೆ ಎಂದು ಹೇಳಿದರೆ ಕಷ್ಟ. ಅದಕ್ಕೆ ಕಾಂಗ್ರೆಸ್, ಈಗಲೇ ರಾಹುಲ್ ಗಾಂಧಿ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಎ ಮಂಜು, ಗೌಡ್ರಿಗೆ ಟಾಂಗ್ ನೀಡಿದ್ದಾರೆ.
ನಮ್ಮನ್ನು ಅಗಲಿರುವ ಅಂಬರೀಶ್ ಅವರಿಂದ ಹೆಚ್ಚಿನ ಲಾಭ ಪಡೆದುಕೊಂಡವರು ಜೆಡಿಎಸ್ ನವರು. ಈಗ ಅವರೇ, ಅಂಬಿ ಕುಟುಂಬದ ವಿರುದ್ದ ಮಾತನಾಡುತ್ತಿದ್ದಾರೆ. ಸಮಯಸಾಧಕ ರಾಜಕಾರಣ ಎಂದರೆ ಇದೇನೇ ಎಂದು ಮಂಜು ವಾಗ್ದಾಳಿ ನಡೆಸಿದ್ದಾರೆ.

ಹೆಣ್ಣಿನ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು, ಅದು ನಮ್ಮ ಸಂಸ್ಕೃತಿಗೆ ತೋರುವ ಅಗೌರವ. ನಮ್ಮ ಮಾನ್ಯ ಲೋಕೋಪಯೋಗಿ ಸಚಿವರು, ಮೊದಲು ಏಳನೇ ಕ್ಲಾಸ್ ಬುದ್ದಿಯನ್ನು ಬಿಡಬೇಕು ಎಂದು ಮಂಜು, ಕಿವಿಮಾತನ್ನು ಹೇಳಿದ್ದಾರೆ.
ನಿಖಿಲ್ ಕುಮಾರಸ್ವಾಮಿಗೆ ರಾಜಕೀಯ ಪ್ರಬುದ್ದತೆ ಅನ್ನೋದು ಇದೆಯಾ, ತಮ್ಮ ಕುಟುಂಬದವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಟ್ಟು, ಕಾರ್ಯಕರ್ತರಿಗೆ ಸಿನಿಮಾ ಟಿಕೆಟ್ ನೀಡುತ್ತಾರೆಂದು ಮಂಜು ವ್ಯಂಗ್ಯವಾಡಿದ್ದಾರೆ.
ತಮ್ಮ ಉದ್ದಾರಕ್ಕಾಗಿಯೇ ಗೌಡ್ರು ಸಮ್ಮಿಶ್ರ ಸರಕಾರಕ್ಕೆ ಓಕೆ ಅಂದಿದ್ದು. ಪಕ್ಷವಿದ್ದರೆ ಸರಕಾರ ಅನ್ನೋದನ್ನು ನಮ್ಮದೇ ಸಂಸದ ಡಿ ಕೆ ಸುರೇಶ್ ಮೊದಲು ಅರ್ಥ ಮಾಡಿಕೊಳ್ಳಲಿ ಎಂದು ಮಂಜು ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications