ಮದುವೆ ತಂದ ಆಪತ್ತು: ರಾಣೇಬೆನ್ನೂರಿನ ಒಂದೇ ಕುಟುಂಬದ 32 ಜನರಿಗೆ ಕೊರೊನಾ ಸೋಂಕು
ರಾಣೇಬೆನ್ನೂರು, ಜುಲೈ 17: ಮದುವೆ ಮನೆಯಲ್ಲೀಗ ಸೂತಕದ ಛಾಯೆ ಆವರಿಸಿದೆ. ವರನ ತಂದೆ ಹಾಗೂ ವಧುವಿನ ತಾಯಿ ಇಬ್ಬರೂ ಕೊರೊನಾ ವೈರಸ್ ಗೆ ಬಲಿಯಾಗಿದ್ದು, ಶುಕ್ರವಾರ ಒಂದೇ ದಿನ ಆ ಕುಟುಂಬದ 32 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Recommended Video
ಜೂನ್ 29 ರಂದು ಮಾರುತಿ ನಗರದ 55 ವರ್ಷದ ವ್ಯಕ್ತಿಯೊಬ್ಬರು ತನ್ನ ಮಗನ ಮದುವೆ ಮಾಡಿದ್ದರು. ಅದೇ ದಿನ ಆ ವ್ಯಕ್ತಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆಗಾಗಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು.
ಜು.7 ರಂದು ಚಿಕಿತ್ಸೆ ಫಲಕಾರಿಯಾಗದೆ ವರನ ತಂದೆ ದಾವಣಗೆರೆಯಲ್ಲಿ ಮೃತಪಟ್ಟಿದ್ದರು. ಇದಾದ ನಾಲ್ಕು ದಿನದಲ್ಲಿ ಅಂದರೆ ಜು.11 ರಂದು ವಧುವಿನ ತಾಯಿ ಕೂಡ ಕೊರೊನಾ ಸೋಂಕಿಗೆ ಬಲಿಯಾಗಿದ್ದರು.

ವರನ ತಂದೆಗೆ ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಒಂದೇ ಕುಟುಂಬದ 38 ಜನರನ್ನು ಅಂತರವಳ್ಳಿ ರಸ್ತೆಯ ಸರ್ಕಾರಿ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ಎಲ್ಲರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಆ ಪೈಕಿ 32 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನೂ 6 ಜನರ ವರದಿ ಬರುವುದು ಬಾಕಿಯಿದೆ.

ಕೊರೊನಾ ಸೋಂಕು ಆರಂಭದಿಂದಲೂ ದಿನಕ್ಕೆ 1 ಅಥವಾ 2 ಪ್ರಕರಣ ಕಾಣಿಸಿಕೊಳ್ಳುತ್ತಿದ್ದ ವಾಣಿಜ್ಯ ನಗರಿ ರಾಣೆಬೆನ್ನೂರಿನಲ್ಲಿ ಮದುವೆ ಸಮಾರಂಭವೊಂದರ ಪರಿಣಾಮ ಇಂದು 32 ಜನರಿಗೆ ಸೋಂಕು ದೃಢಪಟ್ಟಿದ್ದು, ಜನತೆ ಬೆಚ್ಚಿ ಬಿದ್ದಿದ್ದಾರೆ. ಇಂದು ಹಾವೇರಿ ಜಿಲ್ಲೆಯಲ್ಲಿ 58 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 389 ಕ್ಕೆ ಏರಿಕೆಯಾಗಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications