ವಿಧಾನಸಭೆ ಚುನಾವಣೆ 2023: ಹಿರೇಕೆರೂರಿನಲ್ಲಿ ಧೂಳೆಬ್ಬಿಸಿದ ಕಿಚ್ಚ-ಕೌರವನ ಜುಗಲ್ಬಂದಿ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯು ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ಎಲ್ಲ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಮತದಾರರ ಮನಗೆಲ್ಲಲು ಕಸರತ್ತು ನಡೆಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಸಿನಿಮಾ ತಾರೆಯರ ಪ್ರಚಾರವೂ ಅಬ್ಬರದಿಂದ ಕೂಡಿದೆ.
ಕಳೆದ ಎರಡು ದಿನಗಳಿಂದ ಸತತವಾಗಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿರುವ ಕಿಚ್ಚ ಸುದೀಪ್, ಇಂದು ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಯ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಇದಕ್ಕೂ ಮುನ್ನ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಪ್ರಚಾರದಲ್ಲಿ ಭಾಗಿಯಾಗಿದ್ದರು.

ಗುರುವಾರ, ಏಪ್ರಿಲ್ 27ರಂದು ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್ ಭರ್ಜರಿ ಪ್ರಚಾರ ಮಾಡಿದರು. ಬಳ್ಳಾರಿಯ ಕೂಡ್ಲಿಗಿಯಲ್ಲಿ ರೋಡ್ ಶೋ ಹಾಗೂ ಬಹಿರಂಗ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿ ಲೋಕೇಶ ವಿ ನಾಯಕ ಪರ ಮತಯಾಚನೆ ಪ್ರಚಾರ ನಡೆಸಿದರು.
ನಂತರ ಅಲ್ಲಿಂದ ನೇರವಾಗಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿಗೆ ಬಂದ ಕಿಚ್ಚ ಸುದೀಪ್, ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್ ಪರ 2 ಕಿಮೀ ರೋಡ್ ಶೋ ನಡೆಸಿದರು. ಈ ವೇಳೆ ಸಾವಿರಾರು ಅಭಿಮಾನಿಗಳು ಡೊಳ್ಳು, ನಗಾರಿ ಬಾರಿಸಿ ಸುದೀಪ್ಗೆ ಅದ್ಧೂರಿ ಸ್ವಾಗತ ಕೋರಿದರು.
ಬಳಿಕ ಬ್ಯಾಡಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಬಳ್ಳಾರಿ ಪರ ಪ್ರಚಾರ ಮಾಡಿದ ಕಿಚ್ಚ ಸುದೀಪ್ ಅಲ್ಲಿಂದ ಹಿರೇಕೆರೂರಿಗೆ ತೆರಳಿದರು. ಅಲ್ಲಿನ ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ್ ಪರವಾಗಿ ರೋಡ್ ಶೋನಲ್ಲಿ ಭಾಗವಹಿಸಿ ಮತಯಾಚನೆ ಮಾಡಿದರು.

ಬಿ.ಸಿ. ಪಾಟೀಲ್ ಮತ್ತು ಕಿಚ್ಚ ಸುದೀಪ್ ಇಬ್ಬರೂ ಸಿನಿಮಾ ಕ್ಷೇತ್ರದವರಾಗಿರುವುದರಿಂದ ಹಿರೇಕೆರೂರಿನಲ್ಲಿ ಅಭಿಮಾನಿಗಳ ಮಹಾ ಸಂಗಮವಾಗಿತ್ತು. ಕಿಚ್ಚ ಮತ್ತು ಕೌರವ ಖ್ಯಾತಿಯ ಸುದೀಪ್ ಹಾಗೂ ಬಿ.ಸಿ. ಪಾಟೀಲ್ರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟರು.
ನಂತರ ಮಾತನಾಡಿದ ಕಿಚ್ಚ ಸುದೀಪ್, ಭಾರತ ಸುಭಿಕ್ಷವಾಗಿ ಇರಬೇಕೆಂದರೆ ಮತ್ತೆ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು. ಅವರ ಮಾರ್ಗದರ್ಶನದಲ್ಲಿ ದೇಶ ಮತ್ತು ರಾಜ್ಯಗಳು ಮುನ್ನಡೆಯಲಿ. ಇದು ಸಾಧ್ಯವಾಗಬೇಕಾದರೆ ಬಿಜೆಪಿಗೆ ಮತ ನೀಡಿ ಎಂದರು.
ಹಿರೇಕೆರೂರು ತಾಲ್ಲೂಕಿನಲ್ಲಿ ಬಿ.ಸಿ. ಪಾಟೀಲರು ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ ಎನ್ನುವುದಕ್ಕೆ ಇಂದು ನಿಮ್ಮ ಉತ್ಸಾಹ ನೋಡಿದರೆ ಗೊತ್ತಾಗುತ್ತದೆ. ನೀವು ನಿಮ್ಮ ಜನನಾಯಕನ ಮೇಲೆ ಇಟ್ಟ ಪ್ರೀತಿ, ಅಭಿಮಾನ ಇದರಿಂದ ಗೊತ್ತಾಗುತ್ತಿದೆ. ಇಲ್ಲಿ ಸೇರಿರುವ ತಾವೆಲ್ಲ ಬಿಜೆಪಿಗೆ ಮತ ನೀಡಬೇಕೆಂದು ಮನವಿ ಮಾಡಿದರು.
ನಂತರ ಮಾತನಾಡಿದ ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ್, ಕರ್ನಾಟಕದ ಹೆಮ್ಮೆಯ ನಟ ಹಾಗೂ ಅಪಾರ ಅಭಿಮಾನಿಗಳನ್ನು ಹೊಂದಿರುವ ಕಿಚ್ಚ ಸುದೀಪ್ ಇಂದು ನಮ್ಮ ಕ್ಷೇತ್ರಕ್ಕೆ ಬಂದು ಪ್ರಚಾರ ನಡೆಸಿರುವುದು ನನಗೆ ಶಕ್ತಿ ಬಂದಂತಾಗಿದೆ. ನನ್ನ ಅಭಿವೃದ್ಧಿ ಕೆಲಸಗಳು ಯಾವತ್ತೂ ಕೈಬಿಡಲ್ಲ ಎಂದು ಹೇಳಿದರು.
ಶುಕ್ರವಾರ ಗದಗದಲ್ಲಿ ಕಿಚ್ಚನ ಅಬ್ಬರ
ಕಿಚ್ಚ ಸುದೀಪ್ ಅವರು ಶುಕ್ರವಾರದಂದು ಗದಗ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ನೆಚ್ಚಿನ ನಟನನ್ನು ಬರಮಾಡಿಕೊಳ್ಳಲು ಕೇವಲ ಬಿಜೆಪಿ ಕಾರ್ಯಕರ್ತರು ಮಾತ್ರವಲ್ಲದೆ, ಕಿಚ್ಚನ ಅಭಿಮಾನಿಗಳು ಕೂಡ ತುದಿಗಾಲಲ್ಲಿ ನಿಂತಿದ್ದಾರೆ. ಈಗಾಗಲೇ ಗದಗ ನಗರದ ತುಂಬಾ ಕಿಚ್ಚನ ಕಟೌಟ್ ಮತ್ತು ಬ್ಯಾನರ್ಗಳು ರಾರಾಜಿಸುತ್ತಿವೆ. ಗದಗ ಬಿಜೆಪಿ ಕ್ಷೇತ್ರದ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಸೇರಿದಂತೆ ಹಲವು ಅಭ್ಯರ್ಥಿಗಳ ಪರವಾಗಿ ಕಿಚ್ಚ ಸುದೀಪ್ ಮತಯಾಚನೆ ಮಾಡಲಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications