MLA Munirathna: ನಮ್ಮಷ್ಟಕ್ಕೆ ನಾವೇ ಅವಮಾನ ಮಾಡಿಸಿಕೊಳ್ಳಲು ಸಾಧ್ಯವೇ?: ಬಸವರಾಜ ಬೊಮ್ಮಾಯಿ

ಹಾವೇರಿ, ಡಿಸೆಂಬರ್ 26: ಮಹಾತ್ಮ ಗಾಂಧೀಜಿಯವರ ಕಾಂಗ್ರೆಸ್ ಗೂ ಇಂದಿನ ಕಾಂಗ್ರೆಸ್‌ಗೂ ಬಹಳವೇ ವ್ಯತ್ಯಾಸ ಇದೆ. ಅದು ಅಸಲಿ ಕಾಂಗ್ರೆಸ್ ಇಂದಿನದ್ದು ನಕಲಿ ಕಾಂಗ್ರೆಸ್. ಹೀಗಾಗಿ ವ್ಯತ್ಯಾಸ ಇದೆ. ಮಹಾತ್ಮಾ ಗಾಂಧೀಜಿಯವರ ತದ್ವಿರುದ್ಧವಾಗಿ ಈಗಿನ ಕಾಂಗ್ರೆಸ್ ನವರು ನಡೆದುಕೊಳ್ಳುತ್ತಿದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಲೇವಡಿ ಮಾಡಿದರು.

ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ರೀತಿ ಆಡಳಿತವೇ ಇಲ್ಲ. ಎಲ್ಲಾ ಇಲಾಖೆಗಳು, ನಿಗಮಗಳಲ್ಲಿ ಭ್ರಷ್ಟಾಚಾರ ನಡೆದಿದೆ. ದೀನ ದಲಿತರ ಅನುದಾನದಲ್ಲೇ ಭ್ರಷ್ಟಾಚಾರ ಮಾಡಿದ್ದಾರೆ. ಗಾಂಧಿಯವರ ಸ್ವರಾಜ್ಯಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ.

Basavaraj Bommai Responds to Congress Conference and the Assault on MLA Munirathna

ಕಾಂಗ್ರೆಸ್ ಅಧಿವೇಶನಕ್ಕೆ ಸರ್ಕಾರದ ಹಣ ಬಳಸುತ್ತಿರುವುದು ಎಷ್ಟು ಸರಿ? ಇದು ಯಾವ ಕಾನೂನಿನಲ್ಲಿದೆ? ರಾಜಕೀಯ ಸಮ್ಮೇಳನಗಳಿಗೆ ಸರ್ಕಾರದ ಹಣ ಬಳಸುವುದು ಎಷ್ಟರ ಮಟ್ಟಿಗೆ ಸರಿ? ಗಾಂಧೀಜಿಯವರನ್ನು ಮುಂದಿಟ್ಟುಕೊಂಡು ತಮ್ಮ ಬ್ಯಾನರ್ ಹಾಕಿಕೊಂಡು ಅಧಿವೇಶನ ಮಾಡುತ್ತಿದ್ದಾರೆ. ಅಸಲಿ ಗಾಂಧಿ ಹೆಸರಲ್ಲಿ ನಕಲಿ ಕಾಂಗ್ರೆಸ್ ಅಧಿವೇಶನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮುನಿರತ್ನ ಮೇಲೆ ಹಲ್ಲೆ: ಠಾಣೆಗಳಲ್ಲಿ ಡೀಲ್ ವ್ಯವಸ್ಥೆ ಇದೆ

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಅಧಿಕಾರದ ಮಧದಿಂದ ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿರೋಧ ಪಕ್ಷಗಳನ್ನು ದಮನ ಮಾಡಲು ಪ್ರಜಾಪ್ರಭುತ್ವ ವಿರೋಧಿ ಕ್ರಮ ಅನುಸರಿಸುತ್ತಿದ್ದಾರೆ. ಇಂಥ ಪ್ರಕರಣಗಳು ಸಾಕಷ್ಟು ನಡೆದಿದೆ, ಆದರೆ ಇನ್ನೂ ಕೆಲವು ಪ್ರಕರಣ ಬೆಳಕಿಗೆ ಬಂದಿಲ್ಲ. ಸರ್ಕಾರ ಪೊಲೀಸ್ ಠಾಣೆಗಳಲ್ಲಿ ಡೀಲ್ ವ್ಯವಸ್ಥೆ ಮಾಡಿದೆ ಎಂದು ಅವರು ಆರೊಪಿಸಿದರು.

ಸರ್ಕಾರ ಯಾವ ಹಂತಕ್ಕೆ ಇಳಿದಿದೆ?

ಗೃಹ ಸಚಿವರೇ ಏನೂ ನಡೆದಿಲ್ಲ, ಗೊತ್ತಿಲ್ಲ ಎಂದು ಹೇಳುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಡಾಫೆ ಉತ್ತರ ಕೊಡುತ್ತಾರೆ. ಈ ಘಟನೆಗಳು ತುರ್ತು ಪರಿಸ್ಥಿತಿ ನೆನಪಿಸುತ್ತಿದೆ. ಶಾಸಕ ಮುನಿರತ್ನ ಮೇಲೆ ಆರೋಪ ಇದೆ, ಅದನ್ನು ಕೋರ್ಟ್ ನಲ್ಲಿ ಅವರು ಎದುರಿಸುತ್ತಾರೆ. ಅವರ ಮೇಲೆ ಮೊಟ್ಟೆ ಒಗೆಯುತ್ತಾರೆ ಅಂದರೆ ಯಾವ ಮಟ್ಟಕ್ಕೆ ಸರ್ಕಾರ ಇಳಿದಿದೆ? ಜನ ಪ್ರತಿನಿಧಿಗಳು ನಿರ್ಭೀತಿ, ನಿರ್ಭಯದಿಂದ ಕೆಲಸ ಮಾಡಲು ಹೇಗೆ ಸಾಧ್ಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮಷ್ಟಕ್ಕೆ ನಾವೇ ಅವಮಾನ ಮಾಡಿಸಿಕೊಳ್ಳಲು ಹೇಗೆ ಸಾಧ್ಯ

ಶಾಸಕ ಮುನಿರತ್ನ ನಾಟಕ‌ ಮಾಡುತ್ತಿದ್ದಾರೆಂಬ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರಾದರೂ ಉಂಟಾ? ನಮ್ ಮೇಲೆ ನಾವೇ ಮೊಟ್ಟೆ ಹಾಕಿಸಿಕೊಂಡು ಅವಮಾನ ಮಾಡಿಸಿಕೊಳ್ಳೋಕೆ ಆಗುತ್ತಾ? ಎಂದು ಪ್ರಶ್ನಿಸಿದರು.

ಸಿಟಿ ರವಿ ಧರ್ಮಸ್ಥಳಕ್ಕೆ ಬರಲಿ: ಇದು ಅವರವರಿಗೆ ಬಿಟ್ಟದ್ದು

ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಗೆ ಧರ್ಮಸ್ಥಳಕ್ಕೆ ಬರಲಿ ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿರುವ ವಿಚಾರ, ಇದು ಅವರವರಿಗೆ ಬಿಟ್ಟಿದ್ದು. ದೇವರು ನಂಬಿಕೆ ಅವರವರ ವಯಕ್ತಿಕ ವಿಚಾರ. ಸಿ.ಟಿ ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರೂ ದೂರು ಕೊಟ್ಟಿದ್ದಾರೆ.

ಒಂದು ಕಡೆ ಕಂಪ್ಲೇಂಟ್ ಗೆ ಕೂಡಲೇ ಕ್ರಮ ಕೈಗೊಳ್ಳುತ್ತಾರೆ. ಆದರೆ, ಸಿ.ಟಿ ರವಿ ದೂರು ಕೊಟ್ಟಿರುವುದನ್ನು ಎಫ್ ಐ ಆರ್ ಮಾಡೇ ಇಲ್ಲ. ಹೈಕೋರ್ಟ್ ಮಧ್ಯಪ್ರವೇಶ ಮಾಡದಿದ್ದರೆ ಸಿ.ಟಿ ರವಿ ಅವರ ಪರಿಸ್ಥಿತಿ ಏನು ಆಗ್ತಿತ್ತೋ ಗೊತ್ತಿಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರದಿಂದ ಬೆಲೆ ಏರಿಕೆ ಪರ್ವ

ರಾಜ್ಯ ಸರ್ಕಾರದ ಹಾಲಿನ ದರ ಹೆಚ್ಚಳ ವಿಚಾರದ ಬಗ್ಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಬೆಲೆ ಏರಿಕೆ ಪರ್ವ ನಡೆದಿದೆ. ಸ್ಡಾಂಪ್ ಡ್ಯೂಟಿ, ಅಬಕಾರಿ ತೆರಿಗೆ ಸೇರಿದಂತೆ ಎಲ್ಲದರ ತೆರಿಗೆ ಹೆಚ್ಚಿಸಿದ್ದಾರೆ. 15,000 ಕೋಟಿ ರೂಪಾಯಿ ಹೊಸ ತೆರಿಗೆ ಹಾಕಿದ್ದಾರೆ.

ಹಾಲಿನ ದರ, ನೀರಿನ ದರ ಎಲ್ಲದರಲ್ಲೂ ತೆರಿಗೆ ಹೆಚ್ಚಿಗೆ ಮಾಡಿದ್ದಾರೆ. ಜನ ಸಾಮಾನ್ಯರು ಬಳಕೆ‌ ಮಾಡುವಂತ ಎಲ್ಲಾ ವಸ್ತುಗಳ ದರ ಹೆಚ್ಚಳ ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ಮರಳು, ಜಲ್ಲಿ ಕೂಡ ಇನ್ನಷ್ಟು ತುಟ್ಟಿ ಆಗಲಿದೆ. ಪ್ರತಿ ಆರ್ಥಿಕ ಚಟುವಟಿಕೆ ಮೇಲೆ ತೆರಿಗೆ ಹಾಕುತ್ತಿದ್ದಾರೆ. ಮುಂದೆ ಇವರು ಗಾಳಿಗೂ ತೆರಿಗೆ ಹಾಕುವ ಕಾಲ ದೂರ ಇಲ್ಲ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+