ರಾಜಕಾರಣದಲ್ಲಿ ರೌಡಿಸಂ ಸಹಿಸಲ್ಲ: ಸಲಹೆ ಕೊಡುವಷ್ಟು ಸಿದ್ದರಾಮಯ್ಯ ದೊಡ್ಡವರಲ್ಲ
ಹಾವೇರಿ, ಏಪ್ರಿಲ್ 16: ರಾಜಕಾರಣದಲ್ಲಿ ರೌಡಿಸಂ ಮಾಡುವುದನ್ನು ಕನ್ನಡಿಗರು ಸಹಿಸುವುದಿಲ್ಲ. ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರಿಗೆ ಸಲಹೆ ಕೊಡುವಷ್ಟು ಸಿಎಂ ಸಿದ್ದರಾಮಯ್ಯ ದೊಡ್ಡವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ. ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರ ಜತೆಗೆ ಹಾವೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, ತುಮಕೂರಿನಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಮಾಜಿ ಪ್ರಧಾನಿ ದೇವೇಗೌಡರು ನಡೆಸುತ್ತಿರುವ ಸಭೆಗೆ ನುಗ್ಗಿ ದಾಂಧಲೆ ನಡೆಸಿರುವುದನ್ನು ಅವರು ಖಂಡಿಸಿದರು.

ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯ ವ್ಯಕ್ತ ಮಾಡಲು ನಮಗೆ ಅವಕಾಶ ಇದೆ. ಅದನ್ನು ಬಿಟ್ಟು ಮಾಜಿ ಪ್ರಧಾನಿ ಕನ್ನಡಿಗರ ಹೆಮ್ಮೆಯ ದೇವೇಗೌಡರ ಸಭೆಯಲ್ಲಿ ಆ ರೀತಿ ದಾಂಧಲೆ ಮಾಡುವುದು ನಮ್ಮ ಸಂಸ್ಕೃತಿ ಅಲ್ಲ. ಜನರು ಎಲ್ಲವನ್ನೂ ನೋಡುತ್ತಾರೆ. ವಿಶೇಷವಾಗಿ ದೇವೇಗೌಡರು ಕನ್ನಡದ ಸಲುವಾಗಿ ಕನ್ನಡಿಗರಿಗಾಗಿ ಪಕ್ಷ ಬೇಧ ಮರೆತು ಹೋರಾಟ ಮಾಡಿದ್ದಾರೆ ಎಂದು ಹೇಳಿದರು.
ಮಾಜಿ ಸಿಎಂ ಸ್ಪಷ್ಟೀಕರಣ ನೀಡಿದ್ದಾರೆ: ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರೆ. ಕಾಂಗ್ರೆಸ್ ನ ಅನೇಕ ನಾಯಕರು ಮಹಿಳೆಯರ ಬಗ್ಗೆ ಸಾಕಷ್ಟು ಅವಮಾನಕಾರಕ ಹೇಳಿಕೆಗಳನ್ನು ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾದಿ ರಣದೀಪ್ ಸಿಂಗ್ ಸುರ್ಜೆವಾಲ ಮಹಿಳೆಯ ಬಗ್ಗೆ ಆಡಿರುವ ಮಾತಿಗೆ ಕಾಂಗ್ರೆಸ್ ನವರು ಸ್ಪಷ್ಟೀಕರಣ ನೀಡಲಿ ಎಂದು ಸವಾಲು ಹಾಕಿದರು.

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಅವಧಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿವೆ. ಕಾಂಗ್ರೆಸ್ ನವರು ಅದನ್ನು ತಡೆಯುವ ಕೆಲಸ ಮಾಡಲಿ ಎಂದು ಬೊಮ್ಮಾಯಿ ಅವರು ತಿರುಗೇಟು ನೀಡಿದರು.
ಸಲಹೆ ನೀಡುವಷ್ಟು ಸಿದ್ದರಾಮಯ್ಯ ದೊಡ್ಡವರಲ್ಲ
ಮಾಜಿ ಪ್ರಧಾನಿ ದೇವೇಗೌಡರ ಕುರಿತು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ರಾಜ್ಯದಲ್ಲಿ ದೇವೇಗೌಡರಿಗೆ ಬುದ್ಧಿ ಹೇಳುವಷ್ಟು ದೊಡ್ಡವರು ಯಾರೂ ಇಲ್ಲ. ಅವರಿಗೆ ಸಲಹೆ ನೀಡುವಷ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ದೊಡ್ಡವರಲ್ಲ ಎಂದು ಹೇಳಿದರು.
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಿಯದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ಕಾರಣ ಆಗಲಿದೆ. ಮೈತ್ರಿ ಪಕ್ಷಗಳು ಗೆಲ್ಲಲಿವೆ. ಈ ಚುನಾವಣೆ ಬಳಿಕ ರಾಜ್ಯದಲ್ಲಿರುವ ಕಾಂಗ್ರೆಸ್ನಲ್ಲಿ ಮಹತ್ತರ ಬದಲಾವಣೆ ಆಗಲಿದೆ ಎಂದು ಅವರು ಭವಿಷ್ಯ ನುಡಿದರು.
ಎಚ್ಡಿ ಕುಮಾರಸ್ವಾಮಿ ಹೇಳಿದ್ದೇನು?
ಗ್ಯಾರೆಂಟಿಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಂಡ್ಯ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಎಚ್ಡಿ ಕುಮಾರಸ್ವಾಮಿ ಅವರು ಅಪಮಾನ ರೀತಿಯಲ್ಲಿ ಹೇಳಿದ್ದರು. ಈ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.
ಎಚ್ಡಿಕೆ ಹೇಳಿಕೆ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಭಟನೆಗೆ ಕರೆ ನೀಡಿದರು. ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಕೆಲವೆಡೆ ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೆ ತುಮಕೂರಿನಲ್ಲಿ ಎಚ್ಡಿ ದೇವೇಗೌಡ ಅವರು ಸಭೆ ನಡೆಸುವಾಗ ಸಭೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಇದು ರಾಜಕಾರಣದಲ್ಲಿನ ರೌಡಿ ವರ್ತನೆ ಆಗಿದ್ದು, ಇಂತದ್ದನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಬಸವರಾಜ ಬೊಮ್ಮಾಯಿ ಎಚ್ಚರಿಸಿದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications