ಬ್ಯಾಡಗಿಯಲ್ಲಿ ಸಾಲ ಕೊಡಲು ನಿರಾಕರಿಸಿದ ಬ್ಯಾಂಕ್ಗೆ ಬೆಂಕಿ ಹಚ್ಚಿದ ಭೂಪ ಅಂದರ್!
ಹಾವೇರಿ, ಜನವರಿ 11: ಬ್ಯಾಂಕ್ನಲ್ಲಿ ಸಾಲಕ್ಕೆ ಅರ್ಜಿ ಸಲ್ಲಿಸುವವರ ಸಂಖ್ಯೆಗೇನೂ ಕಡಿಮೆಯಿಲ್ಲ. ವೈಯಕ್ತಿಕ ಸಾಲ, ಕೃಷಿ ಸಾಲ, ಬೆಳೆ ಸಾಲ, ಗೃಹ ಸಾಲ, ವ್ಯಾಪಾರಕ್ಕಾಗಿ ಸಾಲ ಸೇರಿದಂತೆ ಹಲವು ವಿಷಯಗಳಿಗಾಗಿ ಗ್ರಾಹಕರು ಸಾಲ ಪಡೆಯುತ್ತಾರೆ. ಅದೇ ರೀತಿ ಸಾಲಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿಯೊಬ್ಬ ಪೊಲೀಸರ ಅತಿಥಿಯಾಗಿದ್ದಾರೆ. ಈ ಕಥೆಯಲ್ಲಿರುವ ಟ್ವಿಸ್ಟ್ ಹಾಗಿದೆ.
ಬ್ಯಾಂಕ್ ಅಧಿಕಾರಿಗಳು ಸಾಲ ನೀಡುವುದಕ್ಕೆ ನಿರಾಕರಿಸಿದರು ಎಂದ ಮಾತ್ರಕ್ಕೆ ವ್ಯಕ್ತಿಯೊಬ್ಬ ಇಡೀ ಬ್ಯಾಂಕಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಹೆಡಿಗೊಂಡ ಗ್ರಾಮದಲ್ಲಿ ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಟ್ಟಿಹಳ್ಳಿ ಗ್ರಾಮದ ನಿವಾಸಿ ವಾಸೀಮ್ ಅಕ್ರಂ ಮುಲ್ಲಾ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಬ್ಯಾಂಕ್ ರಜೆಯಿದ್ದ ಸಮಯದಲ್ಲಿ ಬ್ಯಾಂಕ್ಗೆ ಬೆಂಕಿ ಹಚ್ಚಿ ಪರಾರಿಯಾಗುತ್ತಿದ್ದ ಆರೋಪಿಯು ಸ್ಥಳೀಯರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಬ್ಯಾಂಕ್ ದಾಖಲೆ ನಾಶಪಡಿಸುವ ಹುನ್ನಾರ:
ಬ್ಯಾಂಕ್ ಅಧಿಕಾರಿಗಳು ಸಾಲ ನೀಡುವುದಕ್ಕೆ ನಿರಾಕರಿಸಿದರು ಎಂಬ ಕಾರಣಕ್ಕೆ ಬ್ಯಾಂಕ್ಗೆ ಬೆಂಕಿ ಹಚ್ಚಲು ಮುಂದಾಗಿರುವ ಬಗ್ಗೆ ಆರೋಪಿ ವಾಸೀಂ ಅಕ್ರಂ ಮುಲ್ಲಾ ಹೇಳಿಕೆ ನೀಡಿದ್ದಾರೆ. ಆದರೆ ಈ ಕಥೆಯಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಬ್ಯಾಂಕ್ಗೆ ಬೆಂಕಿ ಹಚ್ಚುವಲ್ಲಿ ಕೆಲವು ಬ್ಯಾಂಕ್ ಸಿಬ್ಬಂದಿಯ ಪಾತ್ರವಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಬ್ಯಾಂಕ್ ದಾಖಲೆಗಳನ್ನು ನಾಶಪಡಿಸುವ ಉದ್ದೇಶದಿಂದ ಇದು ಯೋಜಿತ ಕೃತ್ಯ ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.
ಬ್ಯಾಂಕ್ ಕಂಪ್ಯೂಟರ್, ಸಿಸಿಟಿವಿ ಕ್ಯಾಮೆರಾ ಭಸ್ಮ:
ಬೈಕ್ನಲ್ಲಿ ಬಂದ ಆರೋಪಿಗಳು ಬೆಂಕಿ ಹಚ್ಚುವ ಮುನ್ನ ಬ್ಯಾಂಕ್ನ ಕಿಟಕಿ ಗಾಜುಗಳನ್ನು ಒಡೆದು ಪೆಟ್ರೋಲ್ ಸುರಿದಿದ್ದನು. ಈ ಘಟನೆಯಲ್ಲಿ ಬ್ಯಾಂಕ್ನಲ್ಲಿದ್ದ ಕಂಪ್ಯೂಟರ್ಗಳು, ಸಿಸಿಟಿವಿ ಕ್ಯಾಮೆರಾಗಳು, ದಾಖಲೆಗಳು ಮತ್ತು ಪೀಠೋಪಕರಣಗಳು ಸುಟ್ಟು ಬೂದಿಯಾಗಿವೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಆರೋಪಿ:
ಬ್ಯಾಂಕ್ನಿಂದ ಹೊಗೆ ಬರುತ್ತಿರುವುದನ್ನು ಕಂಡ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದರು. ಈ ವೇಳೆ ಆರೋಪಿ ವಾಸೀಂ ಅಕ್ರಂ ಮುಲ್ಲಾ ಓಡಿ ಹೋಗುವುದನ್ನು ಸ್ಥಳೀಯರು ಗಮನಿಸಿದ್ದು, ಆತನನ್ನು ಹಿಡಿಯಲು ಪ್ರಯತ್ನಿಸಿದಾಗ ಆರೋಪಿ ಚಾಕು ತೋರಿಸಿ ಸ್ಥಳೀಯರನ್ನು ಬೆದರಿಸಲು ಮುಂದಾಗಿದ್ದಾನೆ. ನಂತರದಲ್ಲಿ ಗ್ರಾಮಸ್ಥರು ಒಟ್ಟುಗೂಡಿ ಆರೋಪಿಯನ್ನು ಹಿಡಿದಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications