ಹೇಮಾವತಿ ನದಿಯಿಂದ ತುಮಕೂರು ಜಿಲ್ಲೆಗೆ 2 ಟಿಎಂಸಿ ನೀರು
ಬೆಂಗಳೂರು/ಹಾಸನ, ಜನವರಿ 7: ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದಿಂದ ಸುಮಾರು 2 ಟಿಎಂಸಿ ಅಡಿಗಳಷ್ಟು ನೀರನ್ನು ತುಮಕೂರು ಜಿಲ್ಲೆಯ ವಿವಿಧ ಭಾಗಗಳಿಗೆ ಹರಿಸಲು ನಿರ್ಧರಿಸಲಾಗಿದೆ. ಕುಡಿಯುವ ನೀರು ಮತ್ತು ಕೆರೆಗಳಿಗೆ ನೀರು ತುಂಬಿಸಲು ಹೇಮಾವತಿ ನದಿನೀರು ಬಳಕೆಯಾಗಲಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರು ಹಂಚಿಕೆ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಹೇಮಾವತಿ ಜಲಾಶಯದಿಂದ ನೀರು ಹಂಚಿಕೆ ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ತುಮಕೂರು ಜಿಲ್ಲೆಗೆ ನೀರಿನ ಕೊರತೆ ಆಗುತ್ತಿದೆ. ಅಲ್ಲದೆ, ಅಲ್ಲಿ ನೀರು ವ್ಯರ್ಥವಾಗಿ ಹರಿದು ಹೋಗುತ್ತಿರುವುದು ಕಂಡು ಬಂದಿದೆ. ನೀರು ವ್ಯರ್ಥವಾಗುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಕಾನೂನು ಚೌಕಟ್ಟಿನಲ್ಲಿ ಹಂಚಿಕೆಯಾಗಿರುವ ನೀರನ್ನು ಬಳಕೆ ಮಾಡಿಕೊಳ್ಳಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ. ತುಮಕೂರಿಗೆ 23 ಟಿಎಂಸಿ ನೀರು ಬಿಡಲಾಗಿದೆ ಎಂದು ಸಚಿವರು ಹೇಳಿದರು.

ನೀರಿನ ಲಭ್ಯತೆಗೆ ತಕ್ಕಂತೆ ಬೆಳೆ
15 ದಿನಗಳಲ್ಲಿ 2 ಟಿಎಂಸಿ ನೀರು ತುಮಕೂರಿಗೆ ಬಿಡಬೇಕಿದೆ. ನೀರು ಕಾಲುವೆಗಳಿಗೆ ಸೇರದೆ ಪೋಲಾಗುತ್ತಿದೆ. ಹಾಗಾಗಿ ನಾಲೆಗಳನ್ನು ಆಧುನೀಕರಣಗೊಳಿಸಬೇಕಿದೆ. ನೀರಿನ ಲಭ್ಯತೆಗೆ ಅನುಗುಣವಾಗಿ ಬೆಳೆ ಬೆಳೆಯಬೇಕು. ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಶಿವಕುಮಾರ್ ತಿಳಿಸಿದರು.

23 ಟಿಎಂಸಿ ನೀರು ಹರಿಸಲಾಗಿದೆ
ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಮಾತನಾಡಿ, ತುಮಕೂರು ಜಿಲ್ಲೆಯ ನಾಲೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ಬಿಡುತ್ತಿಲ್ಲ ಎಂದು ಮಾಜಿ ಸಂಸದ ಜಿ.ಎಸ್.ಬಸವರಾಜು ಮಾಡಿರುವ ಆರೋಪ ನಿರಾಧಾರ ಎಂದರು.
ನಾವು ಅಧಿಕಾರಕ್ಕೆ ಬಂದ ನಂತರ ಕಾನೂನು ಬದ್ಧವಾಗಿ ಇದುವರೆಗೆ 23 ಟಿಎಂಸಿ ನೀರು ಹರಿಸಲಾಗಿದೆ. ಬಾಕಿ ಇರುವ ಎರಡು ಟಿಎಂಸಿ ನೀರನ್ನೂ ಕೊಡುತ್ತೇವೆ. ಇನ್ನೆರಡು ತಿಂಗಳಲ್ಲಿ ಬೇಸಿಗೆ ಇದೆ, ಬಾಕಿ ನೀರನ್ನು ಈಗಲಾದರೂ ಪಡೆದುಕೊಳ್ಳಿ ಆನಂತರವಾದರೂ ಪಡೆದುಕೊಳ್ಳಲಿ, ನಮ್ಮದೇನು ಅಭ್ಯಂತರವಿಲ್ಲ ಎಂದರು.

ಸಂಸದ ಬಸವರಾಜು ವಿರುದ್ಧ ರೇವಣ್ಣ ಆಕ್ರೋಶ
ಅಗತ್ಯವಿದ್ದಲ್ಲಿ ಹೇಮಾವತಿ ಅಣೆಕಟ್ಟಿನ ಕೀಲಿ ಕೈಯನ್ನು ಸಂಸದ ಜಿಎಸ್ ಬಸವರಾಜು ಅವರೇ ಇಟ್ಟುಕೊಳ್ಳಲಿ. ಯಾವಾಗ ಬೇಕೋ ಆಗ ನೀರು ತೆಗೆದುಕೊಳ್ಳಲಿ. ನಂತರ, ಕುಡಿಯುವ ನೀರಿಗೆ ತೊಂದರೆ ಎದುರಾದರೇ ಅದಕ್ಕೆ ನಾವು ಜವಾಬ್ದಾರರಲ್ಲ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ನೀರಿನ ವಿಷಯದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರಿಗೆ ಹೇಮಾವತಿ ನದಿ ನೀರಿನ ಆಸರೆ
ಹೇಮಾವತಿ ಜಲಾಶಯದ ಗರಿಷ್ಟ ಎತ್ತರ 146 ಅಡಿಗಳು (ತಳಪಾಯದ ಮೇಲ್ಮಟ್ಟದಿಂದ). ಅಣೆಕಟ್ಟೆಯಲ್ಲಿ 37.103 ಟಿಎಂಸಿ ನೀರನ್ನು ಸಂಗ್ರಹಣೆ ಮಾಡಬಹುದಾಗಿದೆ.
ಹೇಮಾವತಿ ಜಲಾಶಯ ಹೇಮಾವತಿ ಎಡದಂಡೆ ನಾಲೆ, ನಾಗಮಂಗಲ ಶಾಖಾ ನಾಲೆ, ತುಮಕೂರು ಶಾಖಾ ನಾಲೆ, ಹೇಮಾವತಿ ಬಲದಂಡೆ ನಾಲೆ, ಹೇಮಾವತಿ ಬಲಮೇಲ್ದಂಡೆ ನಾಲೆ ಎಂಬ 5 ನಾಲೆಗಳನ್ನು ಹೊಂದಿದೆ.ಜಲಾಶಯ ಹಾಸನ ಜಿಲ್ಲೆ ಮಾತ್ರವಲ್ಲದೇ ಮಂಡ್ಯ, ಮೈಸೂರು ಜಿಲ್ಲೆಗಳ 6,720 ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸುತ್ತದೆ. ವಿವಿಧ ನೀರಾವರಿ ಯೋಜನೆ ಸೇರಿ ಜಲಾಶಯ 7 ಲಕ್ಷ ಎಕರೆ ಅಚ್ಚುಕಟ್ಟು ಹೊಂದಿದೆ.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications