Yettinahole Project: ಎತ್ತಿನಹೊಳೆ ಯೋಜನೆ ಮೊದಲ ಹಂತಕ್ಕೆ ಸೆ.6ಕ್ಕೆ ಚಾಲನೆ, ಯೋಜನೆ ವಿವರ
ಹಾಸನ, ಸೆಪ್ಟೆಂಬರ್ 05: ಕರ್ನಾಟಕದ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆಯಾದ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದೆ. 7 ಜಿಲ್ಲೆಯ ಜನರ ಕುಡಿಯುವ ನೀರಿನ ಬವಣೆ ನಿಗಿಸುವ ಯೋಜನೆಗೆ ಸೆಪ್ಟೆಂಬರ್ 6ರ ಶುಕ್ರವಾರ ಚಾಲನೆ ಸಿಗಲಿದೆ. ಇದರಿಂದಾಗಿ 10 ವರ್ಷಗಳ ಜನರ ಕನಸು ನನಸಾಗಲಿದೆ. ಎತ್ತಿನಹೊಳೆ ಯೋಜನೆ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ಸಹಕಾರ ಸಚಿವ ಕೆ. ಎನ್. ರಾಜಣ್ಣ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡುವ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಮಹತ್ವಕಾಂಕ್ಷಿ ಎತ್ತಿನಹೊಳೆ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದ ಕುರಿತು ಮಾಹಿತಿ ಪಡೆದ ಸಚಿವರು, ಅಧಿಕಾರಿಗಳಿಗೆ ಸೂಚನೆಗಳನ್ನು ಸಹ ಕೊಟ್ಟರು.

ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, "ಎತ್ತಿನಹೊಳೆ ಯೋಜನೆ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಸೆಪ್ಟೆಬಂಬರ್ 6ರಂದು ವಿದ್ಯುಕ್ತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಗೌರಿ ಹಬ್ಬದ ದಿನವೇ ಎತ್ತಿನಹೊಳೆ ಯೋಜನೆಗೆ ಶುಭ ಚಾಲನೆ ಸಿಗಲಿದೆ" ಎಂದರು.
ಎತ್ತಿನಹೊಳೆ ಯೋಜನೆ ವಿವರಗಳು: ಸಚಿವ ಕೆ. ಎನ್. ರಾಜಣ್ಣ ಮಾತನಾಡಿ, "ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಹಾಗೂ ಹಲವು ಸಚಿವರು ಎತ್ತಿನಹೊಳೆ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ" ಎಂದರು.
"ಪಶ್ಚಿಮಾಭಿಮುಖವಾಗಿ ಹರಿಯುವ ನದಿ ನೀರನ್ನು ಪೂರ್ವಾಭಿಮುಖವಾಗಿ ತಿರುಗಿಸುವ ವಿನೂತನ ಯೋಜನೆ ಇದ್ದಾಗಿದೆ. ಒಟ್ಟು 7 ಪೈಪ್ಲೈನ್ ಮೂಲಕ ನೀರು ಮೇಲೆತ್ತಲಾಗುತ್ತಿದೆ. ಇದಕ್ಕಾಗಿ ನೀರನ್ನು ಸಂಗ್ರಹ ಮಾಡಲಾಗಿದೆ. ಮುಂದಿನ ವರ್ಷದ ವೇಳೆಗೆ ಅರಸೀಕೆರೆ ಹಾಗೂ ಜಿಲ್ಲೆಯ ಬೇರೆ ಭಾಗಕ್ಕೆ ನೀರು ಹರಿಯಲಿದೆ" ಎಂದು ಸಚಿವರು ಭರವಸೆ ನೀಡಿದರು.
"ಪ್ರಸ್ತುತ 4ನೇ ವಿತರಣೆ ತೊಟ್ಟಿಯಿಂದ ವಾಣಿವಿಲಾಸ ಸಾಗರದತ್ತ ಲಿಫ್ಟ್ ಮಾಡಿದ ನೀರು ಹರಿಯುತ್ತಿದೆ. ಎಲ್ಲಾ ಅಡೆತಡೆ ನಿವಾರಣೆ ಮಾಡಿ ಯೋಜನೆ ಜಾರಿ ಮಾಡಲಾಗುತ್ತಿದೆ. ಉಪ ಮುಖ್ಯಮತ್ರಿಗಳು ವೈಯಕ್ತಿಕ ಮುತುವರ್ಜಿಯಿಂದ ಯೋಜನೆ ಕಾರ್ಯಗತಗೊಳಿಸಲು ಶ್ರಮಿಸಿದ್ದಾರೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಫಲಾನುಭವಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ" ಎಂದರು.
"ಇದೊಂದು ಕುಡಿಯುವ ನೀರಿನ ಯೋಜನೆಯಾಗಿದೆ. ಗುತ್ತಿಗೆದಾರರು ಸಾಕಷ್ಟು ಕಷ್ಟದ ಸನ್ನಿವೇಶ ಎದುರಿಸಿ ಯೋಜನೆ ಕಾರ್ಯಗತಗೊಳಿಸಿದ್ದಾರೆ. ಯೋಜನೆಗೆ ಸಹಕಾರ ನೀಡಿದ ಕೆಲ ಅಧಿಕಾರಿಗಳನ್ನೂ, ಜನರನ್ನು ಉದ್ಘಾಟನಾ ಕಾರ್ಯಕ್ರಮದ ದಿನ ಸನ್ಮಾನಿಸಲಾಗುತ್ತದೆ" ಎಂದು ಸಚಿವರು ತಿಳಿಸಿದರು.
"ಯೋಜನೆಗೆ ಕೆಲವೆಡೆ ಅರಣ್ಯ ಇಲಾಖೆಯ ಆಕ್ಷೇಪಗಳಿರುವುದರಿಂದ ಅಡಚಣೆ ಆಗಿದೆ. ಅರಣ್ಯ ಇಲಾಖೆಯ ಆಕ್ಷೇಪಗಳಿರುವುದರಿಂದ ಪರ್ಯಾಯ ಭೂಮಿ ನೀಡಿ ಮುಂದಿನ ವರ್ಷ ಅರಸೀಕೆರೆ ಸೇರಿದಂತೆ 7 ಜಿಲ್ಲೆಗಳಿಗೂ ನೀರು ಪೂರೈಕೆ ಮಾಡಲಾಗುವುದು. ಈ ಯೋಜನೆಯಿಂದ ನೀರಿನ ಅಗತ್ಯತೆ ಇರುವ ಬಯಲು ಸೀಮೆಯ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ. ಉಳಿದ ಕಾಮಗಾರಿಗಳನ್ನು ಅತಿ ತುರ್ತಾಗಿ ಮಾಡಿ ಮುಂದಿನ ವರ್ಷ ಕೆರೆಗಳಿಗೆ ನೀರು ಹರಿಸುತ್ತೇವೆ" ಎಂದು ಸಚಿವರು ಭರವಸೆ ನೀಡಿದರು.
-
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು?












Click it and Unblock the Notifications