ಶೇ.60 ಪರ್ಸೆಂಟ್ ಕಮಿಷನ್ ಆರೋಪವು SIT ತನಿಖೆ ಆಗಲಿ: ಕಮಿಟ್ಮೆಂಟ್ ಇಲ್ಲದ ಕಡೆ ಕಮಿಟಿ ರಚನೆ
ಹಾವೇರಿ, ಏಪ್ರಿಲ್ 12: ಬಿಜೆಪಿ ವಿರುದ್ಧ ಮಾಡಿದ್ದ 40% ಭ್ರಷ್ಟಾಚಾರದ ಆರೋಪ ಸಾಬೀತಾಗಿಲ್ಲ. ಆದರೆ ತನಿಖೆಗೆ ಎಸ್ಐಟಿ ರಚಿಸಲು ತೀರ್ಮಾನಿಸಲಾಗಿದೆ. ಇದರ ಬೆನ್ನಲ್ಲೆ ಕರ್ನಾಟಕ ರಾಜ್ಯ ಸರ್ಕಾರವು ಸರ್ಕಾರದ ವಿರುದ್ದ ಕೇಳಿ ಬಂದಿರುವ 60% ಕಮಿಷನ್ ಆರೋಪವನ್ನೂ ಸೇರಿಸಿ ಎಸ್ ಐಟಿ ತನಿಖೆ ನಡೆಸಬೇಕು. ವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ 40% ಕಮಿಷನ್ ಆರೋಪದ ತನಿಖೆಗೆ ಎಸ್ ಐಟಿ ರಚಿಸಲು ತೀರ್ಮಾನಿಸಿ ಕುರಿತು ಪ್ರತಿಕ್ರಿಯಿಸಿದ ಅವರು, ಅವರು ಬಿಜೆಪಿ ಮೇಲೆ ಸುಳ್ಳು ಭ್ರಷ್ಟಾಚಾರದ ಆರೋಪ ಮಾಡಿದ್ದರು. ಸುಳ್ಳು ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಈಗಾಗಲೇ ಆಯೋಗ ರಚನೆ ಮಾಡಿದ್ದರು. ಆ ಕಮಿಷನ್ ವರದಿಯಲ್ಲಿ ಏನಿದೆ ಎನ್ನುವುದು ಸಾರ್ವಜನಿಕರಿಗೆ ಗೊತ್ತಾಗಬೇಕು.

ರಾಜ್ಯ ಸರ್ಕಾರ ಇಂತಹ ವಿಷಯಗಳಲ್ಲಿ ಕದ್ದು ಮುಚ್ಚಿ ಯಾಕೆ ಮಾಡುತ್ತಾರೆ. ಕಳೆದ ಎರಡು ವರ್ಷದಲ್ಲಿ ಈ ಸರ್ಕಾರದ ವಿರುದ್ದ 60% ಆರೋಪ ಕೇಳಿ ಬಂದಿದೆ. ಅದನ್ನೂ ಸೇರಿಸಿ ಎಸ್ ಐಟಿ ತನಿಖೆಗೆ ಕೊಡಲಿ ಎಂದು ಆಗ್ರಹಿಸಿದರು.
ಕರ್ನಾಟಕ ಸರ್ಕಾರದಲ್ಲಿ 60% ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪಿಡಬ್ಲುಡಿ, ಅಬಕಾರಿ, ಎಲೆಕ್ಟ್ರಿಕ್ ಕಂಟ್ರಾಕ್ಟರ್ ಅಸೊಸಿಯೇಷನ್ ನವರು ಬಹಿರಂಗ ಆರೋಪಿಸಿದ್ದಾರೆ. ತಮ್ಮ ಸರ್ಕಾರದಲ್ಲಿ ನಡೆದಿರುವ ಆರೋಪದ ಸಮೇತ ತನಿಖೆ ಮಾಡಬೇಕು. ನಮ್ಮ ಮೇಲೆ ಸುಳ್ಳು ಪ್ರಚಾರ ರಾಜಕಿಯ ದ್ವೇಷದಿಂದ ಮಾಡಿರುವುದಕ್ಕೆ ಎಲ್ಲಿ ದಾಖಲೆ ಸಿಗುತ್ತದೆ. ಈಗ ಸಿಎಂ ಹಾಗೂ ಡಿಸಿಎಂ ಅವರು ಕಮಿಷನ್ ಕೇಳಿದ್ಧರೆ ಲೋಕಾಯುಕ್ತಕ್ಕೆ ದೂರು ನೀಡಿ ಎಂದು ಹೇಳುತ್ತಾರೆ. ನಾವು ಇದ್ದಾಗಲೂ ಲೊಕಾಯುಕ್ತಕ್ಕೆ ದೂರು ಕೊಡಿ ಅಂತ ಹೇಳಿದ್ದೆ ಕೊಡಲಿಲ್ಲ ಎಂದು ತಿಳಿಸಿದರು.
ಗುತ್ತಿಗೆದಾರರು ಮಾಡಿರುವ ಕಾಮಗಾರಿಗೆ ಹಿರಿತನದ ಆಧಾರದಲ್ಲಿ ಹಣ ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಮಾಡಿದ ಕೆಲಸಕ್ಕೆ ಕೊಡಲು ಹಣ ಇಲ್ಲ. ಹೀಗಾಗಿ ಗುತ್ತಿಗೆದಾರರು ಟೆಂಡರ್ ಆಗಿದ್ದರೂ ಕೆಲಸ ಮಾಡಲು ಮುಂದೆ ಬರುತ್ತಿಲ್ಲ ಎಂದರು.

ರಾಜ್ಯದಲ್ಲಿ ಜಾತಿ ಗಣತಿ ರಾಜಕಾರಣ..!
ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ರಾಜಕಾರಣ ಮಾಡುತ್ತಿದೆ. ಮೊದಲೇ ಗಣತಿ ಮಾಡುವ ಮುಂಚೆ ಜಾತಿ ಗಣತಿ ಅಂತ ಆದೇಶ ಮಾಡಬೇಕಿತ್ತು. ಸಾಮಾಜಿಕ ಆರ್ಥಿಕ ಸಮೀಕ್ಷೆ ಅಂತ ಹೇಳಿ ಜಾತಿ ಬರೆಸಿಕೊಂಡು ಬಂದಿದ್ದಾರೆ.
ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರು ಕೊಟ್ಟ ವರದಿಗೆ ಕಾರ್ಯದರ್ಶಿ, ಸದಸ್ಯರು ಸಹಿ ಹಾಕಿಲ್ಲ. ಇನ್ಬೊಬ್ಬ ಅಧ್ಯಕ್ಷರು ಅದಕ್ಕೆ ತೇಪೆ ಹಚ್ಚಿರುವ ವರದಿ ನೀಡಿದ್ದಾರೆ. ಈ ಸರ್ಕಾರಕ್ಕೆ ಹಿಂದುಳಿದ ವರ್ಗದವರ ಬಗ್ಗೆ ಕಾಳಜಿ ಇದ್ದರೆ ವರದಿಯನ್ನು ಬಹಿರಂಗ ಮಾಡಿ, ಅವರಿಗಾಗಿ ಏನು ಯೋಜನೆ ಮಾಡುತ್ತಾರೆ ಎಂಬುದನ್ನು ಹೇಳಬೇಕು.
ಕಮಿಟ್ಮೆಂಟ್ ಇಲ್ಲದ ಕಡೆ ಕಮಿಟಿ..
ಶುಕ್ರವಾರದ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತಾರೆ ಎಂದು ಹೇಳಿದ್ದರು. ಈಗ ಮತ್ತೆ ಮುಂದಿನ ಸಂಪುಟದಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ. ಅದರ ಅಧ್ಯಯನಕ್ಕೆ ಮತ್ತೊಂದು ಸಂಪುಟ ಉಪ ಸಮಿತಿ ಮಾಡುತ್ತಾರೆ. ಮುಖ್ಯಮಂತ್ರಿಗಳು ಹಿಂದುಳಿದವರ ಬಗ್ಗೆ ಬರೆ ಭಾಷಣ ಮಾಡುವುದರಿಂದ ಹೊಟ್ಟೆ ತುಂಬಲ್ಲ. ಮುಖ್ಯಮಂತ್ರಿಗಳು ಸುಮಾರು ಮೂರ್ನಾಲ್ಕು ವರ್ಷದಿಂದ ಇದನ್ನೆ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಕಮಿಟ್ ಮೆಟ್ ಇಲ್ಲ. ಎಲ್ಲಿ ಕಮಿಟ್ ಮೆಟ್ ಇರುವುದಿಲ್ಲವೋ ಅಲ್ಲಿ ಕಮಿಟಿ ನೇಮಕ ಆಗುತ್ತದೆ ಎಂದು ಅವರು ಲೇವಡಿ ಮಾಡಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications