Get Updates
Get notified of breaking news, exclusive insights, and must-see stories!

ಕರ್ನಾಟಕ: ಖಾಸಗಿ ವಲಯದಲ್ಲಿ ವಾರ್ಷಿಕ 13 ಲಕ್ಷ ಉದ್ಯೋಗ ಸೃಷ್ಟಿ

ಹಾವೇರಿ ಮಾರ್ಚ್ 26: ಕರ್ನಾಟಕದಾದ್ಯಂತ ಈ ಹಿಂದಿನ ನಾಲ್ಕು ವರ್ಷದಲ್ಲಿ ಖಾಸಗಿ ವಲಯದಲ್ಲಿ ಪ್ರತಿ ವರ್ಷವು ಸರಿಸರು ಮಾರು 13 ಲಕ್ಷ ಉದ್ಯೋಗ ಸೃಜನೆಯಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲೆಯ ಸವಣೂರಿನಲ್ಲಿ ಭಾನುವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಕಲ್ಯಾಣ ಗ್ರಾಮದ ಜಿಟಿಟಿಸಿ ನಿವೇಶನದ ಬಳಿ ಆಯೋಜಿಸಿದ್ದ ಸಮಾರಂಭದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹಾಗೂ ಕಲ್ಯಾಣ ಗ್ರಾಮದಲ್ಲಿ ನೂತನ ತರಬೇತಿ ಸಂಕೀರ್ಣ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

13 Lakh Jobs Has Created Per Annum In Private Sector Of Karnataka, CM Bommai

ಉದ್ಯೋಗ ಸೃಷ್ಟಿಯಾಗಿರುವುದು ಸತ್ಯ. ಪ್ರಾವಿಡೆಂಟ್ ಫಂಡ್ ಮತ್ತು ಇಎಸ್ಐ ನಲ್ಲಿ ದಾಖಲಾಗಿರುವ 18ರಿಂದ 25 ವರ್ಷದ ಒಳಗಿನ ದಾಖಲಿಸಿಕೊಂಡಿರುವುದನ್ನು ಆಧರಿಸಿ, ಅಧ್ಯಯನ ಮಾಡಿ ಸಮಾಜಕ್ಕೆ ಈ ಮಾಹಿತಿ ನೀಡಲಾಗಿದೆ ಎಂದರು.

ಅನುತ್ತೀರ್ಣ ಅಭ್ಯರ್ಥಿಗಳಿಗೂ ಅವಕಾಶ

ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್, ಐಟಿ-ಬಿಟಿ ಅಷ್ಟೇ ಅಲ್ಲದೇ ಪಿಯುಸಿ ಅನುತ್ತೀರ್ಣ ಆದವರಿಗೂ ಉದ್ಯೋಗ ದೊರೆಯಬೇಕು. ಆಗ ಮಾತ್ರ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಒಂದಷ್ಟು ಯೋಜನೆ ರೂಪಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಶಿಗ್ಗಾಂವಿ, ಬಂಕಾಪುರ, ಉಡಚೆನ್ನಾಪುರ ಪಾಲಿಟೆಕ್ನಿಕ್ ಇಂಜಿನಿಯರಿಂಗ್ ಕಾಲೇಜಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ.

ಶಿಗ್ಗಾಂವಿ ಹಾಗೂ ಸವಣೂರು ಐಟಿಐಗಳು ತಲಾ ಮೂರು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಉನ್ನತೀಕರಿಸಲಾಗುತ್ತಿದೆ. ಜವಳಿ ತರಬೇತಿ ಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. KSRTI ಪಾಲಿಟೆಕ್ನಿಕ್ ನಿರ್ಮಾಣವಾಗುತ್ತಿದೆ. ಬರುವ ದಿನಗಳಲ್ಲಿ ದೊಡ್ಡ ಪ್ರಮಾಣದ ಕೌಶಲ್ಯಾಭಿವೃದ್ದಿ, ತರಬೇತಿಯನ್ನು ಎಲ್ಲಾ ಸಂಸ್ಥೆಗಳಲ್ಲಿಯೂ ದೊರೆಯುವಂತಾಗಬೇಕು ಎಂಬದು ನನ್ನ ಕನಸು ಎಂದು ಹೇಳಿದರು.

13 Lakh Jobs Has Created Per Annum In Private Sector Of Karnataka, CM Bommai

ತಾಲೂಕಿನ ಶಿಗ್ಗಾಂವಿಯ ಪಶು ವೈದ್ಯಕೀಯ ಪಾಲಿಟೆಕ್ನಿಕ್ ಅನ್ನು ಆರು ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇಲ್ಲಿನ ಎಲ್ಲ ಸಂಸ್ಥೆಗಳು ಸದೃಢವಾಗಿ ಬೆಳೆದು ಸಾವಿರಾರು ಯುವಕರಿಗೆ ತರಬೇತಿ ನೀಡಿದರೆ ಬದುಕಿನಲ್ಲಿ ಮುಂದೆ ಸಾಗುತ್ತಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಕೋವಿಡ್ ಇದ್ದರೂ ಕೂಡ ಆರ್ಥಿಕತೆ ಕಾಪಾಡಿಕೊಂಡು ಬಂದಿದ್ದರ ಪರಿಣಾಮವಾಗಿ ವಿದೇಶಿ ಬಂಡವಾಳ ಹೆಚ್ಚು ಹರಿದು ಬಂದಿದೆ. ಕರ್ನಾಟಕ ಪ್ರಗತಿಪರ ಆಡಳಿಗಾರರ ಕೈಯಲ್ಲಿ ಇದ್ದುದರಿಂದ ಇದು ಸಾಧ್ಯವಾಗಿದೆ ಎಂದರು.

ದೂರದೃಷ್ಟಿಯಿಂದ ಯುವಕರ ಭವಿಷ್ಯ ಬದಲು?

ಮುಂದಿನ ದಿನಗಳಲ್ಲಿ ಹೆಚ್ಚಿನ ಆರ್ಥಿಕತೆ, ಮೂಲ ಸೌಕರ್ಯ, ತರಬೇತಿ ಕೇಂದ್ರಗಳು ದೊಡ್ಡ ಪ್ರಮಾಣದಲ್ಲಿ ಆದರೆ ಕರ್ನಾಟಕದ ಯುವಕರಿಗೆ ಕೆಲಸ, ಸ್ವಾಭಿಮಾನದ ಬದುಕು ಬದುಕಲು ಸಾಧ್ಯ ಎಂಬ ನಿಟ್ಟಿನಲ್ಲಿ ಪ್ರಗತಿಪರ, ದೂರದೃಷ್ಟಿ ಇರುವ ಯುವಕರ ಭವಿಷ್ಯವನ್ನು ಬರೆಯಲು ಈ ನಿರ್ಣಯಗಳನ್ನು ಸರ್ಕಾರ ತೆಗೆದುಕೊಂಡಿದೆ.

ಇಲ್ಲಿನ ಜವಳಿ ಪಾರ್ಕಿನಿಂದ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ. ಸುಮಾರು 73 ಕೋಟಿ ರೂಪಾಯಿಗಳ ಜಿಟಿಟಿಸಿ ಇಲ್ಲಿ ಬರಲಿದೆ. ನಾಲ್ಕು ವರ್ಷಗಳ ಡಿಪ್ಲೊಮಾ ಕೋರ್ಸ್,ಅಲ್ಪಾವಧಿ, ಸರ್ಟಿಫೈಡ್ ಕೋರ್ಸುಗಳು ಲಭ್ಯವಿದೆ. ಜಗತ್ತಿನ ಆಧುನಿಕ ತರಬೇತಿಯನ್ನು ಇಲ್ಲಿ ಪಡೆಯಬಹುದು. ಜವಳಿ ಪಾರ್ಕ್, ಪಶು ವೈದ್ಯಕೀಯ ಪಾಲಿಟೆಕ್ನಿಕ್ ಆಗುತ್ತಿದೆ. ಈಜವಳಿ ಪಾರ್ಕಿನಲ್ಲಿಯೇ 10 ಸಾವಿರ ಜನರಿಗೆ ಉದ್ಯೋಗ ಲಭ್ಯವಾಗಲಿದೆ.

ಇದನ್ನು ಹೊರತುಪಡಿಸಿ 5 ಸಾವಿರ ಜನರಿಗೆ ಗಾರ್ಮೆಂಟ್ ಗಳಲ್ಲಿ ಕೆಲಸ ದೊರೆಯುತ್ತದೆ. ಯುವಕರಿಗೆ ಉದ್ಯೋಗದ ಭಿವಿಷ್ಯ ಬರೆಯಲು ಕಾರ್ಯಕ್ರಮ ರೂಪಿಸಿದ್ದು ಇದರ ಪ್ರಯೋಜನವನ್ನು ಯುವಕರು ಪಡೆಯಬೇಕು ಎಂದು ಸಲಹೆ ನೀಡಿದರು.

ಉದ್ಯೋಗದ ಗ್ಯಾರಂಟಿ: ಸಿಎಂ

ಜಿಟಿಟಿಸಿ ಬಹಳ ಪ್ರಮುಖ ಸಂಸ್ಥೆ. ಇಂಜಿನಿಯರಿಂಗ್ ಮುಗಿಸಿದ ನಂತರ ಜಿಟಿಟಿಸಿ ಬೆಂಗಳೂರಿನಲ್ಲಿ ಆರು ತಿಂಗಳ ತರಬೇತಿ ಪಡೆದ ಹಳೆ ನೆನಪುಗಳನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ಕಲಿಕೆಯಿಂದ ಟಾಟಾ ಮೊಟರ್ಸ್ ನಲ್ಲಿ ಉದ್ಯೋಗ ಲಭಿಸಿತು. ಇಲ್ಲಿ ತರಬೇತಿ ಪಡೆದವರಿಗೆ ಶೇಕಡಾ ನೂರಕ್ಕೆ ನೂರರಷ್ಟು ಕೆಲಸ ಗ್ಯಾರಂಟಿ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಭಾರತಕ್ಕೆ ಕೌಶಲ್ಯವಿರುವ ಯುವಕರು ಅಗತ್ಯವಾಗಿದೆ. ಶೇಕಡಾ 40 ರಷ್ಟಿರುವ ಯುವಜನಾಂಗಕ್ಕೆ ಕೌಶಲ್ಯ ನೀಡಿದರೆ ಕೈಗಾರೀಕರಣಕ್ಕೆ ಬಹಳ ದೊಡ್ಡ ಕೊಡುಗೆ ನೀಡಬಹುದು ಎಂದು ಸ್ಕಿಲ್ ಇಂಡಿಯಾ ಯೋಜನೆ ಪ್ರಾರಂಭ ಮಾಡಿದರು.ಯುವತಿಗೆ ಹಲವಾರು ವಿಧದ ತರಬೇತಿ ನೀಡಿ ಯುವಕರನ್ನು ತಯಾರು ಮಾಡಬಹುದಾಗಿದೆ. ರಾಜ್ಯದಲ್ಲಿ 1.80 ಲಕ್ಷ ಯುವಕರಿಗೆ ಸ್ಕಿಲ್ ಇಂಡಿಯಾ ಅಡಿ ತರಬೇತಿ ನೀಡಲಾಗಿದೆ ಎಂದು ವಿವರಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+