ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ?
Recommended Video

ಹಾಸನ, ಜೂನ್ 3: ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಮತ್ತೆ ಹಾಸನಕ್ಕೆ ಮರಳುವ ಸಾಧ್ಯತೆ ಇದೆ. ಕಾಂಗ್ರೆಸ್ ಸರ್ಕಾರವಿದ್ದಾಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ರಾಜ್ಯ ಪಶುಸಂಗೋಪನಾ ಸಚಿವ ಎ. ಮಂಜು ನಡುವಣ ವಾಕ್ಸಮರ ನಂತರ ಅವರನ್ನು ಹಾಸನದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.
ರೋಹಿಣಿ ಸಿಂಧೂರಿ ಜೆಡಿಎಸ್ ನಾಯಕರ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂಬುದು ಎ. ಮಂಜು ಅವರ ನಿರಂತರ ಆರೋಪವಾಗಿತ್ತು. ಚುನಾವಣಾ ದಿನಾಂಕ ಹತ್ತಿರವಾಗುತ್ತಿದ್ದಂತೆ ರೋಹಿಣಿ ಸಿಂಧೂರಿಯವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಈ ವರ್ಗಾವಣೆ ವಿರೋಧಿಸಿ ರೋಹಿಣಿ ಸಿಂದೂರಿ ಸಿಎಟಿ ಮೆಟ್ಟಿಲೇರಿದ್ದರು. ಮೊದಲಿಗೆ ವರ್ಗಾವಣೆಯನ್ನು ಸಿಎಟಿ ತಡೆ ಹಿಡಿಯಿತಾದರೂ ಕೊನೆಗೆ ರಾಜ್ಯ ಸರ್ಕಾರದ ಕೈ ಮೇಲಾಗಿ ಮತದಾನದ ಸಂದರ್ಭದಲ್ಲಿ ರೋಹಿಣಿ ಜಿಲ್ಲೆಯಿಂದ ಹೊರಗುಳಿಯುವಂತಾಗಿತ್ತು.

ಆದರೆ ಈಗ ಜೆಡಿಎಸ್ ಜಿಲ್ಲಾ ನಾಯಕರ ಪ್ರಕಾರ, ರೋಹಿಣಿ ಮತ್ತೆ ಜಿಲ್ಲಾಧಿಕಾರಿಯಾಗಿ ಮರಳುವುದು ಖಚಿತ. "ಹಾಸನದ ಅಭಿವೃದ್ಧಿ ಜೆಡಿಎಸ್ ನ ಭವಿಷ್ಯದ ದೃಷ್ಟಿಯಿಂದ ಮಹತ್ವ ಪೂರ್ಣವಾದದ್ದು. ಇಲ್ಲಿಗೆ ಓರ್ವ ದಕ್ಷ ಅಧಿಕಾರಿ ಬೇಕೆನ್ನುವುದು ಪಕ್ಷದ ಇರಾದೆ. ಹೀಗಾಗಿ ರೋಹಿಣಿ ಸಿಂಧೂರಿಯವರನ್ನು ಮತ್ತೆ ಜಿಲ್ಲಾಧಿಕಾರಿಯಾಗಿ ಮುಂದುವರಿಸುವುದು ಖಚಿತ. ಎ. ಮಂಜು ಜತೆಗಿನ ತಿಕ್ಕಾಟದ ಸಂದರ್ಭದಲ್ಲಿ ರೋಹಿಣಿಯನ್ನು ಬೆಂಬಲಿಸಿದ್ದು ಎಚ್.ಡಿ. ರೇವಣ್ಣ ಮಾತ್ರ," ಎಂದು ನೆನಪಿಸಿಕೊಳ್ಳುತ್ತಾರೆ ಪಕ್ಷದ ನಾಯಕರು.
ಮೂಲಗಳ ಪ್ರಕಾರ ಸಂಪುಟ ವಿಸ್ತರಣೆ ಬಳಿಕ ರಾಜ್ಯ ಸರ್ಕಾರ ಈ ಬಗ್ಗೆ ಅಂತಿಮ ನಿರ್ಧಾರವೊಂದನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications