ಚಾ ಬಿಡದ ಉತ್ತರ ಕರ್ನಾಟಕ ಮಂದಿ ನಾವು, ಮನ್ಸು ತಂಪ್ ಆತು...!
ಹಾವೇರಿ, ಏಪ್ರಿಲ್ 28: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಮತದಾನ ಮೇ 7ರಂದು ನಡೆಯಲಿದೆ. ಚುನಾವಣಾ ಪ್ರಚಾರ ಬಿರು ಬಿಸಿಲಿನಲ್ಲಿಯೂ ಸಹ ಕಾವೇರಿದೆ. ಚುನಾವಣಾ ಪ್ರಚಾರದ ನಡುವೆಯೇ ಉತ್ತರ ಕರ್ನಾಟಕ ಭಾಗದ ಜನರ ಚಹಾ ಪ್ರೀತಿಯ ಬಗ್ಗೆ ಉಲ್ಲೇಖ ಮಾಡಲಾಗಿದೆ.
ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಹಾ ಪ್ರೀತಿ ಬಗ್ಗೆ ಫೇಸ್ಬುಕ್ ಪೋಸ್ಟ್ ಒಂದನ್ನು ಹಾಕಿದ್ದಾರೆ. ಶನಿವಾರ ಹಾನಗಲ್, ಹಾವೇರಿಯಲ್ಲಿ ಅವರು ಚುನಾವಣಾ ಪ್ರಚಾರವನ್ನು ನಡೆಸಿದರು.

ಫೇಸ್ಬುಕ್ ಪೋಸ್ಟ್: ಚಹಾ ಕುಡಿಯುವ ಫೋಟೋವನ್ನು ಶೇರ್ ಮಾಡಿರುವ ಬಸವರಾಜ ಬೊಮ್ಮಾಯಿ, 'ಬಿಸಿಲು ನೆತ್ತಿ ಮ್ಯಾಗೆ ಇದ್ರು ನಮ್ ಮಂದಿಗೆ ಚಾ ಬೇಕು. ಏನನ್ನೂ ಬಿಟ್ರು ನಾವ್ ಚಾ ಬಿಡದ ಉತ್ತರ ಕರ್ನಾಟಕ ಮಂದಿ ನಾವು...ಹಾನಗಲ್ದಾಗ ರೋಡ್ ಶೋ ಮುಗ್ಸಿದ್ ತಕ್ಷಣ ಚಾ ಕುಡಿಬೇಕು ಅನ್ಸ್ತು. ತಡಾಬಡಿ ಮಾಡ್ದೆ ಅಲ್ಲೇ ಪಕ್ದಾಗ ಇದ್ ಅಂಗ್ಡಿಗೆ ಹೋಗಿ ಒಂದ್ ಕಪ್ ಚಾ ಕುಡ್ದೆ ನೋಡ್ರಿ....ಮನ್ಸು ತಂಪ್ ಆತು' ಎಂದು ಬರೆದಿದ್ದಾರೆ.
ಬಸವರಾಜ ಬೊಮ್ಮಾಯಿ ಅವರ ಜೊತೆ ಹಾವೇರಿ ಸಂಸದ ಶಿವಕುಮಾರ್ ಉದಾಸಿ, ಮಾಜಿ ಸಚಿವ ಮನೋಹರ್ ತಹಶಿಲ್ದಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಬಿಸಿಲು ನೆತ್ತಿ ಮ್ಯಾಗೆ ಇದ್ರು ನಮ್ ಮಂದಿಗೆ ಚಾ ಬೇಕು. ಏನನ್ನೂ ಬಿಟ್ರು ನಾವ್ ಚಾ ಬಿಡದ ಉತ್ತರ ಕರ್ನಾಟಕ ಮಂದಿ ನಾವು..
— Basavaraj S Bommai (Modi Ka Parivar) (@BSBommai) April 27, 2024
ಹಾನಗಲ್ದಾಗ ರೋಡ್ ಶೋ ಮುಗ್ಸಿದ್ ತಕ್ಷಣ ಚಾ ಕುಡಿಬೇಕು ಅನ್ಸ್ತು. ತಡಾಬಡಿ ಮಾಡ್ದೆ ಅಲ್ಲೇ ಪಕ್ದಾಗ ಇದ್ ಅಂಗ್ಡಿಗೆ ಹೋಗಿ ಒಂದ್ ಕಪ್ ಚಾ ಕುಡ್ದೆ ನೋಡ್ರಿ....ಮನ್ಸು ತಂಪ್ ಆತು. pic.twitter.com/nJUiQCpYiG
ಬಸವರಾಜ ಬೊಮ್ಮಾಯಿ ಶನಿವಾರ ಗುರು ಕುಮಾರೇಶ್ವರರ ತಪೋಭೂಮಿ, ತಾರಕೇಶ್ವರರ ನಾಡು ಐತಿಹಾಸಿಕ ಹಾನಗಲ್ನಲ್ಲಿ ಬೃಹತ್ ರೋಡ್ ಶೋ ನಡೆಸಿ ಮತಯಾಚಿಸಿದರು. ಹಾನಗಲ್ ಜನತೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿ, ನಮ್ಮೆಲ್ಲರ ಬೆಂಬಲ ಕಮಲಕ್ಕೆ ಎಂದು ಅಭಯ ನೀಡಿದರು. ಇದೇ ಸಂದರ್ಭದಲ್ಲಿ ಹಲವಾರು ಮುಖಂಡರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾದರು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶನಿವಾರ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಚುನಾವಣೆಯ ಪ್ರಚಾರಾರ್ಥವಾಗಿ ಹಾವೇರಿ ನಗರದಲ್ಲಿ ಹಾವೇರಿ ಜಿಲ್ಲಾ ಬಣಜಿಗ ಸಮಾಜ, ಸವಿತಾ ಸಮಾಜ, ಮರಾಠಾ ಸಮಾಜ ಹಾಗೂ ವಿಶ್ವ ಕರ್ಮ ಸಮಾಜಗಳ ಸಭೆಗಳಲ್ಲಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕಳೆದ 10 ವರ್ಷಗಳ ಸಾಧನಗಳನ್ನು ತಿಳಿಸಿ, ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಬೆಂಬಲಿಸಿವಂತೆ ವಿನಂತಿಸಿದರು.
ಮೇ 7ರ ಮಂಗಳವಾರ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಮತದಾನ ನಡೆಯಲಿದೆ. ಶಿಗ್ಗಾವಿ ಕ್ಷೆತ್ರದ ಬಿಜೆಪಿ ಶಾಸಕರು ಆಗಿರುವ ಬಸವರಾಜ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿ. ಎದುರಾಳಿಯಾಗಿ ಕಾಂಗ್ರೆಸ್ನಿಂದ ಆನಂದಸ್ವಾಮಿ ಗಡ್ಡದೇವರಮಠ ಅಭ್ಯರ್ಥಿಯಾಗಿದ್ದಾರೆ.
2019ರ ಚುನಾವಣೆಯಲ್ಲಿ ಹಾವೇರಿ-ಗದಗ ಕ್ಷೇತ್ರದಲ್ಲಿ ಬಿಜೆಪಿಯ ಶಿವಕುಮಾರ್ ಉದಾಸಿ 683,660 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ನ ಡಿ. ಆರ್. ಪಾಟೀಲ್ 542,778 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ಆದರೆ ಈ ಬಾರಿ ಶಿವಕುಮಾರ್ ಉದಾಸಿ ಕಣಕ್ಕಿಳಿಯಲು ನಿರಾಕರಿಸಿದ ಕಾರಣ ಬಸವರಾಜ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿಗೆ ಶಿವಕುಮಾರ್ ಉದಾಸಿ ಭದ್ರ ಬುನಾದಿ ಹಾಕಿದ್ದಾರೆ. ಆದರೆ ಈ ಬಾರಿ ಅವರು ಕಣಕ್ಕಿಳಿದಿಲ್ಲ. ಬಸವರಾಜ ಬೊಮ್ಮಾಯಿ ಶಿಗ್ಗಾವಿಯ ಹಾಲಿ ಶಾಸಕರು. ಆದರೆ ಲೋಕಸಭಾ ಚುನಾವಣೆಗೆ ಅವರಿಗೆ ಪಕ್ಷ ಟಿಕೆಟ್ ನೀಡಿದೆ.
ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಹಾವೇರಿ, ಹಾನಗಲ್, ಬ್ಯಾಡಗಿ, ಹಿರೇಕೆರೂರು-ರಟ್ಟಿಹಳ್ಳಿ, ರಾಣೆಬೆನ್ನೂರು, ಗದಗ, ರೋಣ, ಶಿರಹಟ್ಟಿ ವಿಧಾನಸಭಾ ಕ್ಷೇತ್ರಗಳು ಬರುತ್ತವೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications