ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ, ಮೇ.16: ಹಿರೇಕೇರೂರಿನಲ್ಲಿ ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಹಾಗೂ ಸುತ್ತಮುತ್ತಲ ಅಸ್ವಚ್ಛತೆ ಕಂಡು ಕೆಂಡಾಮಂಡಲವಾದ ಕೃಷಿ ಸಚಿವರು ಹಾಗೂ ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
Recommended Video
ಇಂದು ಹಿರೇಕೇರೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ 2019-20 ನೇ ಸಾಲಿನ 5045 ಯೋಜನೆಯಡಿ ಚನ್ನಳ್ಳಿ ಗ್ರಾಮದಿಂದ ದೂದಿಹಳ್ಳಿ ಗ್ರಾಮದ ವರೆಗೆ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಚನ್ನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಪರಿಶೀಲಿಸಿದರು. ಘಟಕದಲ್ಲಿ ಸರಿಯಾಗಿ ಕುಡಿಯುವ ನೀರು ಬರದಿರುವುದನ್ನು ಹಾಗೂ ಸುತ್ತಮುತ್ತ ಅಸ್ವಚ್ಛತೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜನರಿಗೆ ಅಗತ್ಯ ಮೂಲಭೂತ ಸೌಕರ್ಯವನ್ನು ಸರ್ಕಾರ ಕಲ್ಪಿಸಿದೆ. ಕುಡಿಯುವ ನೀರಿನ ಘಟಕವಾಗಲೀ, ಇತರೆ ಏನೇ ಆಗಲೀ ತೊಂದರೆ ಕಂಡು ಬಂದಲ್ಲಿ ಅಥವಾ ಸಾರ್ವಜನಿಕರಿಂದ ದೂರು ಕೇಳಿ ಬಂದಲ್ಲಿ ಅಧಿಕಾರಿಗಳು ಅದರತ್ತ ಗಮನಹರಿಸಿ ಸರಿಪಡಿಸುವಲ್ಲಿ ಮುಂದಾಗಬೇಕು ಎಂದರು.

ಚನ್ನಹಳ್ಳಿ ಗ್ರಾಮ ಹಿರೇಕೆರೂರಿನಿಂದ 2 ಕಿ.ಮೀ.ದೂರವಿದೆ ಎಂದು ಇಓ ಶ್ರೀನಿವಾಸ ಹಾಗೂ ಪಿಡಿಓ ಸಬೂಬು ಹೇಳಿದಾಗ, ಇರುವ 2 ಕಿ.ಮೀ.ದೂರದಲ್ಲಿ ಅಧಿಕಾರಿಗಳು ಓಡಾಡುವುದಿಲ್ಲ ಎಂದರೇನು ಅರ್ಥ? ಸ್ವಚ್ಛತೆಯೂ ಇಲ್ಲ ಎಂದು ಗದರಿದರು.
ಆದಷ್ಟು ಬೇಗ ಇದನ್ನು ಸರಿಪಡಿಸದೇ ಹೋದಲ್ಲಿ ಅಧಿಕಾರಿಗಳನ್ನು ಅಮಾನತುಗೊಳಿಸುವುದಾಗಿ ಬಿ.ಸಿ.ಪಾಟೀಲ್ ಎಚ್ಚರಿಸಿದರು. ಈ ಸಂದರ್ಭದಲ್ಲಿ ಉಗ್ರಾಣ ನಿಗಮದ ಅಧ್ಯಕ್ಷರಾದ ಯು.ಬಿ.ಬಣಕಾರ್, ಬಿಜೆಪಿಯ ಮುಖಂಡರು ಹಾಗೂ ಗ್ರಾಮ ಪಂಚಾಯತಿಯ ಸದಸ್ಯರು ಹಾಜರಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications