ಮಹಾಮಸ್ತಕಾಭಿಷೇಕ ಕಾಮಗಾರಿಗೆ ಸಿಎಂ ಶಿಲಾನ್ಯಾಸ
ವಿಂಧ್ಯಗಿರಿ ಪರ್ವತದಲ್ಲಿರುವ ಜೈನರ ಮಹಾಮುನಿ ಬಾಹುಬಲಿಯ 57 ಅಡಿ ಎತ್ತರದ ಬೃಹತ್ ಏಕಶಿಲಾ ಪ್ರತಿಮೆ ಸ್ಥಾಪನೆಯಾಗಿದ್ದು 983ರಲ್ಲಿ. ಬೆಂಗಳೂರಿನಿಂದ 143 ಕಿ.ಮೀ. ದೂರದಲ್ಲಿರುವ ಈ ಸುಂದರ ಮೂರ್ತಿಗೆ 2006ರಲ್ಲಿ ಮಹಾಮಸ್ತಿಕಾಭಿಷೇಕವಾಗಿತ್ತು.
ಹಾಸನ, ಏಪ್ರಿಲ್ 24 : ಶ್ರವಣಬೆಳಗೊಳದಲ್ಲಿ 2018ರಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕದ ಸಿದ್ದತೆಗಳು ಭರದಿಂದ ಸಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಸ್ತಕಾಭಿಷೇಕ್ಕಾಗಿ 171.73 ಕೋಟಿ ರುಪಾಯಿಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.
ಪ್ರತಿ 12 ವರ್ಷಗಳಿಗೊಮ್ಮೆ ಗೊಮ್ಮಟೇಶ್ವರನಿಗೆ ನಡೆಯುವ ಮಹಾಮಸ್ತಕಾಭಿಷೇಕ 2018ರ ಫೆಬ್ರವರಿಯಲ್ಲಿ ಜರುಗಲಿದೆ. ಈ ವೈಭವದ ಆಚರಣೆಯನ್ನು ಕಣ್ತುಂಬಿಕೊಳ್ಳಲು ದೇಶವಿದೇಶಗಳಿಂದ ಲಕ್ಷಾಂತರ ಜನರು ಬರಲಿದ್ದು, ಇದಕ್ಕಾಗಿ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. [2018ಕ್ಕೆ ಮಹಾಮಸ್ತಕಾಭಿಷೇಕ, ಗಿನ್ನೆಸ್ ದಾಖಲೆಗೆ ಸೋನಾಕ್ಷಿ ಸಿನ್ಹಾ]

ಈ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ, ಉಪರಾಷ್ಟ್ರಪತಿ, ಕೇಂದ್ರ ಸಚಿವರು, ದಿಗಂಬರ ಮುನಿಗಳು ಶ್ರವಣಬೆಳಗೊಳಕ್ಕೆ ಬರಲಿದ್ದಾರೆ. ಈ ಉತ್ಸವವನ್ನು ಯಶಸ್ವಿಯಾಗಿಸಲು ಸಿದ್ದರಾಮಯ್ಯನವರು ಖುದ್ದು ಆಸಕ್ತಿ ತೋರಿಸಿದ್ದಾರೆ.
ಕಳೆದ ಬಾರಿ ಹಣಕಾಸು ಸಚಿವನಾಗಿ ಮಹಾಮಸ್ತಕಾಭಿಷೇಕಕ್ಕೆ ಹಣ ಕೊಟ್ಟಿದ್ದೆ. ಮಹಾಮಸ್ತಕಾಭಿಷೇಕಕ್ಕೆ ಬರಲು ಅವಕಾಶ ಇರಲಿಲ್ಲ. ಆದರೆ ಈ ಬಾರಿ ನಾನೇ ನಿಂತು ಮಹಾಮಸ್ತಕಾಭಿಷೇಕ ಯಶಸ್ಸಿಗೆ ಶ್ರಮಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಹೇಳಿದರು. [ಶ್ರವಣಬೆಳಗೊಳದಲ್ಲಿ 2018ಕ್ಕೆ ಮಹಾಮಸ್ತಕಾಭಿಷೇಕ]

ಮುಖ್ಯಮಂತ್ರಿಗಳ ಜೊತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಸಚಿವರಾದ ಎ ಮಂಜು, ಶ್ರವಣಬೆಳಗೊಳ ಜೈನ ಮಠಾಧೀಶರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ಗಣ್ಯರು ಉಪಸ್ಥಿತರಿದ್ದರು. ಶ್ರವಣಬೆಳಗೊಳದಲ್ಲಿ ಕಾರ್ಯಕ್ರಮ ಜರುಗಿತು.

ವಿಂಧ್ಯಗಿರಿ ಪರ್ವತದಲ್ಲಿರುವ ಜೈನರ ಮಹಾಮುನಿ ಬಾಹುಬಲಿಯ 57 ಅಡಿ ಎತ್ತರವಿರುವ ಬೃಹತ್ ಏಕಶಿಲಾ ಪ್ರತಿಮೆ ಸ್ಥಾಪನೆಯಾಗಿದ್ದು ಕ್ರಿಸ್ತಶಕ 983ರಲ್ಲಿ. ಬೆಂಗಳೂರಿನಿಂದ 143 ಕಿ.ಮೀ. ದೂರದಲ್ಲಿರುವ ಈ ಸುಂದರ ಮೂರ್ತಿಗೆ 2006ರಲ್ಲಿ ಮಹಾಮಸ್ತಿಕಾಭಿಷೇಕವಾಗಿತ್ತು.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications