ಮಾಸಾಂತ್ಯಕ್ಕೆ ಕಾಮಗಾರಿ ಪೂರ್ಣ: ಜೂ.15ಕ್ಕೆ ಶಿರಾಡಿ ಸಂಚಾರಕ್ಕೆ ಮುಕ್ತ
ಸಕಲೇಶಪುರ, ಮೇ 21: ಮಂಗಳೂರು-ಬೆಂಗಳೂರು ನಡುವಿನ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮೇ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಜೂನ್ 15ರ ವೇಳೆಗೆ ವಾಹನ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ.
ಕಾಂಕ್ರೀಟ್ ರಸ್ತೆ ಕಾಮಗಾರಿ, ಇದೀಗ ಅಂತಿಮ ಹಂತ ತಲುಪಿದ್ದು, 2.3 ಕಿ.ಮೀ ಕೆಲಸ ಮಾತ್ರ ಬಾಕಿ ಉಳಿದಿದೆ. ಮಂಗಳೂರಿನ ಓಪನ್ ಕನ್ಸ್ಟ್ರಕ್ಷನ್ ಕಾಮಗಾರಿಯ ಗುತ್ತಿಗೆ ಪಡೆದಿದ್ದು, ಕಾಮಗಾರಿ ಅವಧಿ 18 ತಿಂಗಳಾಗಿದ್ದರೂ ನಾಲ್ಕೂವರೆ ತಿಂಗಳಲ್ಲಿ ಬಹುತೇಕ ಪೂರ್ಣಗೊಳಿಸಿದೆ.
ಕಳೆದ ಜನವರಿ 20ರಿಂದ ಈ ಭಾಗದಲ್ಲಿ ಸಂಚಾರ ನಿಷೇಧ ಮಾಡಲಾಗಿದ್ದು, ಐದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ ನೀಡಲಾಗಿತ್ತು. 12.38 ಕಿ.ಮೀ ಉದ್ದದ ಕೆಂಪುಹೊಳೆಯಿಂದ ಅಡ್ಡಹೊಳೆವರೆಗಿನ ರಸ್ತೆ ಕಾಂಕ್ರೀಟ್ ಕೆಲಸದಲ್ಲಿ ಗುಂಡ್ಯ ಗೇಟ್ ವರೆಗೂ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಅಲ್ಲಿಂದ ಅಡ್ಡಹೊಳೆ ಮಧ್ಯೆ ಸುಮಾರು 3 ಕಿ.ಮೀ ಭಾಗದಲ್ಲಿ ಬಿರುಸಿನಿಂದ ಕೆಲಸ ನಡೆಯುತ್ತಿದೆ.

ಮೂರು ಕಿರು ಸೇತುವೆ ಬಾಕಿ: ಒಟ್ಟು 74 ಮೋರಿಗಳ ಗುರಿ ಇರಿಸಲಾಗಿದ್ದು, ಎಲ್ಲವೂ ಪೂರ್ಣಗೊಂಡಿವೆ. ಆದರೆ ಮೂರು ಕಿರುಸೇತುವೆಗಳ ಕೆಲಸ ಪೂರ್ತಿಯಾಗಿಲ್ಲ. ಅದರ ಕೆಲಸ ನಡೆಯುತ್ತಿದೆ. ಈ ಸೇತುವೆಗಳ ಎರಡೂ ಭಾಗದ ಕೂಡು ರಸ್ತೆಗಳ ಕಾಂಕ್ರೀಟ್ ಕೆಲಸ ಬಾಕಿ ಉಳಿದಿದೆ. ಕೆಲ ದಿನಗಳಿಂದ ಮಳೆ ಸತತ ಸುರಿದಿರುವುದರಿಂದ ಕಾಮಗಾರಿ ವೇಗ ಒಂದಷ್ಟು ತಗ್ಗಿದೆ.
ಮೋಡ ಹಾಗೂ ಮಳೆ ಬರುವ ವಾತಾವರಣವಿದ್ದರೂ ಜರ್ಮನಿಯ ಅತ್ಯಾಧುನಿಕ ಸ್ಲಿಪ್ ಫಾರಂ ಪೇವರ್ ಯಂತ್ರದ ಮುಂದೆ ರಾಶಿ ರಾಶಿ ಕಾಂಕ್ರೀಟ್ ಅನ್ನು ಟಿಪ್ಪರ್ ತಂದು ಸುರಿಯುತ್ತಿದ್ದರೆ, ಬುಲ್ಡೋಜನರ್ ಅದನ್ನು ಮಟ್ಟವಾಗಿ ಹರಡಿಕೊಡುತ್ತಿದೆ.. ಸದ್ಯ 12.38 ಕಿ.ಮೀ ಒಟ್ಟು ಕಾಮಗಾರಿಯಲ್ಲಿ 2,299 ಮೀಟರ್ ಕಾಮಗಾರಿ ಮಾತ್ರ ಬಾಕಿ ಇದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications