ಮನೆಯಲ್ಲಿ ಲಸಿಕೆ ಪಡೆದ ಸಚಿವರು; ಅಧಿಕಾರಿ ಅಮಾನತು
ಹಾವೇರಿ, ಏಪ್ರಿಲ್ 01; ಕರ್ನಾಟಕದ ಕೃಷಿ ಸಚಿವ ಬಿ. ಸಿ. ಪಾಟೀಲ್ ಆಸ್ಪತ್ರೆಗೆ ತೆರಳದೇ ಮನೆಯಲ್ಲಿಯೇ ಕೋವಿಡ್ ಲಸಿಕೆ ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಆರೋಗ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ.
64 ವರ್ಷದ ಬಿ. ಸಿ. ಪಾಟೀಲ್ ಮಾರ್ಚ್ ತಿಂಗಳಿನಲ್ಲಿ ಕೋವಿಡ್ ಲಸಿಕೆ ಪಡೆದಿದ್ದರು. ಆಸ್ಪತ್ರೆಗೆ ಹೋಗದ ಸಚಿವರು ಹಿರೆಕೇರೂರಿನ ನಿವಾಸದಲ್ಲಿಯೇ ಲಸಿಕೆ ಪಡೆದಿದ್ದರು. ಈ ಕುರಿತು ಭಾರೀ ಚರ್ಚೆಗಳು ನಡೆದಿದ್ದವು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಆರೋಗ್ಯಾಧಿಕಾರಿ ಝೆಡ್. ಆರ್. ಮಕಾನದಾರ್ ಅಮಾನತುಗೊಳಿಸಲಾಗಿದೆ. ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ. ವಿ. ತ್ರಿಲೋಕಚಂದ್ರ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಮಾರ್ಚ್ 2ರಂದು ತಾಲೂಕು ಆಸ್ಪತ್ರೆಯ ಸಿಬ್ಬಂದಿ ಕೃಷಿ ಸಚಿವರ ನಿವಾಸಕ್ಕೆ ಆಗಮಿಸಿ ಕೋವಿಡ್ ಲಸಿಕೆ ನೀಡಿದ್ದರು. ತಾಲೂಕು ಆರೋಗ್ಯಾಧಿಕಾರಿಗಳ ಸೂಚನೆಯಂತೆ ಸಿಬ್ಬಂದಿಗಳು ಲಸಿಕೆಯನ್ನು ಆಸ್ಪತ್ರೆಯಿಂದ ಹೊರಗೆ ತೆಗೆದುಕೊಂಡು ಹೋಗಿದ್ದರು.
ಸಚಿವರ ಮನೆಗೆ ಹೋಗಿ ಲಸಿಕೆ ನೀಡಿದ ಪ್ರಕರಣದ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಲಾಗಿತ್ತು. ವರದಿ ಬಂದ ಬಳಿಕ ಇದು ಕರ್ತವ್ಯ ಲೋಪ, ಇದಕ್ಕೆ ತಾಲೂಕು ಆರೋಗ್ಯಾಧಿಕಾರಿ ಬೇಜವಬ್ದಾರಿಯೇ ಕಾರಣ ಎಂದು ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಸಚಿವರ ಸಮರ್ಥನೆ; ಮನೆಯಲ್ಲಿ ಲಸಿಕೆ ಪಡೆದಿದ್ದು ವಿವಾದವಾದ ಬಳಿಕ ಸಚಿವರು ಪ್ರತಿಕ್ರಿಯೆ ನೀಡಿದ್ದರು. "ನಾನು ನನ್ನ ಪತ್ನಿ ಜೊತೆ ಲಸಿಕೆ ತೆಗೆದುಕೊಂಡಿದ್ದೇನೆ. ಆದರೆ, ಇದನ್ನು ಕೆಲವರು ಟಾರ್ಗೆಟ್ ಮಾಡುತ್ತಿದ್ದಾರೆ. ತಪ್ಪು ಸಂದೇಶ ರವಾನೆ ಮಾಡುತ್ತಿದ್ದಾರೆ" ಎಂದು ಟ್ವೀಟ್ ಮಾಡಿದ್ದರು.
"ನಾನು ಯಾವುದೇ ಅಪರಾಧ ಮಾಡಿಲ್ಲ. ನಾನು ಆಸ್ಪತ್ರೆಗೆ ಹೋದರೆ ಅಲ್ಲಿರುವ ಜನರಿಗೆ ತೊಂದರೆ ಆಗುತ್ತದೆ ಎಂಬ ದೃಷ್ಟಿಯಿಂದ ಆಸ್ಪತ್ರೆಗೆ ಹೋಗಿಲ್ಲ. ಮನೆಯಲ್ಲಿಯೇ ಜನರ ದೂರುಗಳನ್ನು ಆಲಿಸುತ್ತಾ ಲಸಿಕೆ ಪಡೆದಿದ್ದೇನೆ" ಎಂದು ಹೇಳಿದ್ದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications