ಬಿಜೆಪಿಗೆ ಮತ ಹಾಕಿ ಎಂದು ಕೈ ಅಭ್ಯರ್ಥಿಯನ್ನೇ ಕೇಳುವುದೇ?
ಹಾವೇರಿ, ಡಿಸೆಂಬರ್ 02: ಕಾಂಗ್ರೆಸ್ ನ ಅಭ್ಯರ್ಥಿಯನ್ನೇ 'ಬಿಜೆಪಿ ಮತ ಹಾಕಿ' ಎಂದು ಬಿಜೆಪಿಯ ಅಭ್ಯರ್ಥಿಯ ಪತ್ನಿ ಕೈ ಮುಗಿದು ಮನವಿ ಮಾಡಿದ್ದಾರೆ. ಘಟನೆ ನಡೆದಿರುವುದು ಉಪಚುನಾವಣೆ ಕಾವೇರಿರುವ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಕ್ಷೇತ್ರದಲ್ಲಿ.
ರಾಣೆಬೆನ್ನೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕಣಕ್ಕೆ ಇಳಿದಿರುವ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಬಿ.ಕೋಳಿವಾಡ ಅವರನ್ನು ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ್ ಅವರ ಪತ್ನಿ ಕೇಳಿದ್ದಾರೆ.
ಕೋಳಿವಾಡ ಅವರು ಚುನಾವಣಾ ಪ್ರಚಾರಕ್ಕೆಂದು ರಾಣೆಬೆನ್ನೂರು ಕ್ಷೇತ್ರದ ಕರೂರು ಗ್ರಾಮಕ್ಕೆ ಬಂದಿದ್ದರು. ಇದೇ ಸಮಯದಲ್ಲಿ ಬಿಜೆಪಿ ಅಭ್ಯರ್ಥಿ ಪತ್ನಿ, ಜಿಲ್ಲಾ ಪಂಚಾಯಿತಿ ಸದಸ್ಯೆಯೂ ಆಗಿರುವ ಮಂಗಳಗೌರಿ ಅವರು ಗ್ರಾಮದಲ್ಲಿ ಬಿಜೆಪಿ ಪರ ಮತ ಯಾಚನೆ ಮಾಡುತ್ತಿದ್ದರು.

ಪ್ರಚಾರ ಸಭೆ ಮುಗಿಸಿ ಕಾರಿನಲ್ಲಿ ಹೊರಟಿದ್ದ ಕೋಳಿವಾಡ ಅವರನ್ನು ಭೇಟಿಯಾದ ಮಂಗಳಗೌರಿ ಅವರು ಕೆಲ ಕಾಲ ಕುಶಲೋಪರಿ ಮಾತನಾಡಿ, ಕೋಳಿವಾಡ ಹೊರಡುವ ಸಮಯಕ್ಕೆ 'ಬಿಜೆಪಿಗೆ ಮತ ಹಾಕಿ ಸಾರ್' ಎಂದು ಕೈಮುಗಿದು ಮನವಿ ಮಾಡಿದರು. ಇದಕ್ಕೆ ನಗುತ್ತಲೇ ತಲೆ ಆಡಿಸಿದ ಕೋಳಿವಾಡ ಅವರು ಕಾರಿನಲ್ಲಿ ತೆರಳಿದರು.
ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ್ ಅವರ ಪತ್ನಿ ಮಂಗಳಗೌರಿ ಅವರು ಜಿಲ್ಲಾ ಪಂಚಾಯಿತಿ ಸದಸ್ಯೆ ಆಗಿದ್ದು, ಬಿಜೆಪಿ ಪರ ವ್ಯಾಪಕವಾಗಿ ಪ್ರಚಾರ ಮಾಡುತ್ತಿದ್ದಾರೆ.
ರಾಣೆಬೆನ್ನೂರು ಕ್ಷೇತ್ರದಿಂದ ಕಳೆದ ವಿಧಾನಸಭೆಯಲ್ಲಿ ಆಯ್ಕೆ ಆಗಿದ್ದ ಆರ್.ಶಂಕರ್ ನಂತರದಲ್ಲಿ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಂಪಾದಿಸಿದ್ದರು. ಆದರೆ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾರಣ ಈಗ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications