ಶಿರಾಡಿಘಾಟ್: ಮೇ ಅಂತ್ಯದಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ
ಸಕಲೇಶಪುರ, ಏಪ್ರಿಲ್ 19: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿರಾಡಿ ಘಾಟ್ ರಸ್ತೆಯ 2 ನೇ ಹಂತದ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹಂತಕ್ಕೆ ಬಂದು ತಲುಪಿದೆ. ಮೇ ಅಂತ್ಯದೊಳಗೆ ಪೂರ್ಣಗೊಂಡು ಹೆದ್ದಾರಿ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ.
ಸಮರೋಪಾದಿಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಈಗಾಗಲೇ 9.5ಕಿ.ಮೀ ರಸ್ತೆ ಕಾಮಗಾರಿ ಮುಗಿದಿದೆ. ಇನ್ನುಳಿದ ಕಾಮಗಾರಿ ಪ್ರಗತಿಯಲ್ಲಿದೆ. ಮಳೆಗಾಲ ಪ್ರಾರಂಭವಾಗುವುದರೊಳಗಾಗಿ ಕಾಮಗಾರಿ ಮುಗಿಸುವ ಉದ್ದೇಶವಿಟ್ಟುಕೊಂಡು ಕೆಲಸ ಪ್ರಾರಂಭಿಸಿದ ಮಂಗಳೂರಿನ ಓಷಿಯನ್ ಕನ್ಸ್ಟ್ರಕ್ಷನ್ ಕಂಪನಿ, ನಿಗದಿತ ಗುರಿಗಿಂತ 2 ತಿಂಗಳು ಮೊದಲೇ ಕಾಮಗಾರಿ ಮುಗಿಸುವ ಉತ್ಸಾಹದಲ್ಲಿದೆ, ಕಳೆದ ವರ್ಷ ಕಾಮಗಾರಿ ಮಾಡಿರುವ ಅನುಭವ ಮತ್ತು ಆಗಿಂದಾಗ್ಗೆ ಮಳೆ ಸಮಸ್ಯೆ ಇಲ್ಲದ ಕಾರಣ ಅವಧಿಗಿಂತ ಬೇಗನೆ ಕಾಮಗಾರಿ ಮುಗಿಯಲಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
13ಕಿಮೀ 78 ಕೋಟಿ ರೂ.ವೆಚ್ಚ: ಕೆಂಪು ಹೊಳೆಯಿಂದ ಗುಂಡ್ಯ ತನಕ 13ಕಿ.ಮೀ ರಸ್ತೆ ನಿರ್ಮಾಣಕ್ಕೆ 78 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ 3 ಸೇತುವೆಗಳ ಸಾಮರ್ಥ್ಯವನ್ನು ಹೆಚ್ಚಿಸುವುದು ಮತ್ತು ಒಂದು ಹೊಸ ಸೇತುವೆ ನಿರ್ಮಾಣವಾಗಲಿದೆ. 74 ಕಡೆಗಳಲ್ಲಿ ಚರಂಡಿ ಕೆಲಸವನ್ನು ಈಗಾಗಲೇ ಮುಗಿಸಲಾಗಿದೆ. ಹೊಳೆ ಬದಿಗೆ ತಡೆಗೋಡೆ ನಿರ್ಮಾಣ ಕಾಮಗಾರಿ ಮಾತ್ರ ನಡೆಯುತ್ತಿದೆ.

ಸುರಂಗ ಯೋಜನೆ ಕನಸು: ಜಪಾನ್ ತಾಂತ್ರಿಕತೆ ಮತ್ತು ನೆರವು ಬಳಸಿಕೊಂಡು ಸುರಂಗ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಸಕಲೇಶಪುರ ಭಾಗದಿಂದ ಗುಂಡ್ಯ ತನಕ ಹಲವು ಗುಡ್ಡಗಳನ್ನು ಆಯ್ದು ಹೋಗುವ ಈ ಸುರಂಗ ಮಾರ್ಗದ ಉದ್ದ 18 ಕಿ.ಮೀ ಇರಲಿದೆ.
ಎರಡು ವಾಹನಗಳು ಚಲಿಸಲು ಅನುಕೂಲವಾಗುವಂತೆ ದ್ವಿಪಥ ಹೊಂದಿರುವ ಸುರಂಗ ನಿರ್ಮಾಣ 100.ಕಿ.ಮೀ ವೇಗದಲ್ಲಿ ವಾಹನಗಳು ಚಲಿಸಲು ಅನುಕೂಲವಾಗುವಂತೆ ಮಾಡಲು ಉದ್ದೇಶಿಸಲಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications