Darshan Case: ಯಾರನ್ನು ಬಚಾವ್ ಮಾಡಲು ಆಗಲ್ಲ: ಕೌರವ ಹೇಳಿದ್ದೇನು?
ಹಾವೇರಿ, ಜೂನ್ 17: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ಬಂಧನವಾಗಿದೆ. ಇದಕ್ಕೆ ಕಲಾವಿದರು ಸೇರಿದಂತೆ ರಾಜಕಾರಣಿಗಳು ಒಬ್ಬೊಬ್ಬರಾಗೇ ಪ್ರತಿಕ್ರಿಯೆ ನೀಡುತ್ತಿದ್ದಾರೆ. ದರ್ಶನ್ ಅನ್ನು ಕೃಷಿ ಇಲಾಖೆ ರಾಯಭಾರಿ ಮಾಡಿದ್ದ ವೇಳೆ ಬಿಜೆಪಿಯಿಂದ ಕೃಷಿ ಸಚಿವರಾಗಿದ್ದ ಬಿ.ಸಿ ಪಾಟೀಲ್ ಅವರು ಸಹ ಚಿತ್ರರಂಗದಲ್ಲಿ ಗುರುತಿಸಿಕೊಂಡವರು. ಅದಕ್ಕೂ ಮೊದಲೇ ಅವರು ಒಬ್ಬರು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಇಂದು ಅವರು ದರ್ಶನ್ ಪ್ರಕರಣ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ.
ನಟ ದರ್ಶನ್ ಆ್ಯಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಸೋಮವಾರ ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಪ್ರತಿಕ್ರಿಯಿಸಿದರು.

ನಾನು ಕೃಷಿ ಸಚಿವನಿದ್ದಾಗ ಕೃಷಿ ಇಲಾಖೆ ರಾಯಭಾರಿಯಾಗಿ ನಟ ದರ್ಶನ್ ನೇಮಕವಾಗಿದ್ದರು. ಆಗ ಅವರು ಈ ರೀತಿ ಕೃತ್ಯದಲ್ಲಿ ಭಾಗಿಯಾಗಿರಲಿಲ್ಲ. ಜನಪ್ರಿಯ ನಟನಾಗಿದ್ದರಿಂದ ರಾಜ್ಯದ ರೈತರಿಗೆ ಶಕ್ತಿ ತುಂಬಲು ಅವರನ್ನು ರಾಯಭಾರಿ ಮಾಡಿದ್ದೇವು.
ಮೃತರ ಕುಟುಂಬಕ್ಕೆ ನ್ಯಾಯ ಸಿಗಬೇಕು
ಇಂದು ಚಿತ್ರದುರ್ಗದ ರೇಣುಕಾಸ್ವಾಮಿಯ ಹತ್ಯೆ ನಡೆದಿರುವುದು ದುರದೃಷ್ಟಕರ. ಇದೊಂದು ಕ್ಷಮಿಸಲಾಗದ ಕೃತ್ಯವಾಗಿದೆ. ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅವರು ಹೇಳಿದರು.
ಅಪರಾಧಿ ಎಂದಾದರೆ ಬ್ಯಾನ್ ಮಾಡಬಹುದು?
ಈ ನೆಲದ ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ಕೊಲೆಯ ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು. ಇನ್ನೂ ದರ್ಶನ್ ಬ್ಯಾನ್ ಮಾಡುವ ವಿಚಾರ ಕುರಿತು ಮಾತನಾಡಿದ ಅವರು, ಈ ಕೊಲೆ ಪ್ರಕರಣದಲ್ಲಿ ಅಪರಾಧ ಸಾಬೀತಾದರೆ ಚಿತ್ರರಂಗದಿಂದ ನಟ ದರ್ಶನ್ ನಿಷೇಧ (ಬ್ಯಾನ್) ಎಂದು ಹೇಳಲಾಗುತ್ತಿದೆ.
ಈಗ ದರ್ಶನ್ ಆರೋಪಿಯಾಗಿದ್ದು, ಅಪರಾಧಿ ಎಂದು ನ್ಯಾಯಾಲಯದಲ್ಲಿ ಸಾಬೀತಾದರೆ ಬ್ಯಾನ್ ಬಗ್ಗೆ ನಿರ್ಧಾರ ಮಾಡಬಹುದು. ಸದ್ಯ ಈ ಕೊಲೆ ಪ್ರಕರಣದ ನಿಷ್ಪಕ್ಷಪಾತ ಶಿಕ್ಷೆ ಆಗಬೇಕು ಎಂದು ಅವರು ಹೇಳಿದರು.

ಕೇಸಿನಲ್ಲಿ ಯಾರನ್ನು ಬಚಾವ್ ಮಾಡಲು ಆಗಲ್ಲ
ಪ್ರಕರಣದಿಂದ ದರ್ಶನ್ ನನ್ನು ಸೇಪ್ ಮಾಡಲು ಕೆಲ ರಾಜಕಾರಣಿಗಳಿಂದ ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ ಎಂಬ ವಿಚಾರಕ್ಕೆ ಅವರು ಉತ್ತರಿಸಿದರು. ಇದರಲ್ಲಿ ಯಾರನ್ನು ಬಚಾವ್ ಮಾಡಲು ಆಗಲ್ಲ. ನಾನೂ ಕೂಡಾ ಪೊಲೀಸ್ ಆಗಿದ್ದವನು.
ತನಿಖೆಯ ಬಗ್ಗೆ ಪೊಲೀಸ್ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ.
ಯಾರು ಪ್ರಭಾವ ಬೀರುತ್ತಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ದರ್ಶನ್ ನನಗೆ ಕಲಾವಿದನಾಗಿ ಗೊತ್ತು. ಅವರ ಸಂಪೂರ್ಣ ವಿವರ ನನಗೆ ಗೊತ್ತಿಲ್ಲ. ನಟ ದರ್ಶನ್ ಬಳಿ ಯಾರು ಯಾರು ಇದ್ದರೂ ಎಂಬುದು ಗೊತ್ತಿಲ್ಲ ಎಂದು ಬಿಸಿ ಪಾಟೀಲ್ ಅವರು ತಿಳಿಸಿದ್ದಾರೆ.
ರಾಯಭಾರಿಯಾಗಿ ಮುಂದುವರಿಸಲ್ಲ
ಕಳೆದ ಬಾರಿ ಬಿಜೆಪಿ ಅವಧಿಯಲ್ಲಿ ನಟ ದರ್ಶನ್ ರಾಜ್ಯ ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ಸರ್ಕಾರವೇ ನೇಮಕ ಮಾಡಿತ್ತು. ಈ ವೇಳೆ ಬಿಸಿ ಪಾಟೀಲರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇನ್ನೂ ಇದೇ ವಿಚಾರವಾಗಿ ಇತ್ತೀಚೆಗೆ ಮಾತನಾಡಿದ್ದ ಹಾಲಿ ಸಚಿವ ಎಂಬಿ ಪಾಟೀಲ್ ಅವರು, ನಟ ದರ್ಶನ್ ಅನ್ನು ಕೃಷಿ ಇಲಾಖೆಯ ರಾಯಭಾರಿ ಆಗಿ ಮುಂದುವರಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications