Kannada Sahitya Sammelana : ಇಂದಿನಿಂದ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಾವೇರಿ, ಜನವರಿ 6: ಇಂದಿನಿಂದ ಜನವರಿ 8 ಮೂರು ದಿನಗಳ ಕಾಲ ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕಳೆದ ಕೆಲ ತಿಂಗಳಿನಿಂದ ಸಮ್ಮೇಳನಕ್ಕೆ ಸಿದ್ಧತೆಗಳು ಭರದಿಂದ ನಡೆದಿದ್ದು, ಶುಕ್ರವಾರ ನುಡಿ ಜಾತ್ರೆಯ ತೇರಿಗೆ ಚಾಲನೆ ಸಿಗಲಿದೆ.
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಏಲಕ್ಕಿ ಕಂಪಿನ ನಗರಿ ಹಾವೇರಿ ಸಂಪೂರ್ಣವಾಗಿ ಸಜ್ಜಾಗಿದೆ. ಸುಮಾರು 128 ಎಕರೆ ವಿಸ್ತೀರ್ಣದಲ್ಲಿ ವಿವಿಧ ವೇದಿಕೆಗಳನ್ನು ನಿರ್ಮಿಸಲಾಗಿದೆ. ಪ್ರಧಾನ ವೇದಿಕೆಯಲ್ಲಿ ಸುಮಾರು 30 ಸಾವಿರ ಜನರು ಕುಳಿತುಕೊಳ್ಳಲು ಆಸನ ಕಲ್ಪಿಸಲಾಗಿದೆ. ಇದರ ಜೊತೆಗೆ ಸಮನಾಂತರ ವೇದಿಕೆಗಳನ್ನು ನಿರ್ಮಿಸಲಾಗಿದ್ದು, ಅಲ್ಲಿಯೂ ಸಹ ಸಾವಿರಾರು ಜನರಿಗೆ ಕುಳಿತುಕೊಳ್ಳುವ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.
ಈ ಮೂರು ವೇದಿಕೆಗಳಲ್ಲಿ ವಿವಿಧ ಗೋಷ್ಠಿಗಳು ನಡೆಯಲಿದ್ದು, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಪುಸ್ತಕ ಮತ್ತು ವಾಣಿಜ್ಯ ಬಳಕೆಗೆ ಸುಮಾರು 600 ಮಳಿಗೆಗಳನ್ನು ಸಿದ್ಧಪಡಿಸಲಾಗಿದೆ. ಪ್ರಮುಖವಾಗಿ ಮೂರು ಬೃಹತ್ ಮಳಿಗೆಗಳಲ್ಲಿ ಪ್ರದರ್ಶನ ಏರ್ಪಡಿಸಲಾಗಿದೆ. ಒಂದರಲ್ಲಿ ತೋಟಗಾರಿಕೆ ಇಲಾಖೆ ಫಲಪುಷ್ಪಪ್ರದರ್ಶನ, ಎರಡನೇಯದರಲ್ಲಿ ವಾರ್ತಾ ಇಲಾಖೆ ಪ್ರದರ್ಶನ ಮತ್ತು ಮೂರನೇಯ ಪ್ರದರ್ಶನವನ್ನು ಕಸಾಪ ಏರ್ಪಡಿಸಿತ್ತು. ಕಸಾಪ ಪ್ರದರ್ಶನದಲ್ಲಿ ವಿಶೇಷವಾಗಿ ಕನ್ನಡದ ಪ್ರಥಮಗಳ ಪುಸ್ತಕಗಳ ಪ್ರದರ್ಶನ ಮಾಡಲಾಗಿದೆ.

ಸಾಹಿತ್ಯ ಸಮ್ಮೇಳನ ನಡೆಯುವ 6,7 ಮತ್ತು 8 ರಂದು ಸಂಜೆ 7 ಗಂಟೆಯಿಂದ 10 ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗಿದೆ. 'ನಾವಾಡುವ ನುಡಿಯೇ ಕನ್ನಡ ನುಡಿ' ಶೀರ್ಷಿಕೆ ಅಡಿಯಲ್ಲಿ ಚಲನಚಿತ್ರ ಗೀತೆಗಳ ಗಾಯನ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿದೆ. ಜೊತೆಗೆ ಗಂಗಾವತಿ ಪ್ರಾಣೇಶ್ ಅವರ ವತಿಯಿಂದ ಹಾಸ್ಯ ಕಾರ್ಯಕ್ರಮ ನಡೆಯಲಿದೆ.

86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಅಂಗವಾಗಿ 86 ಸಾಧಕರಿಗೆ ಸನ್ಮಾನ ಮತ್ತು 86 ಕೃತಿಗಳನ್ನು ಬಿಡುಗಡೆ ಮಾಡುತ್ತಿರುವುದು ಸಾಹಿತ್ಯ ಸಮ್ಮೇಳನದ ವಿಶೇಷವಾಗಿದೆ.
-
Prem: ಸರ್ಸೆ ಸೆರಗ ಹಾಡನ್ನ ಎಲ್ರೂ ತಪ್ಪಾಗಿ ಅರ್ಥ ಮಾಡ್ಕೊಂಡಿದ್ದಾರೆ, ನನ್ನ ಉದ್ದೇಶ ಅದಾಗಿರಲಿಲ್ಲ: ಪ್ರೇಮ್ -
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications