ಬೆಣ್ಣೆ ತಿಂದು ಇತರರ ಮುಖಕ್ಕೆ ಒರೆಸಬೇಡಿ: ಶೋಭಾ ಕರಂದ್ಲಾಜೆ
ಹಾಸನ, ಅಕ್ಟೋಬರ್, 25: ಶಕ್ತಿ ಕೇಂದ್ರ ವಿಧಾನಸೌಧದ ಪ್ರವೇಶ ದ್ವಾರದಲ್ಲಿ ಪತ್ತೆಯಾದ ದಾಖಲೆಯಿಲ್ಲದ 1.97ಕೋಟಿ ರೂ. ಹಣಕ್ಕೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಯಾವುದೇ ಸಂಬಧವಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಇಲ್ಲಿನ ಹಾಸನಾಂಬೆ ದೇಗುಲಕ್ಕೆ ಮಂಗಳವಾರ ಭೇಟಿ ನಿಡಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. "ಎಚ್.ಡಿ. ಕುಮಾರಸ್ವಾಮಿಯವರು ಕೀಳು ಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ. ಹಣಕ್ಕೂ ಯಡಿಯೂರಪ್ಪ ಅವರಿಗೂ ಯಾವುದೇ ಸಂಬಂಧವಿಲ್ಲ" ಎಂದು ಶೋಭಾ ಕರಂದ್ಲಾಜೆ ಅವರು ಕಿಡಿ ಕಾರಿದರು . [ವಿಧಾನಸೌಧಕ್ಕೆ ಬಂದ ಕಾರಿನಲ್ಲಿ 2.5 ಕೋಟಿ, ಸಚಿವರಿಗೆ ದಕ್ಷಿಣೆ ಕಾಸಾ?]
"ವಿಧಾನಸೌಧ ಮತ್ತು ಬಿಬಿಎಂಪಿಯ ಆಡಳಿತ ಚುಕ್ಕಾಣಿ ಹಿಡಿದಿರುವ ಪಕ್ಷಗಳು ಯಾವುವೆಂದು ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ, ಸಿಬಿಐ ನಿಂದ ಅಥವಾ ತೆರಿಗೆ ಅಧಿಕಾರಿಗಳಿಂದ ಸರ್ಕಾರ ತನಿಖೆ ನಡೆಸಲಿ, ನಂತರ ಸತ್ಯಾಂಶ ಹೊರಬರುತ್ತದೆ" ಎಂದು ಹೇಳಿದರು.[ವಿಧಾನಸೌಧದಲ್ಲೇ ಕೋಟಿ ಕೋಟಿ ಹಣದ ಕರ್ಮಕಾಂಡ!]
" ಈ ರೀತಿ ಕ್ಷುಲ್ಲಕ ಆರೋಪಗಳನ್ನು ಮಾಡಿ ಪ್ರಚಾರ ಗಿಟ್ಟಿಸುವುದನ್ನು ನಿಲ್ಲಿಸಬೇಕು. ಬಿಬಿಎಂಪಿಯಲ್ಲಿ ಎಲ್ಲವೂ ಕಮಿಷನ್ ವ್ಯವಹಾರ ನಡೆಯುತ್ತಿದೆ. 'ನೀವು ಬೆಣ್ಣೆ ತಿಂದು ಮತ್ತೊಬ್ಬರ ಮುಖಕ್ಕೆ ಒರೆಸಬೇಡಿ' ಎಂದು ಅವರು ಹೇಳಿದರು.
ಪತ್ತೆಯಾದ ದಾಖಲೆಯಿಲ್ಲದ ಹಣದ ಕುರಿತು ಕುಮಾರಸ್ವಾಮಿಯವರು ಪ್ರತಿಕ್ರಿಯೆ ನೀಡಿ "ಈ ಹಣದ ಸಂಪೂರ್ಣ ವಿವಿರ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಮಾತ್ರ ಗೊತ್ತಿದೆ. ಬೇರೆ ಯಾರನ್ನೂ ಪ್ರಶ್ನಿಸುವ ಅಗತ್ಯವಿಲ್ಲ' ಎಂದು ಆರೋಪಿಸಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications