ಸಕಲೇಶಪುರ-ಕುಕ್ಕೆ ಸುಬ್ರಮಣ್ಯ ರೈಲ್ವೆ ಮಾರ್ಗ ದುರಸ್ತಿ ಯಶಸ್ವಿ
ಹಾಸನ, ಆಗಸ್ಟ್ 22 : ಮಳೆ ಮತ್ತು ಗುಡ್ಡ ಕುಸಿತದಿಂದಾಗಿ ಹಾಸನದ ಸಕಲೇಶಪುರ ಮತ್ತು ಕುಕ್ಕೆ ಸುಬ್ರಮಣ್ಯ ಸಂಪರ್ಕಿಸುವ ರೈಲು ಮಾರ್ಗಕ್ಕೆ ಹಾನಿಯಾಗಿತ್ತು. ಮಾರ್ಗದ ದುರಸ್ತಿ ಕಾರ್ಯವನ್ನು ಇಲಾಖೆ ಪೂರ್ಣಗೊಳಿಸಿದೆ.
ರೈಲು ಮಾರ್ಗಕ್ಕೆ ಹಾನಿಯಾಗಿದ್ದರಿಂದ ಸಕಲೇಶಪುರ-ಕುಕ್ಕೆ ಸುಬ್ರಮಣ್ಯ ಮಾರ್ಗದಲ್ಲಿ ರೈಲು ಸಂಚಾರ ರದ್ದುಗೊಳಿಸಲಾಗಿತ್ತು. ಈಗ ಹಳಿಗಳ ದುರಸ್ತಿಯನ್ನು ಮಾಡಿ, ರೈಲ್ವೆಯ ಪ್ರಾಯೋಗಿಕ ಸಂಚಾರವನ್ನು ನಡೆಸಲಾಗಿದೆ.
ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ 3 ದಿನ ಸಂಚಾರ ಸ್ಥಗಿತ
ಹಳಿಗಳ ಮೇಲೆ ಗುಡ್ಡದ ಮಣ್ಣು ಕುಸಿದು ಬಿದ್ದಿತ್ತು, ಹಳಿಗಳ ಅಡಿ ಇರುವ ಮಣ್ಣು ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಸತತವಾಗಿ ಸುರಿಯುತ್ತಿರುವ ಮಳೆಯ ನಡುವೆಯೂ ಇಲಾಖೆಯ ಸಿಬ್ಬಂದಿ ಹಳಿಗಳ ದುರಸ್ತಿ ಕಾರ್ಯವನ್ನು ನಡೆಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ ರದ್ದು
ಸಕಲೇಶಪುರ-ಸುಬ್ರಮಣ್ಯ ನಡುವಿನ ಶಿರಿಬಾಗಿಲು ಬಳಿ ರೈಲ್ವೆ ಹಳಿ ಮೇಲೆ ಬಂಡೆ ಉರುಳುವ ಹಂತದಲ್ಲಿತ್ತು. ಬಂಡೆಯನ್ನು ಸ್ಫೋಟಿಸಿ, ಜೆಸಿಬಿ ಸಹಾಯದಿಂದ ಅವುಗಳನ್ನು ತೆರವುಗೊಳಿಸಲಾಗಿದೆ. ಈ ಕಾಮಗಾರಿ ಹಿನ್ನಲೆಯಲ್ಲಿ ಬೆಂಗಳೂರು-ಮಂಗಳೂರು ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿತ್ತು.
ಸೆ. 15ರಿಂದ ಹೊಸಪೇಟೆ-ಕೊಟ್ಟೂರು ಪ್ಯಾಸೆಂಜರ್ ರೈಲು ಸಂಚಾರ
ರೈಲ್ವೆ ಹಳಿಗಳಿಗೆ ಯಾವುದೇ ಅಪಾಯವಾಗಿಲ್ಲ. ಹಳಿಯ ಮೇಲೆ ಮಣ್ಣು ಕುಸಿದಿತ್ತು, ಅವುಗಳನ್ನು ತೆರವುಗೊಳಿಸಿ ರೈಲಿನ ಪ್ರಾಯೋಗಿಕ ಸಂಚಾರ ನಡೆಸಲಾಗಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.