ಮುಂದಿನ ವರ್ಷ ಎತ್ತಿನಹೊಳೆ ಕಾಮಗಾರಿ ಮೊದಲ ಹಂತಕ್ಕೆ ಚಾಲನೆ
ಹಾಸನ, ಮೇ 7: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇಂದು ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ನಡೆಯುತ್ತಿರುವ ಏತ್ತಿನ ಹೊಳೆ ಯೋಜನೆ ಕಾಮಗಾರಿ ಪರಿಶೀಲನೆ ನಡೆಸಿದರು.
ತಾಲೂಕಿನ ಕುಂಬರಡಿ, ಕಾಡುಮನೆ, ಹೆಬ್ಬನಳ್ಳಿ ಗ್ರಾಮಗಳಲ್ಲಿನ ಯೋಜನಾ ಸ್ಥಳಗಳಿಗೆ ಭೇಟಿ ನೀಡಿದ ಸಚಿವರು ಬಯಲು ಸೀಮೆಗೆ ನೀರುಣಿಸುವ ಎತ್ತಿನ ಹೊಳೆ ಯೋಜನೆ ಕಾಮಗಾರಿಗಳನ್ನು ಚುರುಕು ಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2021 ರ ಮಾರ್ಚ್ ವೇಳೆಗೆ ಮೊದಲ ಹಂತದ ಕಾಮಗಾರಿ ಪೂರ್ಣ ಗೊಳಿಸಿ 37 ಕಿ ಮೀ ವರಗೆ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದರು.

ಕ್ಷಿಪ್ರವಾಗಿ ಕೆಲಸ ನಡೆಸಲಾಗುವುದು
ಕೋವಿಡ್ 19 ಹಿನ್ನಲೆಯಲ್ಲಿ ಕಾಮಗಾರಿ ವಿಳಂವಾಗಿದೆ. ಇನ್ನು ಮಂದೆ ಕ್ಷಿಪ್ರವಾಗಿ ಕೆಲಸ ನಡೆಸಲಾಗುವುದು. ಆದಷ್ಟು ಬೇಗ ಬಯಲು ಸೀಮೆಗೆ ನೀರು ಹರಿಸಬೇಕೆಂಬುದು ಸರ್ಕಾರದ ಗುರಿಯಾಗಿದೆ ಎಂದರು. ಯೋಜನೆಯಿಂದ ಬಾದಿತವಾಗಿರುವ ಸಕಲೇಶಪುರ ಆಲೂರುಗಳಲ್ಲಿ ಈಗಾಗಾಲೆ ಮೂಲಭೂತ ಸೌಕರ್ಯ ಅಭಿವೃದ್ಧಿ ಗೆ ಗಮನ ಹರಿಸಲಾಗಿದ್ದು ರಸ್ತೆ ಕಾಮಗಾರಿಗಳನ್ನು ಕೈ ಗೊಳ್ಳಲಾಗಿದೆ ಎಂದರು.

ರಾಜಕೀಯ ಮಾಡಬಾರದು
ನೀರಿನ ವಿಚಾರದಲ್ಲಿ ಮಾತ್ರ ಯಾರೂ ಯಾವುದೇ ರಾಜಕೀಯ ಮಾಡಬಾರದು ಅನುದಾನ ಒದಗಿಸುವ ವಿಚಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು ಆದರೆ ಮುಂದಿನ ದಿನಗಳಲ್ಲಿ ಎಲ್ಲವನ್ನು ಬಗೆಹರಿಸುವುದಾಗಿ ಸಚಿವರು ಭರವಸೆ ನೀಡಿದರು. ಮುಂದಿನ ಮಾರ್ಚ್ ರೊಳಗೆ ಶೀಘ್ರದಲ್ಲೇ ಎತ್ತಿನಹೊಳೆಯಿಂದ ಮೊದಲನೇ ಹಂತದ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಅವರು ಹೇಳಿದರು.

ತಲೆದೋರದಂತೆ ಎಚ್ಚರ ವಹಿಸಲಾಗುವುದು
ಕಳೆದ ಫೆಬ್ರವರಿಯಲ್ಲಿ ತಾವು ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಅಂದಿನಿಂದ ಎಲ್ಲಾ ಜಲಾಶಯಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯ ಅವಲೋಕನ ಮಾಡುತ್ತಿದ್ದೇನೆ. ಜೊತೆಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯದಲ್ಲಿ ನೀರಿನ ಸಮಸ್ಯೆ ಉಲ್ಬಣವಾಗದಂತೆ ಮಾಡಿಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು. ಎತ್ತಿನಹೊಳೆ ನೀರನ್ನು ಉತ್ತರ ಭಾಗಕ್ಕೆ ಕೊಂಡೊಯ್ಯುವ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯದ ಎಲ್ಲಾ ಭಾಗದ ರೈತರು ನಮ್ಮವರೇ ಹಾಗಾಗಿ ಎಲ್ಲರ ಹಿತ ಕಾಪಾಡಬೇಕಾಗುತ್ತದೆ. ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಲಾಗುವುದು ಎಂದರು.

ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀರಾವರಿ ಬಗ್ಗೆ ಹೆಚ್ಚಿನ ಕಾಳಜಿ ಇರುವುದರಿಂದ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲು ಯಾವುದೇ ರೀತಿಯ ಸಮಸ್ಯೆ ಆಗದು. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು ಆದಷ್ಟು ಬೇಗ ರೈತರಿಗೆ ಪರಿಹಾರ ನೀಡುವ ಮೂಲಕ ನೀರಾವರಿಗೆ ಬೇಕಾಗುವಂತಹ ಎಲ್ಲಾ ರೀತಿಯ ಹಣದ ಸಮಸ್ಯೆಯನ್ನು ನಾವು ಬಗೆಹರಿಸುತ್ತೇವೆ. ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ವಿಶೇಷ ಸಭೆ ನಡೆಸಿದ್ದು ಯೋಜನೆ ಅನುಷ್ಠಾನಕ್ಕೆ ಮತ್ತಷ್ಟು ಹೆಚ್ಚಿನ ಒತ್ತು ನೀಡುತ್ತೇವೆ ಎಂದರು. ಇಲಾಖಾ ಸರ್ವೆ ಪ್ರಕಾರ ಎತ್ತಿನಹೊಳೆಯಲ್ಲಿ ಮಳೆಗಾಲದಲ್ಲಿ ಅಂದಾಜು 24.1 ಟಿ.ಎಂ.ಸಿ ನೀರು ಲಭ್ಯವಿದೆ ಈಗಾಗಲೇ ಚೆಕ್ ಡ್ಯಾಮ್ ಗಳ ಕೆಲಸ ಮುಗಿಯುವ ಹಂತಕ್ಕೆ ತಲುಪಿದ್ದು 100 ಮೀಟರ್ ಎತ್ತರಕ್ಕೆ ನೀರನ್ನು ಹರಿಸಲಾಗುವುದು ಎಂದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications