Hemavathi Dam: ಜಲಾಶಯ ಭರ್ತಿಗೆ ಕೆಲವೇ ಅಡಿ ಬಾಕಿ, ಇಂದಿನ ಒಳಹರಿವು ಭಾರೀ ಹೆಚ್ಚಳ
ಬೆಂಗಳೂರು, ಜುಲೈ 19: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ 10 ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ ಉಪನದಿಗಳು ಅವುಗಳಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯಗಳಲ್ಲಿ ಅತ್ಯಧಿಕ ನೀರು ಸಂಗ್ರಹವಾಗಿದೆ. ಈ ಪೈಕಿ ಹೇಮಾವತಿ ಜಲಾಶಯದಲ್ಲೂ ಸಹ ಅತ್ಯಧಿಕ ಒಳಹರಿವು ದಾಖಲಾಗಿದೆ. ಇಂದು ಜುಲೈ 19ರಂದು ನೀರಿನ ಸಂಗ್ರಹ ಮಟ್ಟ ಎಷ್ಟಿದೆ, ಅಪ್ಡೇಟ್ ಮಾಹಿತಿ ಇಲ್ಲಿದೆ.
ಹೇಮಾವತಿ ನದಿಯು ಕಾವೇರಿ ಉಪನದಿಗಳಲ್ಲಿ ಒಂದಾಗಿದೆ. ಈ ನದಿಗೆ ಹಾಸನ ಜಿಲ್ಲೆಯ ಗೂರೂರು ಗ್ರಾಮದ ಬಳಿ ಜಲಾಶಯ ನಿರ್ಮಿಸಲಾಗಿದೆ. ಕರಾವಳಿ ಹಾಗೂ ಪಶ್ಚಿಮ ಘಟ್ಟಗಳ ಕಾಡು, ಕಣಿವೆಗಳಲ್ಲಿ ಕಳೆದ ಒಂದು ವಾರದಿಂದ ಹೆಚ್ಚು ಕಾಲ ಮಳೆ ಆರ್ಭಟಿಸುತ್ತಿದೆ. ನದಿ, ಕೊಳಗಳು ತುಂಬಿ ಹರಿಯುತ್ತಿವೆ. ಮುಂಗಾರು ಎಲ್ಲೆಡೆ ಆರ್ಭಟಿಸುತ್ತಿದೆ. ಕೊಡಗು, ಮಡಿಕೇರಿ, ಸೋಮವಾರಪೇಟೆ, ಮೈಸೂರು ಭಾಗಗಳಲ್ಲಿ ಜೋರು ಮಳೆಗೆ, ರಸ್ತೆಗಳು ಜಲಾವೃತಗೊಂಡಿವೆ. ರಸ್ತೆ ಸೇತುವೆಗಳು ನದಿಯ ರಭಕ್ಕೆ ಕೊಚ್ಚಿ ಹೋಗುತ್ತಿರುವುದು ಸಾಮಾನ್ಯ ಎಂಬಂತಾಗಿದೆ.

ಜಲಾಶಯ ಭರ್ತಿ ಕೆಲವೇ ಅಡಿಗಳು ಬಾಕಿ
ಈ ಹೇಮಾವತಿ ನದಿ ಜಲಾನಯನ ಪ್ರದೇಶಗಳಲ್ಲಿ ಅತ್ಯಧಿಕ ಮಳೆ ಆದ ಪರಿಣಾಮ ಹೇಮಾವತಿ ಜಲಾಶಯದ ಒಟ್ಟು ನೀರಿನ ಸಂಗ್ರಹಣೆ 2922 ಅಡಿಯಲ್ಲಿ ಸದ್ಯ 2916.10 ಅಡಿವರೆಗೆ ನೀರು ತುಂಬಿಕೊಂಡಿದೆ. ಈ ಜಲಾಶಯವು ಒಟ್ಟು 37.10 ಟಿಎಂಸಿ
ಸಾಮರ್ಥ್ಯ ಹೊಂದಿದೆ. ಈ ಪೈಕಿ 31.626 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ತಿಳಿಸಿದೆ.
35,871 ಕ್ಯೂಸೆಕ್ ಒಳಹರಿವು
ಇನ್ನೂ ಹೇಮಾವತಿ ಜಲಾಶಯದ ಶುಕ್ರವಾರ (ಜುಲೈ 19) ಒಳಹರಿವು ಬರೋಬ್ಬರಿ 35,871 ಕ್ಯೂಸೆಕ್ ಇದೆ. ಇಷ್ಟು ಪ್ರಮಾಣದ ನೀರು ಕಳೆದ ಒಂದು ವಾರದಲ್ಲೇ ಅತ್ಯಧಿಕ ಒಳಹರಿವು ಇದಾಗಿದೆ.
ಜಲಾಶಯದಿಂದ ಮೂಲಕ ನದಿಗೆ ಗಂಟೆಗೆ 1500 ಕ್ಯೂಸೆಕ್ಸ್ ನೀರು ಬಿಡಲಾಗುತ್ತಿದೆ. ಒಟ್ಟಾರೆಯಾಗಿ ನೋಡುವುದಾದರೆ, ಈ ಹೇಮಾವತಿ ಜಲಾಶಯದಲ್ಲಿ ಇದುವರೆಗೆ ಶೇಕಡಾ 85.24ರಷ್ಟು ನೀರು ಭರ್ತಿಯಾಗಿದೆ.
ಕಾವೇರಿ, ಹೇಮಾವತಿ, ಹಾರಂಗಿ, ಭದ್ರಾ ಸೇರಿದಂತೆ ವಿವಿಧ ಜಲಾನಯನ ಪ್ರದೇಶಗಳಲ್ಲಿ ಅತ್ಯಧಿಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನದಿಗಳು ಮೈದುಂಬಿ ಹರಿಯುತ್ತಿವೆ.
ರಾಜ್ಯಕ್ಕೆ ಐದು ದಿನ ಭಾರೀ ಮಳೆ ಮುನ್ಸೂಚನೆ
ಮುಂದಿನ ಐದು ದಿನ ಇದೇ ರೀತಿ ಮಳೆ ಮುಂದುವರಿಯಲಿದೆ. ಮಲೆನಾಡು ಹಾಗೂ ಕರಾವಳಿ ಭಾಗ ಸೇರಿ ಒಟ್ಟು ಆರು ಜಿಲ್ಲೆಗಳಿಗೆ ಅತ್ಯಧಿಕ ಮಳೆ ಬರಲಿದ್ದು, ಎರಡು ರೆಡ್ ಅಲರ್ಟ್ ನೀಡಲಾಗಿದೆ. ನಂತರ ಮೂರು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ ಕೆಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಕೊಡಲಾಗಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications