ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು 3 ವರ್ಷದ ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ
ಹಾಸನ, ನವೆಂಬರ್ 21: ಗಂಡ ಮತ್ತು ಅತ್ತೆಯ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಮೂರು ವರ್ಷದ ಮಗುವಿನನೊಂದಿಗೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಕುಂಚೇವು ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀನಿವಾಸ ಎಂಬುವವರ ಪತ್ನಿ ಭವ್ಯ (23) ಹಾಗೂ ವೇದಾಂತ್ (3) ಮೃತರು.
ನವೆಂಬರ್ 18 ಶನಿವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಭವ್ಯ ಅಂಗನವಾಡಿಯಿಂದ ಮಗನನ್ನು ಕರೆದುಕೊಂಡು ನಾಲೆಕಡೆಗೆ ತೆರಳಿದ್ದಾರೆ. ಇದನ್ನು ಗಮನಿಸಿದ ಕೆಲವರು ಕೂಗಿದರೂ ಕಿವಿಗೊಡದ ಭವ್ಯ ನಾಲೆಗೆ ಹಾರಿದ್ದಾರೆ. ಕೆಲವರು ರಕ್ಷಣೆಗೆ ಇಳಿದರಾದರೂ ನಾಲೆಯಲ್ಲಿ ನೀರು ವೇಗವಾಗಿ ಹರಿಯುತ್ತಿದ್ದ ಕಾರಣ ತಾಯಿ ಮಗು ಕೊಚ್ಚಿ ಹೋಗಿದ್ದಾರೆ. ಎರಡು ದಿನಗಳ ಕಾಲ ರಕ್ಷಣಾ ಇಲಾಖೆ ಶವಕ್ಕಾಗಿ ಹುಡುಕಾಟ ನಡೆಸಿತ್ತು. ಸೋಮವಾರ ಬೆಳಿಗ್ಗೆ ಚನ್ನರಾಯಪಟ್ಟಣ ತಾಲ್ಲೂಕಿನ ಗೆಜ್ಜಗಾರನಹಳ್ಳಿ ಬಳಿಯ ನಾಲೆಯಲ್ಲಿ ಮಗುವಿನ ಶವ ದೊರೆತರೆ, ಭವ್ಯ ಶವ ದೊಡ್ಡಕುಂಚೇವು ಗ್ರಾಮದ ಬಳಿಯ ಕೆರೆಯಲ್ಲಿ ಸಿಕ್ಕಿದೆ.
ಕಳೆದ ನಾಲ್ಕು ವರ್ಷಗಳ ಹಿಂದೆ ಗೆಜ್ಜಗಾರನಹಳ್ಳಿ ಗ್ರಾಮದ ಭವ್ಯಾಳನ್ನು ದೊಡ್ಡಕುಂಚೇವು ಕೊಪ್ಪಲು ಗ್ರಾಮದ ಶ್ರೀನಿವಾಸ್ ಎಂಬುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ಭವ್ಯ ನೋಡಲು ಚೆನ್ನಾಗಿದ್ದರಿಂದ ವರದಕ್ಷಿಣೆ ಪಡೆಯದೇ ಶ್ರೀನಿವಾಸ್ ವಿವಾಗ ಮಾಡಿಕೊಂಡಿದ್ದ. ಮದುವೆಯಾದ ಆರಂಭದಲ್ಲಿ ಗಂಡ ಹೆಂಡತಿ ಅನ್ಯೋನ್ಯವಾಗಿದ್ದರು. ದಂಪತಿಗೆ ಒಂದು ಗಂಡು ಮಗುವಿತ್ತು. ಆದರೆ ಕೆಲವು ದಿನಗಳಿಂದ ಶ್ರೀನಿವಾಸ್ ಅನೈತಿಕ ಸಂಬಂಧ ವಿಚಾರವಾಗಿ ಜಗಳ ನಡೆದು ರಾಜಿ ಸಂದಾನ ನಡೆಸಲಾಗಿತ್ತು. ಆದರೂ ಗಂಡನೊಂದಿಗೆ ಉತ್ತಮ ಒಡನಾಟವಿಲ್ಲದೆ, ಇತ್ತ ಅತ್ತೆಯ ಕಾಟದಿಂದ ಬೇಸತ್ತು ಭವ್ಯ 3 ತಿಂಗಳ ಅಸುಳೆಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದಲ್ಲದೆ ವರದಕ್ಷಿಣೆ ವಿಚಾರವಾಗಿ ಜಗಳ ನಡೆದು ಶ್ರೀನಿವಾಸ್ ಭವ್ಯ ಮೇಲೆ ಹಲ್ಲೆ ಮಾಡುತ್ತಿದ್ದ. ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿರುವ ಬಗ್ಗೆ ಭವ್ಯ ತನ್ನ ತಾಯಿ ಬಳಿ ಹೇಳಿಕೊಂಡಿದ್ದರು. ಗ್ರಾಮದ ಹಿರಿಯರು, ಸಂಬಂಧಿಕರು ಸೇರಿ ಹತ್ತಕ್ಕು ಹೆಚ್ಚು ಭಾರಿ ಪಂಚಾಯ್ತಿ ಮಾಡಿ ರಾಜಿ ಸಂಧಾನ ಮಾಡಿಸಿದ್ದರು. ಆದರೂ ತಾಯಿಗೆ ಕರೆ ಮಾಡುತ್ತಾಳೆಂದು ಮೊಬೈಲ್ ಕಿತ್ತುಕೊಂಡಿದ್ದ ಎನ್ನಲಾಗಿದೆ. ಅಲ್ಲದೆ ಶ್ರೀನಿವಾಸ್, ಅಕ್ಕಯಮ್ಮ ಯಾವುದಾದರೂ ಸಭೆ ಸಮಾರಂಭಕ್ಕೆ ಹೋಗುವಾಗ ಭವ್ಯ ಮತ್ತು ಮಗುವನ್ನು ಮನೆಯಲ್ಲಿ ಕೂಡಿ ಹಾಕಿ ಬೀಗ ಹಾಕಿಕೊಂಡು ಹೋಗುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಇತ್ತೀಚೆಗೆ ಶ್ರೀನಿವಾಸ್ ಹಾಗೂ ಅಕ್ಕಯಮ್ಮ ಸಂಬಂಧಕರ ಮನೆಗೆ ತೆರಳಿದ್ದರು. ಈ ವೇಳೆ ಮೂರು ದಿನಗಳ ಕಾಲ ಭವ್ಯ ಹಾಗೂ ಮಗುವನ್ನು ಮನೆಯಲ್ಲಿ ಕೂಡಿ ಹಾಕಿದ್ದರು. ತಿನ್ನಲು ಊಟವಿಲ್ಲದೆ ಭವ್ಯ ಹಾಗೂ ಮಗು ನರಳಾಡಿದ್ದರು. ಕೊನೆಗೆ ಕಿಟಕಿಯಲ್ಲಿ ಗ್ರಾಮದ ಯುವಕನ ಬಳಿ ಬಿಸ್ಕೆಟ್ ತರಿಸಿಕೊಂಡು ಮಗುವಿಗೆ ತಿನ್ನಿಸಿದ್ದರು. ನವೆಂಬರ್ 18 ರಂದು ಇದೆಲ್ಲವನ್ನು ತನ್ನ ತಾಯಿಗೆ ಕರೆ ಮಾಡಿ ಅಳಲು ಹೇಳಿಕೊಂಡಿದ್ದ ಭವ್ಯ ಕೊನೆಗೆ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ.
ಭವ್ಯ ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆ ಪತಿ ಶ್ರೀನಿವಾಸ್ ಹಾಗೂ ಅತ್ತೆ ಅಕ್ಕಯಮ್ಮ ನಾಪತ್ತೆಯಾಗಿದ್ದಾರೆ. ಹೊಳೆನರಸೀಪುರ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications