ಹಾಸನಾಂಬೆ ದೇಗುಲದಲ್ಲಿ ಪುಂಡ-ಪೋಕರಿಗಳಿಗೆ ಸನ್ಮಾನ! ಜಿಲ್ಲಾಡಳಿತದ ವಿರುದ್ಧ ಆರೋಪ
ಹಾಸನ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಸನಾಂಬೆ ದೇವಿಯ ದರ್ಶನಕ್ಕೆ ಇಂದು ತೆರೆ ಬಿದ್ದಿದೆ. ಇನ್ನು ಪ್ರತಿ ವರ್ಷದಂತೆ ಈ ಬಾರಿಯೂ ಹಾಸನಾಂಬೆಯ ದರ್ಶನಕ್ಕೆ ಭಾರಿ ಭಕ್ತಸಾಗರ ಹರಿದುಬಂದಿತ್ತು. ಅಲ್ಲದೆ ಈ ಬಾರಿ ಈ ದೇಗುಲದಲ್ಲಿ ವಿಐಪಿ ಸಂಸ್ಕೃತಿ ಹೆಚ್ಚಾಗಿತ್ತು ಎಂದು ಹಲವರು ಆರೋಪಗಳನ್ನು ಮಾಡಿದ್ದಾರೆ.
ಅಲ್ಲದೇ ದೇವಸ್ಥಾನದಲ್ಲಿ ಯಾರೇ ಪುಂಡ, ಪೋಕರಿಗಳು ಬಂದರೂ ದೇವಾಲಯದ ಹಣದಲ್ಲಿ ಅವರಿಗೆ ಅದ್ಧೂರಿ ಸನ್ಮಾನ ಮಾಡಲಾಗಿದೆ ಎಂದು ಜಿಲ್ಲಾಡಳಿತದ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ರೇವಣ್ಣ ಕುಟುಂಬದ ಬಗ್ಗೆ ಹಲವು ಗಂಭೀರ ಆರೋಪಗಳನ್ನು ಮಾಡಿದ್ದ ಜಿ.ದೇವರಾಜೇಗೌಡ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದು, ಹಾಸನ ಜಿಲ್ಲಾಡಳಿತದ ವಿರುದ್ಧ ಹರಿಹಾಯ್ದಿದ್ದಾರೆ.

ಹಾಸನಾಂಬೆ ದೇವಿಯ ಹಣದಲ್ಲಿ ಯಾವುದೇ ಪರೋಡಿ, ಪೋಕರಿಗಳು ಬಂದ್ರೂ ಅವರನ್ನು ವಿಐಪಿ ಎಂದು ಸುಮಾರು 10 ಸಾವಿರ ರೂಪಾಯಿ ಶಾಲು ಹೊದಿಸಿ, ಸನ್ಮಾನ ಮಾಡಿದ್ದಾರೆ. ಹಾಸನಾಂಬೆ ತಾಯಿಯೇ ಎಲ್ಲರಿಗಿಂತ ಹಿರಿಯಳು. ಅವರಿಗಿಂತ ಇವರು ದೊಡ್ಡವರಾ? ಎಂದು ಆಕ್ರೋಶ ಹೊರಹಾಕಿದ್ದಾರೆ.
ಇನ್ನು ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ದರ್ಶನೋತ್ಸವಕ್ಕೆ ಇಂದು ತೆರೆಬಿದ್ದಿದೆ. ಅಶ್ವೀಜ ಮಾಸದಲ್ಲಿ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲು ತೆರೆಯಲಾಗುತ್ತದೆ. ಬಲಿಪಾಡ್ಯಮಿಯ ಮರುದಿನ ದೇಗುಲದ ಬಾಗಿಲು ಬಂದ್ ಮಾಡಲಾಗುತ್ತದೆ. ಈ ಬಾರಿ ಲಕ್ಷಾಂತರ ಮಂದಿ ಹಾಸನಾಂಬೆಯ ದರ್ಶನ ಪಡೆದುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ನಾಯಕರು ಹಾಗೂ ಸೆಲೆಬ್ರಿಟಿಗಳು ಕೂಡ ತಾಯಿಯ ದರ್ಶನ ಪಡೆದಿದ್ದಾರೆ.

ಈ ಬಾರಿ ಹಾಸನ ಜಿಲ್ಲಾಡಳಿತದ ವಿರುದ್ಧ ಭಕ್ತಾದಿಗಳು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಐಪಿಗಳ ಹೆಸರಿನಲ್ಲಿ ಯಾರ್ಯಾರೋ ಬಂದು ಸುಲಭವಾಗಿ ದೇಗುಲ ಪ್ರವೇಶಕ್ಕೆ ಅನುವು ಪಡೆಯುತ್ತಾರೆ. ನಾವೆಲ್ಲ ಕ್ಯೂ ನಿಂತು ಒದ್ದಾಡಬೇಕು ಎಂದು ಹರಿಹಾಯ್ದಿದ್ದರು. ಅಲ್ಲದೆ ವಿಐಪಿಗಳಿಗಾಗಿ ದೇವಾಲಯ ತೆರೆಯಲಾಗಿದೆಯೇ? ಎಂದೆಲ್ಲ ಪ್ರಶ್ನೆಗಳನ್ನು ಕೇಳಿದ್ದರು.
ದಾಖಲೆ ಆದಾಯ: ಅಕ್ಟೋಬರ್ 24ರ ಗುರುವಾರ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಓಪನ್ ಆಗಿತ್ತು. ಅಕ್ಟೋಬರ್ 25ರಿಂದ ನವೆಂಬರ್ 3ರ (ಇಂದು) ಮುಂಜಾನೆ 6 ಗಂಟೆಯವರೆಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಶಾಸಕ ಸ್ವರೂಪ್ ಪ್ರಕಾಶ್, ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಹಾಗೂ ಎಸ್ಪಿ ಮೊಹಮ್ಮದ್ ಸುಜಿತಾ ಸೇರಿದಂತೆ ಹಲವರ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಬಂದ್ ಆಗಲಿದೆ.
ಒಂಬತ್ತು ದಿನಗಳಲ್ಲಿ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ಮಂದಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ, ಹಾಸನಾಂಬ ದೇವಸ್ಥಾನಕ್ಕೆ 9 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಬಂದಿದೆ ಎಂದು ವರದಿಯಾಗಿದೆ. ಇನ್ನು ಇಂದಿನಿಂದ ಒಂದು ವರ್ಷಗಳ ಕಾಲ ದೇವಾಲಯದ ಬಾಗಿಲು ಮುಚ್ಚಿರುತ್ತದೆ. ಮುಂದಿನ ವರ್ಷ ಅಕ್ಟೋಬರ್ 9ರಿಂದ ಅಕ್ಟೋಬರ್ 23ರವರೆಗೆ ಹಾಸನಾಂಬೆಯ ದರ್ಶನ ಸಿಗಲಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications