ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು?; ದೇವೇಗೌಡ
ಹಾಸನ, ಡಿಸೆಂಬರ್ 29; "ನಾನು ಲಘುವಾಗಿ ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಪಾದಯಾತ್ರೆ ಮಾಡುವುದಾದರೆ ಮಾಡಲಿ. ಅದರಿಂದ ಸಮಸ್ಯೆ ಬಗೆಹರಿದರೆ ಸಂತೋಷ" ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್. ಡಿ. ದೇವೇಗೌಡ ಹೇಳಿದರು.
ಬುಧವಾರ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿರುವ ದೇವೇಶ್ವರ ದೇವಾಲಯಕ್ಕೆ ದೇವೇಗೌಡರ ಕುಟುಂಬದವರು ವಿಶೇಷ ಪೂಜೆ ಸಲ್ಲಿಸಿದರು. ಪೂಜಾ ಕಾರ್ಯಗಳಲ್ಲಿ ದೇವೇಗೌಡ, ಚೆನ್ನಮ್ಮ, ರೇವಣ್ಣ, ಭವಾನಿ ರೇವಣ್ಣ, ಸೂರಜ್ ರೇವಣ್ಣ ಭಾಗಿಯಾದ್ದರು.
ದೇವೇಗೌಡರ ಹುಟ್ಟೂರಿನ ದೇವಾಲಯದಲ್ಲಿ ಆಶ್ಲೇಷ ಪೂಜೆ, ಅಷ್ಟಬಂಧ ಬ್ರಹ್ಮ ಕುಂಭಾಭಿಷೇಕ, ಕರ್ಮ ಪ್ರಾಶಯ್ಚಿತ ಮಹಾರುದ್ರಯಾಗ, ಸರ್ಪ ಪೂಜೆ ನಡೆಸಲಾಯಿತು. ಈ ಕಾರ್ಯಕ್ರಮದ ಬಳಿಕ ದೇವೇಗೌಡರು ಮಾಧ್ಯಮಗಳ ಜೊತೆ ಮಾತನಾಡಿದರು.

"ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು?. ನಾನು ಪ್ರಧಾನಿಯಾಗಿದ್ದೆ, ಮುಖ್ಯಮಂತ್ರಿಯಾಗಿದ್ದೆ. ಈ ದೇಶದಲ್ಲಿ ನನ್ನ ಕಾಲದಲ್ಲಿ ಮತಾಂತರ ಆಗುವ ಒಂದು ಘಟನೆ ನಡೀತಾ?. ನನ್ನ ಆಡಳಿತದಲ್ಲಿ ಹಿಂದೂಸ್ಥಾನದಲ್ಲಿ, ಕರ್ನಾಟಕದಲ್ಲಿ ಮತಾಂತರ ಆಗಿದೆಯಾ?. ಈಗ ಯಾಕೇ ಅದು ಶುರುವಾಯ್ತು?" ಎಂದು ಪ್ರಶ್ನಿಸಿದರು.
"ಮತಾಂತರ ನಿಷೇಧ ಕಾಯ್ದೆ ಬಗ್ಗೆ ಕಾಂಗ್ರೆಸ್ ಕಾಲದಲ್ಲಿ ಬಿಲ್ ತಂದರೂ ಪಾಸಾಗಲಿಲ್ಲ. ಇವರು ಪಾಸ್ ಮಾಡಲು ಹೊರಟಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಈ ಬಗ್ಗೆ ತೀವ್ರವಾಗಿ ವಿರೋಧಿಸಿದ್ದಾರೆ. ರೇವಣ್ಣ, ತಿಪ್ಪೇಸ್ವಾಮಿ ವಿರೋಧಿಸಿದ್ದಾರೆ. ಯಾರೂ ಅಧಿಕಾರ ನಡೆಸುತ್ತಾರೋ ಅವರು ಎಲ್ಲರ ವಿಶ್ವಾಸ ಗಳಿಸಿಕೊಂಡರೆ ಇವೆಲ್ಲಾ ಬರಲ್ಲ" ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಮೇಕೆದಾಟು ಯೋಜನೆ; ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಮಾತನಾಡಿದ ದೇವೇಗೌಡರು, "ಈ ವಿಚಾರದಲ್ಲಿ ನಾನು ಹಿಂದೆ ಅಳಿಲು ಸೇವೆ ಮಾಡಿದ್ದೇನೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ದೆಹಲಿಗೆ ಹೋಗಿ ಬಂದಿದ್ದಾರೆ. ಈಗಿನ ಮುಖ್ಯಮಂತ್ರಿಗಳು ಜಲಸಂಪನ್ಮೂಲ ಸಚಿವರಾಗಿದ್ದರು, ಡಿ. ಕೆ. ಶಿವಕುಮಾರ್ ಸಹ ಸಚಿವರು ಆಗಿದ್ದರು. ಆದರೆ ಈಗ ಅವರಲ್ಲಿ ಏನು ಚರ್ಚೆ ನಡೆದಿದೆ ಗೊತ್ತಿಲ್ಲ. ಅವರ ಚುನಾವಣೆಗೆ ಅನೂಕೂಲವಾದರೆ ಆಗಲಿ, ಒಟ್ಟಿನಲ್ಲಿ ಸಮಸ್ಯೆ ಬಗೆಹರಿದರೆ ಸಾಕು. ಅವರ ಪಾದಯಾತ್ರೆ ಬಗ್ಗೆ ನಾನು ಏಕೆ ಹೊಟ್ಟೆ ಕಿಚ್ಚು ಪಡಲಿ?, ನಮ್ಮ ಪಕ್ಷ ಉಳಿಸಿಕೊಳ್ಳುವುದು ನಮ್ಮ ಕೆಲಸ ಅಷ್ಟೇ" ಎಂದರು.
ಸಂತಸ ವ್ಯಕ್ತಪಡಿಸಿದ ಹೆಚ್ಡಿಡಿ; ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅಭಿನಯದ 'ರೈಡರ್' ಸಿನಿಮಾ ಬಗ್ಗೆ ದೇವೇಗೌಡರು ಮಾತನಾಡಿದರು. "ಸಿನಿಮಾ ತುಂಬಾ ಚೆನ್ನಾಗಿದೆ" ಎಂದರು.
ಸಿನಿಮಾ ನೋಡಿದ ನಂತರ ಆ ಬಗ್ಗೆ ಮಾತನಾಡಿದ ಅವರು, "ನಿಖಿಲ್ ಫಿಲಂ ಫೀಲ್ಡ್ನಲ್ಲಿ ಇದ್ದಾನೆ. ಈ ಕ್ಷೇತ್ರಕ್ಕೆ ಆತ ಹೊಸಬನಲ್ಲ. ಜಾಗ್ವಾರ್ ಸಿನಿಮಾದಿಂದ ಹಿಡಿದು ಐದಾರು ಸಿನಿಮಾಗಳಲ್ಲಿ ಅಭಿನಯಿಸಿದ್ದಾನೆ. ಕಥೆ ತುಂಬಾ ಚೆನ್ನಾಗಿದೆ. ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ" ಎಂದು ಹೇಳಿದರು.
"ಇಡೀ ರಾಜ್ಯದಲ್ಲಿ ನೂರು ಸಿನಿಮಾ ಮಂದಿರಗಳಲ್ಲಿ ನಾಲ್ಕು ಶೋ, ಮೂರು ಶೋ ಆಗುತ್ತಿದೆ. ಈ ಸಿನಿಮಾಗೆ ನಾನು ಸರ್ಟಿಫಿಕೇಟ್ ಕೊಡುವ ಅಗತ್ಯವಿಲ್ಲ, ಈಗಾಗಲೇ ಜನ ಕೊಟ್ಟಿದ್ದಾರೆ. ಸಿನಿಮಾ ತುಂಬಾ ಚೆನ್ನಾಗಿದೆ ಎನ್ನಲು ಆ ಸರ್ಟಿಫಿಕೇಟ್ ಒಂದು ಸಾಕು" ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನಿಖಿಲ್ ಕುಮಾರಸ್ವಾಮಿ ಹೇಳಿಕೆ; ಡಿಸೆಂಬರ್ 31ರ ಕರ್ನಾಟಕ ಬಂದ್ ಬಗ್ಗೆ ಹಾಸನದಲ್ಲಿ ನಟ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು, "ಕರ್ನಾಟಕ ಬಂದ್ ಮಾಡುವುದರಿಂದ ಕನ್ನಡ ಚಿತ್ರಗಳಿಗೆ, ಜನಸಾಮಾನ್ಯರಿಗೆ ತೊಂದರೆ ಆಗುತ್ತದೆ, ಅಂತಹ ಬಂದ್ ನಮಗೆ ಅವಶ್ಯಕತೆ ಇಲ್ಲ" ಎಂದರು.
"ಮಾಧ್ಯಮದಲ್ಲಿ ಪ್ರಚಾರ ಪಡೆಯುವುದಕ್ಕೆ ಬಂದ್ ಸೀಮಿತವಾಗಬಾರದು. ಎರಡು ವರ್ಷಗಳ ಕೋವಿಡ್ ಸಂಕಷ್ಟದ ನಂತರ ಸಾಕಷ್ಟು ಚಿತ್ರಗಳು ಬಿಡುಗಡೆಯಾಗಿವೆ, ಬಿಡುಗಡೆಗೆ ಸಿದ್ಧವಾಗಿವೆ. ಬಂದ್ಗೆ ಕರೆ ಕೊಟ್ಟಿರುವವರು ಇನ್ನೊಮ್ಮೆ ಯೋಚನೆ ಮಾಡಲಿ ಎಂದು ಮನವಿ ಮಾಡುತ್ತೇನೆ" ಎಂದು ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications