ಹಾವೇರಿ: ಚುನಾವಣೆಯಲ್ಲಿ ಎದುರಾಳಿಯನ್ನು ದುರ್ಬಲ ಎಂದು ತಿಳಿಯಬಾರದು
ಹಾವೇರಿ, ಅಕ್ಟೋಬರ್ 13: ಯುದ್ಧದ ಸಂದರ್ಭದಲ್ಲಿ ನಮ್ಮ ಎದುರಾಳಿಗಳು ಎಷ್ಟೇ ದುರ್ಬಲವಾಗಿದ್ದರೂ ನಾವು ಮೈಮರೆಯಬಾರದು, ಎದುರಾಳಿ ಪ್ರಬಲವಾಗಿದ್ದಾನೆ ಎಂದೇ ಭಾವಿಸಬೇಕು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅ.28 ರಂದು ನಡೆಯಲಿದ್ದು, ಬಿಜೆಪಿಯಿಂದ ಸ್ಪರ್ಧಿಸಿರುವ ಎಸ್.ವಿ ಸಂಕನೂರು ಪರವಾಗಿ ಹಿರೆಕೇರೂರಿನಲ್ಲಿ ಪಕ್ಷ ಸಂಘಟನೆ ಹಾಗೂ ಚುನಾವಣಾ ಪ್ರಚಾರ ಕುರಿತು ಬಿ.ಸಿ ಪಾಟೀಲ್ ನೇತೃತ್ವದಲ್ಲಿ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.
ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಬಿ.ಸಿ ಪಾಟೀಲ್, ಪಶ್ಚಿಮ ಪದವೀಧರ ಕ್ಷೇತ್ರದ ನಾಲ್ಕು ಜಿಲ್ಲೆಗಳಲ್ಲಿ ಬಿಜೆಪಿಯ 23 ಶಾಸಕರು, ಐವರು ಮಂತ್ರಿಗಳು, ನಾಲ್ವರು ಸಂಸದರಿದ್ದು, ಪಶ್ಚಿಮ ಪದವೀಧರ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆದರೂ ಸಹ ಎದುರಾಳಿಯನ್ನು ಹಗುರವಾಗಿ, ನಮ್ಮ ಗೆಲುವು ಸುಲಭ ಎಂದು ಪರಿಗಣಿಸದೆ ಇದು ಹೊಸ ಚುನಾವಣೆ ಎಂದು ಅಷ್ಟೇ ಹುಮ್ಮಸ್ಸಿನಿಂದ ಮನೆಮನೆಗೆ ಹೋಗಿ ಪಕ್ಷದ ಪರ ಪ್ರಚಾರ ಮಾಡಬೇಕು. ಶಿಕ್ಷಣ ಸಂಸ್ಥೆಗಳ ಮುಖಂಡರು, ಶಿಕ್ಷಕರ ಸಂಘದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಯೊಬ್ಬರು ದುಡಿಯಬೇಕು ಎಂದು ಕರೆ ನೀಡಿದರು.
ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿಯಿಂದ ಹಿಡಿದು ಶಾಸಕರವರೆಗೆ ಎಲ್ಲರೂ ಅನುಭವಿಗಳೇ ಇರುವುದರಿಂದ ಈ ಚುನಾವಣೆಯನ್ನು ಗೆಲ್ಲಲೇಬೇಕು, ಸಂಕನೂರು ಅವರಿಗೆ ಜಯ ದೊರಕಿಸಿಕೊಡುವ ಚುನಾವಣಾ ನೀತಿ ರೂಪಿಸಬೇಕು ಎಂದು ಹೇಳಿದರು.
ಅಕ್ಟೋಬರ್ 18 ರಂದು ಹಿರೇಕೆರೂರು ತಾಲೂಕಿಗೆ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಶೆಟ್ಟರ್ ಭೇಟಿಗೂ ಮುನ್ನ ಪಕ್ಷ ಸಂಘಟನೆಗೆ ಒತ್ತು ನೀಡಲು ಈ ಪೂರ್ವಭಾವಿ ಸಭೆ ನಡೆಸಲಾಗಿದೆ. ಕ್ಷೇತ್ರದಲ್ಲಿ ಸಂಘಟಿತ ಉತ್ಸಾಹಿ ಬಿಜೆಪಿಯ ಕಾರ್ಯಕರ್ತರ ಪಡೆಯೇ ಇದೆ. ಎಲ್ಲರೂ ಎಸ್.ವಿ ಸಂಕನೂರರ ಗೆಲುವಿಗಾಗಿ ಶ್ರಮಿಸಬೇಕು ಎಂದು ಬಿ.ಸಿ ಪಾಟೀಲ್ ಹೇಳಿದರು.
ಅಭ್ಯರ್ಥಿ ಎಸ್.ವಿ ಸಂಕನೂರು ಮಾತನಾಡಿ, ಹಿರೇಕೆರೂರಿನಲ್ಲಿ ಬಿಜೆಪಿಯ ಸಾಹಸಿ ಕಾರ್ಯಪಡೆಯೇ ಇದೆ. ಕೃಷಿ ಸಚಿವರಾದ ಬಿ.ಸಿ ಪಾಟೀಲರ ನೇತೃತ್ವದಲ್ಲಿ ಒಳ್ಳೆಯ ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ತಮ್ಮ ಗೆಲುವಿಗೆ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಶ್ರಮಿಸುವಂತೆ ಮನವಿ ಮಾಡಿದರು. ಸಭೆಯಲ್ಲಿ ತಾಲೂಕು ಬಿಜೆಪಿ ಮಂಡಳ ಅಧ್ಯಕ್ಷ ಷಣ್ಮುಖಯ್ಯ ಮಳಿಮಠ್, ಪಟ್ಟಣ ಪಂಚಾಯಿತಿ ಸದಸ್ಯರಾದ ಗುರುಶಾಂತ ಎತ್ತಿನಹಳ್ಳಿ, ಮಹೇಂದ್ರ ಬಡಳ್ಳಿ, ಶಕ್ತಿಕೇಂದ್ರದ ಪ್ರಮುಖರು ಸೇರಿದಂತೆ ಮತ್ತಿತ್ತರರು ಭಾಗವಹಿಸಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications