ಹಾಸನದಲ್ಲಿ ಗೋಲಿಬಾರ್ ಆದರೆ ಜಿಲ್ಲಾಧಿಕಾರಿ ಹೊಣೆ ಎಂದ ರೇವಣ್ಣ
Recommended Video
ಬೆಂಗಳೂರು, ಮೇ 8: ಹಾಸನದಲ್ಲಿ ಬರ ನಿರ್ವಹಣೆ ಕುರಿತು ಗರಂ ಆಗಿರುವ ಸಚಿವ ರೇವಣ್ಣ ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದ್ದಾರೆ.
ಹಾಸನದಲ್ಲಿ ಬುಧವಾರ ಮಾತನಾಡಿದ ಅವರು, ಬರ ನಿರ್ವಹಣೆ ಕುರಿತಂತೆ ಗೋಲಿಬಾರ್ ನಡೆದರೆ ಅಕ್ಕೆ ಜಿಲ್ಲಾಧಿಕಾರಿಯೇ ಹೊಣೆಯಾಗುತ್ತಾರೆ ಎಂದು ಗರಂ ಆಗಿಯೇ ನುಡಿದಿದ್ದಾರೆ.
ಬರಗಾಲವನ್ನು ನಿಭಾಯಿಸಲು ಎಂಟು ಕೋಟಿ ರೂ ನೀಡಲಾಗಿದೆ ಆದರೆ ಒಂದೇ ಒಂದು ಪೈಸೆಯಲ್ಲೂ ಖರ್ಚು ಮಾಡಿಲ್ಲ. ಈಗ ನೋಡಿದರೆ ಹಣವೇ ಬಂದಿಲ್ಲ ಎಂದು ಹೇಳುತ್ತಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ವಿರುದ್ಧ ಹರಿಹಾಯ್ದ ರೇವಣ್ಣ, ಬರಗಾಲ ನಿಭಾಯಿಸಬೇಕು ಎನ್ನುತ್ತಾರೆ. ಮತ್ತೊಂದು ಕಡೆ ಕೆಲಸವಾಗಬಾರದು ಎಂದು ಚುನಾವಣಾ ಆಯೋಗಕ್ಕೆ ನೀತಿ ಸಂಹಿತೆ ಎಂದು ಅರ್ಜಿ ಸಲ್ಲಿಸುತ್ತಿದ್ದಾರೆ. ಬರ ನಿಭಾಯಿಸುವುದು ಹೇಗೆ ಎಂದು ಮುಖ್ಯ ಚುನಾವಣಾ ಆಯುಕ್ತರೇ ಹೇಳಬೇಕು. ಮತ್ತು ಮುಖ್ಯ ಕಾರ್ಯದರ್ಶಿ ಗಮನಹರಿಸಬೇಕು ಎಂದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಮೇರಿ ಫ್ರಾನ್ಸಿಸ್, ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿಭಾಯಿಸುತ್ತಿದ್ದೇವೆ ಅನುದಾನವೂ ಸರಿಯಾಗಿಯೇ ಬಿಡುಗಡೆಯಾಗುತ್ತಿದೆ ಎಂದಿದ್ದಾರೆ.
ಟ್ಯಾಂಕರ್ಗಳಿಂದಲೂ ನೀರು ಪೂರೈಸುವ ಕಾರ್ಯ ನಡೆಯತ್ತಿದೆ. ಬರ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸುತ್ತಿದ್ದು, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮುಕ್ತಾಯದ ಹಂತದಲ್ಲಿದೆ.
ಅರಸೀಕೆರೆಯಲ್ಲಿ ಬಾಡಿಗೆ ನೀಡಿ ಕೊಳವೆ ಬಾವಿಗಳಿಂದ ನೀರು ಖರೀದಿಸಿ ಜನತೆಗೆ ಒದಗಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.












Click it and Unblock the Notifications