Haveri: ಉದಾಸಿಗೆ ತಪ್ಪಿದ ಮುಖ್ಯಮಂತ್ರಿ ಸ್ಥಾನ: ಬಸವರಾಜ ಬೊಮ್ಮಾಯಿ
ಹಾವೇರಿ, ಫೆಬ್ರವರಿ 02: ಅಧಿಕಾರ ಇರಲಿ ಇಲ್ಲದಿರಲಿ ಸದಾ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುವುದಕ್ಕೆ ಮಾಜಿ ಸಚಿವ ದಿ.ಸಿ.ಎಂ. ಉದಾಸಿ ಮಾದರಿಯಾಗಿದ್ದಾರೆ. ಅವರಿಗೆ ಸಿಎಂ ಆಗುವ ಅವಕಾಶ ಒದಗಿ ಬಂದಿದ್ದು ತಪ್ಪಿ ಹೋಯಿತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸಿ.ಎಂ. ಉದಾಸಿ ಅಭಿಮಾನಿಗಳ ಬಳಗ ಶುಕ್ರವಾರ ಆಯೋಜಿಸಿದ್ದ ಸಿ.ಎಂ. ಉದಾಸಿ ಅವರ 88ನೇ ಜನ್ಮ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಂದಿನ ಮುಖ್ಯಮಂತ್ರಿ ದಿ.ಜೆ.ಎಚ್. ಪಟೇಲರಿಗೆ ದಾವಣಗೆರೆಯನ್ನು ಜಿಲ್ಲೆಯನ್ನಾಗಿಸಬೇಕಿತ್ತು. ಅದೇ ಸಂದರ್ಭದಲ್ಲಿ ಉದಾಸಿ ಅವರು ನಮ್ಮೆಲ್ಲರನ್ನೂ ಕರೆದೊಯ್ದು ಪಟ್ಟು ಹಿಡಿದು ಹಾವೇರಿ ಜಿಲ್ಲೆಯನ್ನು ಘೋಷಿಸುವಂತೆ ಪಟೇಲರ ಮೇಲೆ ಒತ್ತಡ ಹೇರಿದ್ದರಿಂದ ಹಾವೇರಿ ಜಿಲ್ಲಾ ಕೇಂದ್ರವಾಗಿ ರಚನೆಯಾಯಿತು.

ಜಿಲ್ಲೆಯ ಅಭಿವೃದ್ಧಿಯಲ್ಲಿ ಸಿಂಹಪಾಲು
ಬಿಜೆಪಿ ನಾಯಕ ಸಿ.ಎಂ. ಉದಾಸಿ ಅವರು ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯಲ್ಲಿ ಸಿಂಹಪಾಲು ಹೊಂದಿದವರು. ಅವರು ಮೊದಲಿನಿಂದಲೂ ಹೋರಾಟದ ಮೂಲಕ ಮೇಲೆ ಬಂದಿದ್ದಾರೆ. ಬಾಳಂಬೀಡ, ಹಿರೇಕಾಂಶಿ ಏತ ನೀರಾವರಿ ಯೋಜನೆಗಳು ಅವರ ಕಾಲಘಟ್ಟದ ಪ್ರಮುಖ ಕಾಮಗಾರಿಗಳಾಗಿವೆ ಎಂದರು.
ನನ್ನ ರಾಜಕೀಯ ಬದುಕು ರೂಪಿಸುವಲ್ಲಿ ಸಿ.ಎಂ. ಉದಾಸಿ ಮೊದಲ ಪಂಕ್ತಿಯಲ್ಲಿದ್ದರು. ಸಿ.ಎಂ. ಉದಾಸಿ ವ್ಯಾಪಾರದಿಂದ ರಾಜಕಾರಣಕ್ಕೆ ಕಾಲಿಟ್ಟರು. ವ್ಯಾಪಾರದಲ್ಲಿ ಉದ್ರಿ ಇರಲಿಲ್ಲ, ಹೀಗಾಗಿ ರಾಜಕಾರಣದಲ್ಲೂ ಅವರು ಉದ್ರಿ ಉಳಿಸಿಕೊಳ್ಳುತ್ತಿರಲಿಲ್ಲ. ಸಾರ್ವಜನಿಕರ ಸಮಸ್ಯೆಗಳನ್ನು ಕೇಳಿದೊಡನೇ ಅವರೆದುರೇ ಸಂಬಂಧಿಸಿದ ಅಧಿಕಾರಿಗೆ ಸೂಚನೆ ನೀಡಿ ಕೆಲಸ ಮಾಡಿಸಿ ಕೊಡುತ್ತಿದ್ದರು.
ಅವರು ಲೋಕೋಪಯೋಗಿ ಸಚಿವರಾಗಿದ್ದ ಅವಧಿಯಲ್ಲಿ ರಾಜ್ಯದ ಉದ್ದಗಲದಲ್ಲೂ ನಿರ್ಮಿಸಿದ ರಸ್ತೆಗಳು, ಬೃಹತ್ ಕಟ್ಟಡಗಳು ಉದಾಸಿ ಅವರನ್ನು ನೆನಪಿಸುತ್ತಿವೆ. ಜಿಲ್ಲೆಯಲ್ಲಿ ಉದಾಸಿ ಅವರ ಅಭಿವೃದ್ಧಿ ಕಾಲ ಮರುಕಳಿಸಬೇಕು. ಈ ತಾಲೂಕಿನ ನಾಯಕತ್ವದ ಕೊರತೆ ನೀಗಿಸಬೇಕಿದೆ. ಮುಂದಿನ ದಿನಗಳಲ್ಲಿ ರಾಜಕೀಯ ಶಕ್ತಿ ಬೆಳೆಸಲು ಎಲ್ಲ ಕ್ರಮ ಕೈಗೊಳ್ಳುವುದಾಗಿ ಬೊಮ್ಮಾಯಿ ಭರವಸೆ ನೀಡಿದರು.

ಉದಾಸಿಯವರಿಗೆ ತಪ್ಪಿದ ಸಿಎಂ ಸ್ಥಾನ
ದಿವಂಗತ ಸಿ.ಎಂ. ಉದಾಸಿ ಅವರು ಸಿಎಂ ಆಗುವ ಕಾಲ ಒಂದೊಮ್ಮೆ ಕೂಡಿ ಬಂದಿತ್ತು. ಮಾಜಿ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿದಾಗ ಹೈಕಮಾಂಡ್ ಮಟ್ಟದಲ್ಲಿ ಸಿ ಎಂ ಉದಾಸಿ ಅವರು ಮುಖ್ಯಮಂತ್ರಿ ಆಗುವ ಚರ್ಚೆಗಳು ನಡೆದಿದ್ದವು. ನಾವೆಲ್ಲರೂ ಆ ಸಮಯವನ್ನು ಎದುರು ನೋಡುತ್ತಿದ್ದೆವು. ಆದರೆ, ಪಕ್ಷದಲ್ಲಿ ಅಂಥ ವಾತಾವರಣ ಕೂಡಿ ಬರಲಿಲ್ಲ. ಆದರೆ, ಉದಾಸಿ ಅವರ ಹೆಸರಿನೊಂದಿಗೆ ಹುಟ್ಟಿನಿಂದಲೂ ಸಿಎಂ ಸೇರಿಕೊಂಡಿದೆ. ಅವರು ಮಾಜಿಯಾಗುವ ಪ್ರಶ್ನೆ ಬರಲಿಲ್ಲ ಎಂದು ಬೊಮ್ಮಾಯಿ ವಿವರಿಸಿದರು.
ಸಂಸದ ಶಿವಕುಮಾರ ಮನಸು ಬದಲಿಸಲಿ
ಹಾವೇರಿ-ಗದಗ ಸಂಸದರಾಗಿರುವ ಶಿವಕುಮಾರ ಉದಾಸಿ ರಾಜಕಾರಣದಿಂದ ಹೊರಗುಳಿಯುವುದಾಗಿ ಘೋಷಿಸಿದ್ದಾರೆ. ಸಂಸತ್ತಿನಲ್ಲಿ ಒಳ್ಳೆಯ ಹೆಸರು ಮಾಡಿರುವ ಅವರು ಈ ಬಾರಿ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಅದರ ಬೆನ್ನಲ್ಲೇ ಹಲವು ಆಕಾಂಕ್ಷಿಗಳು ಹುಟ್ಟಿಕೊಂಡಿದ್ದಾರೆ. ಶಿವಕುಮಾರ ಮನಸು ಬದಲಾಯಿಸಿದರೆ ಅವರು ಮತ್ತೆ ಗೆಲ್ಲುವುದು ಖಚಿತ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications