ಸಿದ್ರಾಮಣ್ಣ ಬರೀ ಪಾಪದ್ದು, ಅದಕ್ಕೆ ಏನೂ ಗೊತ್ತಾಗಲ್ಲ: ಮಾಜಿ ಸಿಎಂ ಬಗ್ಗೆ ಉಕ್ಕಿ ಹರಿದ ಎಚ್.ಡಿ.ರೇವಣ್ಣ ಪ್ರೀತಿ
ಹಾಸನ, ಏಪ್ರಿಲ್ 4: "ತಾಂಬೂಲ ತಂದಿದ್ದೇವೆ, ದೇವೇಗೌಡ್ರೇ ನಿಮ್ಮ ಕಾಲಿಗೆ ಬೀಳುತ್ತೇವೆ, ಕುಮಾರಸ್ವಾಮಿಯವರೇ ನಿಮ್ಮ ಕಾಲಿಗೆ ಬೀಳುತ್ತೇವೆ, ನೀವೇ ಮುಖ್ಯಮಂತ್ರಿಯಾಗ ಬೇಕೆಂದು ಗೋಗರೆದರು, ಅದಕ್ಕೆ ಗೌಡ್ರು ಒಪ್ಪಿಕೊಂಡರು" ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ, ಹೇಳಿದರು.
"ದೇವೇಗೌಡ್ರನ್ನು ಹನ್ನೊಂದು ತಿಂಗಳಲ್ಲಿ ತೆಗೆದರಲ್ವಾ, ಆ ಶಾಪ ಕಾಂಗ್ರೆಸ್ ಪಕ್ಷಕ್ಕೆ ಕಾಡುತ್ತಿದೆ. ಈ ಶಾಪದಿಂದಾಗಿಯೇ ದೇಶದಲ್ಲಿ ಕಾಂಗ್ರೆಸ್ ನಿರ್ನಾಮ ಆಗುತ್ತಿದೆ. ಬೇರೆ ಯಾರೂ ಏನೂ ಮಾಡಬೇಕಾಗಿಲ್ಲ"ಎಂದು ರೇವಣ್ಣ ಅಭಿಪ್ರಾಯ ಪಟ್ಟರು.
"ನಮ್ಮ ಬಳಿ ಯಾವ ಸಿಡಿಯೂ ಇಲ್ಲ. ಆದರೂ ಬಹಳ ವಿಚಾರವಿದೆ, ಸಮಯ ಸಂದರ್ಭ ಬಂದಾಗ ಎಲ್ಲಾ ಹೇಳುತ್ತೇವೆ. ಪಾಪ ಸಿದ್ರಾಮಣ್ಣ, ಪಾಪದ್ದು ಅದಕ್ಕೆ ಏನೂ ಗೊತ್ತಾಗಲ್ಲ"ಎಂದು ರೇವಣ್ಣ ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲಿನ ಪ್ರೀತಿಯನ್ನು ಮತ್ತೆ ತೋರಿಸಿದ್ದಾರೆ.

"ಸಿದ್ರಾಮಣ್ಣ ಮತ್ತೆ ಮುಖ್ಯಮಂತ್ರಿಯಾಗುತ್ತಾರಾ, ಕಾಂಗ್ರೆಸ್ಸಿನವರು ಅವರನ್ನೇ ಮತ್ತೆ ಸಿಎಂ ಮಾಡುತ್ತಾರಾ ಎಂದು ಮೊದಲು ಕೇಳಿ"ಎಂದು ರೇವಣ್ಣ ಈ ಸಂದರ್ಭದಲ್ಲಿ ಹೇಳಿದರು.
"ಕಾಂಗ್ರೆಸ್ಸಿನವರ ಸಹವಾಸದಿಂದ ಕುಮಾರಸ್ವಾಮಿ ಮನೆಯಲ್ಲಿ ಕೂರುವಂತಾಯಿತು. ಕಾಂಗ್ರೆಸ್ಸಿನವರೇ ಮನೆ ಬಾಡಿಗೆ ನೀಡಿ, ಸಹಿ ಹಾಕಿಸಿಕೊಂಡು ಆ ನಂತರ ಮನೆ ಖಾಲಿ ಮಾಡಿಸಿದರು"ಎಂದು ರೇವಣ್ಣ ವ್ಯಂಗ್ಯವಾಗಿ ಅಂದಿನ ಘಟನೆಯನ್ನು ವಿವರಿಸಿದರು.
"ಈಗ ಬಿಜೆಪಿ ಮತ್ತು ಕಾಂಗ್ರೆಸ್ಸಿನವರು ಸಿಡಿ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಆದರೆ, ನಮ್ಮ ಬಳಿ ಯಾವ ಸಿಡಿಯೂ ಇಲ್ಲ. ಅಂದಿನ ಕಾಂಗ್ರೆಸ್ ಸಹವಾಸದಿಂದ ಕುಮಾರಣ್ಣ ದುಃಖ ಪಡುವಂತಾಯಿತು"ಎಂದು ರೇವಣ್ಣ, ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications