ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದುರ್ಗಾದೇವಿ ಕೆರೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಬಾಗಿನ

|
Google Oneindia Kannada News

ಬೆಂಗಳೂರು, ಅ. 27: ಈ ಬಾರಿ ಸುರಿದ ಉತ್ತಮ ಮಳೆಯಿಂದಾಗಿ ಹಿರೆಕೆರೂರಿನ ಐತಿಹಾಸಿಕ ದುರ್ಗಾದೇವಿ ಕೆರೆ ತುಂಬಿ ಹರಿಯುತ್ತಿದ್ದು, ಕೆರೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ್ ಅವರ ಜೊತೆಗೂಡಿ ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಸಿ. ಪಾಟೀಲ್ ಅವರು, ದುರ್ಗಾದೇವಿ ಕೆರೆ ತಾಲೂಕಿಗೆ ಕಳಶಪ್ರಾಯವಾಗಿದ್ದು, ಈ ಬಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿರುವುದು ಸಂತಸ ತಂದಿದೆ. ತಾಲೂಕಿನಲ್ಲಿ ಇದೇ ರೀತಿ ಜನತೆ ಸಂಪದ್ಭರಿತವಾಗಿ ಆರೋಗ್ಯದಿಂದ ಇರಲಿ. ಕೊರೊನಾ ವೈರಸ್ ಸೋಂಕು ಸಂಕಷ್ಟ ಆದಷ್ಟು ಬೇಗ ತೊಲಗಿ ಜನರು ನೆಮ್ಮದಿಯಿಂದ ಬಾಳುವಂತಾಗಲೆಂದು ಪ್ರಾರ್ಥಿಸಿದರು.

BC Patil Offered Bagina To Durgadevi Lake In Hirekerur In Haveri District

Recommended Video

Surya Kumar Yadav ರನ್ನು Australia ತಂಡಕ್ಕೆ ಈಗಲೂ ಆಯ್ಕೆ ಮಾಡಿಲ್ಲ | Oneindia Kannada

ರೈತರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ರಾಜ್ಯ ಬಿಜೆಪಿ ಸರ್ಕಾರ ಮಾಡುತ್ತಿದೆ. ಎಲ್ಲ ರೀತಿಯ ರಸ ಗೊಬ್ಬರಗಳ ದಾಸ್ತಾನು ಇದ್ದು, ಯಾವುದೇ ತೊಂದರೆ ಆಗದಂತೆ ಮುಂಜಾಗ್ರತೆ ವಹಿಸಲಾಗಿದೆ.

English summary
Agriculture Minister B.C. Patil offered Bagina to Durgadevi Lake in Hirekerur in Haveri district. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X