ಜಮಾತ್ನಿಂದ ಉಚ್ಛಾಟನೆ: ಕೋಪಕ್ಕೆ ಮಸೀದಿಗಳನ್ನೇ ಟಾರ್ಗೆಟ್ ಮಾಡಿದ ಚೋರ!
ಹಾಸನ, ಜೂನ್ 6: ಮಸೀದಿಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನನ್ನು ಅರಸೀಕೆರೆ ನಗರ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮೊಹಮ್ಮದ್ ಸುಹೇಬ್ (35) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಬಂಧಿತನಿಂದ 7 ಆಂಪ್ಲಿಪ್ಲೇಯರ್, 6 ಸಿಸಿ ಕ್ಯಾಮೆರಾಗಳು, 1 ಕಂಪ್ಯೂಟರ್, 1 ಟಿವಿ, 1 ಸೌಂಡ್ ಮಿಕ್ಸರ್, 2 ಸ್ಪೀಕರ್, 2 ಮಾನಿಟರ್, 1 ಡಿವಿಆರ್, ಬೀಗ ಹೊಡೆಯಲು ಬಳಸುತ್ತಿದ್ದ ಕಬ್ಬಿಣದ ರಾಡ್, 2 ಸ್ಪೀಕರ್ ಇರುವ ಹೋಂ ಥಿಯೇಟರ್, ಸಿಸಿ ಕ್ಯಾಮೆರಾ ಸ್ವಿಚ್, ಒಂದು ಮಾನಿಟರ್, ಕ್ಯಾನೆನ್ ಕ್ಯಾಮೆರಾ ಸೇರಿದಂತೆ ಒಟ್ಟು 5,35,000 ರೂ ಬೆಲೆಯ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ಮೊಹಮ್ಮದ್ ಸುಹೇಬ್ ಮೈಸೂರಿನ ಇಲವಾಲದ ರಬ್ಬಾನಿ ಮಸೀದಿ, ಬಿಳಿಕೆರೆಯ ಈದ್ಗಾ ಮಸೀದಿ, ಪಿರಿಯಾಪಟ್ಟಣದ ಪಿರ್ದೋಸ್ ಮಸೀದಿ, ಹಳೆ ಹುಣಸೂರಿನ ಗೌಸಿಯಾ ಮಸೀದಿ, ಕೆ.ಆರ್.ನಗರದ ಜಾಮೀಯಾ ಮಸೀದಿ, ಹಾಸನದ ಕುಬಾ ಮಸೀದಿ ಮತ್ತು ಗುಜರಾತಿ ದರ್ಗಾ, ಗಂಡಸಿಯ ಮದಿನಾ ಮಸೀದಿ, ಅರಸೀಕೆರೆ ನಗರದ ಜಾಮೀಯಾ ಮಸೀದಿ ಮತ್ತು ಖಾದರ್ ಚಾವಲಿ ದರ್ಗಾಗಳಲ್ಲಿ ಕಳ್ಳತನ ಮಾಡಿದ್ದ ಎನ್ನುವುದು ಪೊಲೀಸ್ ಕಾರ್ಯಾಚರಣೆಯಲ್ಲಿ ತಿಳಿದು ಬಂದಿದೆ.
ಈ ಬಗ್ಗೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ಕಳ್ಳತನ ಪ್ರಕರಣದಲ್ಲಿ ಆರೋಪಿ ಮೊಹಮ್ಮದ್ ಸುಹೇಬ್ನನ್ನು ಬಂಧಿಸಲಾಗಿದೆ. ಆರೋಪಿ ಹತ್ತು ಮಸೀದಿ ಹಾಗೂ ದರ್ಗಾಗಳಲ್ಲಿ ಕಳ್ಳತನ ಮಾಡಿರುವ ಮಾಹಿತಿ ಇದೆ. ಒಟ್ಟು ಎಂಟು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂದಿದ್ದಾರೆ.

ಇನ್ನು ಆರೋಪಿ ಕಳ್ಳತನ ಮಾಡಿದ ವಸ್ತುಗಳನ್ನು ಶ್ರೀರಂಗಪಟ್ಟಣದ ಮನೆಯೊಂದರಲ್ಲಿ ಇಟ್ಟು ನಂತರ ಮಾರಾಟ ಮಾಡುತ್ತಿದ್ದ. ಮೊಹಮ್ಮದ್ ಸುಹೇಬ್ ಸುನ್ನತ್ ಬೀದಿ, ವಿರಾಜಪೇಟೆಯವನು. ಮದುವೆಯಾದ ನಂತರ ಈತನನ್ನು ಜಮಾತ್ನಿಂದ ಉಚ್ಛಾಟನೆ ಮಾಡಲಾಗಿತ್ತು. ಇದರಿಂದ ಕೋಪಗೊಂಡಿದ್ದ ಮೊಹಮ್ಮದ್ ಸುಹೇಬ್ ದರ್ಗಾ, ಮಸೀದಿಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡಿದ್ದಾನೆ ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications