ಸಿದ್ರಾಮಣ್ಣ ಬರೀ ಪಾಪದ್ದು, ಅದಕ್ಕೆ ಏನೂ ಗೊತ್ತಾಗಲ್ಲ: ಮಾಜಿ ಸಿಎಂ ಬಗ್ಗೆ ಉಕ್ಕಿ ಹರಿದ ಎಚ್.ಡಿ.ರೇವಣ್ಣ ಪ್ರೀತಿ
ಹಾಸನ, ಏಪ್ರಿಲ್ 4: "ತಾಂಬೂಲ ತಂದಿದ್ದೇವೆ, ದೇವೇಗೌಡ್ರೇ ನಿಮ್ಮ ಕಾಲಿಗೆ ಬೀಳುತ್ತೇವೆ, ಕುಮಾರಸ್ವಾಮಿಯವರೇ ನಿಮ್ಮ ಕಾಲಿಗೆ ಬೀಳುತ್ತೇವೆ, ನೀವೇ ಮುಖ್ಯಮಂತ್ರಿಯಾಗ ಬೇಕೆಂದು ಗೋಗರೆದರು, ಅದಕ್ಕೆ ಗೌಡ್ರು ಒಪ್ಪಿಕೊಂಡರು" ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ, ಹೇಳಿದರು.
"ದೇವೇಗೌಡ್ರನ್ನು ಹನ್ನೊಂದು ತಿಂಗಳಲ್ಲಿ ತೆಗೆದರಲ್ವಾ, ಆ ಶಾಪ ಕಾಂಗ್ರೆಸ್ ಪಕ್ಷಕ್ಕೆ ಕಾಡುತ್ತಿದೆ. ಈ ಶಾಪದಿಂದಾಗಿಯೇ ದೇಶದಲ್ಲಿ ಕಾಂಗ್ರೆಸ್ ನಿರ್ನಾಮ ಆಗುತ್ತಿದೆ. ಬೇರೆ ಯಾರೂ ಏನೂ ಮಾಡಬೇಕಾಗಿಲ್ಲ"ಎಂದು ರೇವಣ್ಣ ಅಭಿಪ್ರಾಯ ಪಟ್ಟರು.
"ನಮ್ಮ ಬಳಿ ಯಾವ ಸಿಡಿಯೂ ಇಲ್ಲ. ಆದರೂ ಬಹಳ ವಿಚಾರವಿದೆ, ಸಮಯ ಸಂದರ್ಭ ಬಂದಾಗ ಎಲ್ಲಾ ಹೇಳುತ್ತೇವೆ. ಪಾಪ ಸಿದ್ರಾಮಣ್ಣ, ಪಾಪದ್ದು ಅದಕ್ಕೆ ಏನೂ ಗೊತ್ತಾಗಲ್ಲ"ಎಂದು ರೇವಣ್ಣ ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲಿನ ಪ್ರೀತಿಯನ್ನು ಮತ್ತೆ ತೋರಿಸಿದ್ದಾರೆ.

"ಸಿದ್ರಾಮಣ್ಣ ಮತ್ತೆ ಮುಖ್ಯಮಂತ್ರಿಯಾಗುತ್ತಾರಾ, ಕಾಂಗ್ರೆಸ್ಸಿನವರು ಅವರನ್ನೇ ಮತ್ತೆ ಸಿಎಂ ಮಾಡುತ್ತಾರಾ ಎಂದು ಮೊದಲು ಕೇಳಿ"ಎಂದು ರೇವಣ್ಣ ಈ ಸಂದರ್ಭದಲ್ಲಿ ಹೇಳಿದರು.
"ಕಾಂಗ್ರೆಸ್ಸಿನವರ ಸಹವಾಸದಿಂದ ಕುಮಾರಸ್ವಾಮಿ ಮನೆಯಲ್ಲಿ ಕೂರುವಂತಾಯಿತು. ಕಾಂಗ್ರೆಸ್ಸಿನವರೇ ಮನೆ ಬಾಡಿಗೆ ನೀಡಿ, ಸಹಿ ಹಾಕಿಸಿಕೊಂಡು ಆ ನಂತರ ಮನೆ ಖಾಲಿ ಮಾಡಿಸಿದರು"ಎಂದು ರೇವಣ್ಣ ವ್ಯಂಗ್ಯವಾಗಿ ಅಂದಿನ ಘಟನೆಯನ್ನು ವಿವರಿಸಿದರು.
"ಈಗ ಬಿಜೆಪಿ ಮತ್ತು ಕಾಂಗ್ರೆಸ್ಸಿನವರು ಸಿಡಿ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಆದರೆ, ನಮ್ಮ ಬಳಿ ಯಾವ ಸಿಡಿಯೂ ಇಲ್ಲ. ಅಂದಿನ ಕಾಂಗ್ರೆಸ್ ಸಹವಾಸದಿಂದ ಕುಮಾರಣ್ಣ ದುಃಖ ಪಡುವಂತಾಯಿತು"ಎಂದು ರೇವಣ್ಣ, ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications