Prajwal Revanna Case: ಬರೀ ಬೆಡ್ ಅಲ್ಲ, ಗೋಡೆ ಮೇಲೂ ಬರೀ ಬ್ರೌನ್ ಕಲರ್ ಕಲೆಗಳು: ಪ್ರಜ್ವಲ್ ಹೇಳಿದ್ದೇನು?
Prajwal Revanna: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಬರೀ ರಾಜ್ಯ, ದೇಶ ಅಲ್ಲದೇ ವಿದೇಶದಲ್ಲಿಯೂ ಸದ್ದು ಮಾಡಿದ್ದು, ಈ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಇದೀಗ ಒಂದೊಂದೇ ಹಂತದಲ್ಲಿ ಎಸ್ಐಟಿ ತನಿಖೆಯನ್ನು ನಡೆಸುತ್ತಿದ್ದು, ಬೆಡ್ರೂಂಗೆ ಸಂಬಂಧಪಟ್ಟಂತೆ ಕೆಲವು ವಿಚಾರಗಳನ್ನು ಬಯಲಿಗೆಳೆಯುವ ಕೆಲಸವನ್ನು ಮಾಡುತ್ತಿದೆ. ಹಾಗಾದರೆ ಈ ಬಗ್ಗೆ ಪ್ರಕರಣದಲ್ಲಿ ಆರೋಪಿಯಾದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.
ಮೇ 29ರಂದು ಬಸವನಗುಡಿಯಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮನೆಯನ್ನು ಕೋರ್ಟ್ನಲ್ಲಿ ಸರ್ಚ್ ವಾರೆಂಟ್ ಪಡೆದು ಎಸ್ಐಟಿ ಶೋಧಕ್ಕೊಳಪಡಿಸಿತ್ತು. ಪ್ರಜ್ವಲ್ ಆಗಮನಕ್ಕೂ ಒಂದು ದಿನದ ಮೊದಲೇ ನಡೆಸಲಾದ ಈ ತಪಾಸಣೆಯ ವೇಳೆ ಅನುಮಾನದ ಹಿನ್ನೆಲೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೆಲವು ವಸ್ತುಗಳನ್ನು ಕೊಂಡೊಯ್ಯಲಾಗಿದ್ದು, ಈ ವೇಳೆ ಪತ್ತೆಯಾದ ವಸ್ತುಗಳ ಬಗ್ಗೆ ಕೋರ್ಟ್ಗೆ ಮಾಹಿತಿ ನೀಡಲಾಗಿದೆ. ಹಾಗಾದರೆ ಬೆಡ್ರೂಂನಲ್ಲಿ ಇನ್ನು ಏನೆಲ್ಲಾ ಎಸ್ಐಟಿ ಕಣ್ಣಿಗೆ ಬಿದ್ದಿದೆ ಎಂದು ಇಲ್ಲಿ ತಿಳಿಯಿರಿ.

ಎಚ್.ಡಿ.ರೇವಣ್ಣ ಅವರ ಮನೆಯಲ್ಲಿ ಪ್ರಕರಣದ ಎರಡನೇ ಆರೋಪಿ ಪ್ರಜ್ವಲ್ ಕೃತ್ಯ ಎಸಗಿದ ಸ್ಥಳದಲ್ಲಿ ಶೋಧಕಾರ್ಯ ನಡೆಸಿದ್ದು, ಈ ವೇಳೆ ತನಿಖೆಗೆ ಅವಶ್ಯಕ ಎಂದು ಕೆಲವು ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಈ ವಸ್ತುಗಳಲ್ಲಿ, ಡಬಲ್ ಕಾಟ್ ಹಾಸಿಗೆ ಮೇಲೆ ಅಲ್ಲಲ್ಲಿ ಇದ್ದ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಬೆಡ್ಸ್ಪ್ರೆಡ್ ಕಂಡುಬಂದಿದ್ದು, ಈ ಕಲೆಗಳನ್ನು ಪ್ರಜ್ವಲ್ ಮುಂದೆ ಹಿಡಿದು ಪ್ರಶ್ನಿಸಲಾಗಿದೆ. ಈ ವೇಳೆ ಅವರು, ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಒನ್ ಸೈಟ್ ಕಾಟ್ ಹಾಸಿಗೆ ಮೇಲೆಯೂ ಅಲ್ಲಲ್ಲಿ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದು, ಜೊತೆಗೆ ಒಂದು ಗ್ರೇ ಕಲರ್ ಅದರ ಮೇಲೆ ಸಿಲ್ವರ್ ಕಲರ್ ಕಲರ್ವುಳ್ಳ ವಾಲ್ ಪೇಪರ್ ತುಣುಕು ಸಿಕ್ಕಿದೆ. ಸದ್ಯ ಇದೀಗ ಎಸ್ಐಟಿ ಅಧಿಕಾರಿಗಳು ಇವುಗಳನ್ನು ವಶಪಡಿಸಿಕೊಂಡಿದ್ದು, ಇವುಗಳನ್ನು ತಜ್ಞರ ಪರೀಕ್ಷೆಗೆ ಕಳುಹಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಲ್ಲದೆ ಅಶ್ಲೀಲ ವಿಡಿಯೋವನ್ನು ಮಾಡಿಕೊಂಡಿರುವ ಎನ್ನಲಾದ ಮೊಬೈಲ್ ಸಹ ಪ್ರಜ್ವಲ್ ಬಳಿ ಸಿಕ್ಕಿಲ್ಲ. ಈ ಬಗ್ಗೆ ಪ್ರಶ್ನಿ ಕೇಳಿದಾಗ, ಅದು ಒಂದು ವರ್ಷದ ಹಿಂದೆಯೇ ಕಳೆದುಹೋಗಿದೆ. ಈ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ ಎಂದು ಪ್ರಜ್ವಲ್ ರೇವಣ್ಣ ಅವರು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸಂಬಂಧ ಮಹತ್ವದ ಸಾಕ್ಷ್ಯ ಸಂಗ್ರಹಕ್ಕೆ ಮುಂದಾಗಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಪಾಲ್ಗೊಂಡಿರಬಹುದಾದ ಕೃತ್ಯದ ಸಂಬಂಧ ತಾಂತ್ರಿಕ ಮತ್ತು ಸಾಂದರ್ಭಿಕ ಸಾಕ್ಷ್ಯಗಳ ಸಂಗ್ರಹ ಮಾಡುತ್ತಿದ್ದಾರೆ.
ಪ್ರಜ್ವಲ್ ರೇವಣ್ಣ ಅವರು ಅತ್ಯಾಚಾರನ್ನು ಪುರುಷತ್ವ ಪರೀಕ್ಷೆಗೂ ಕೂಡ ಕೋರ್ಟ್ ಒಪ್ಪಿಗೆ ನೀಡಿದ್ದು, ಆದ್ದರಿಂದ ಎಸ್ಐಟಿ ಅಧಿಕಾರಿಗಳು ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪುರುಷತ್ವ ಪರೀಕ್ಷೆ ನಡೆಸಿದ್ದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications