ರಾಣೇಬೆನ್ನೂರು: ಕೆಎಸ್ಆರ್ಟಿಸಿ ಬಸ್ಗಾಗಿ ಕಾದು ಕುಳಿತ ಎಂಎಲ್ಸಿ ಶಾಂತಾರಾಮ್ ಸಿದ್ಧಿ
ಹಾವೇರಿ, ಡಿಸೆಂಬರ್ 27: ನಗರಸಭೆ ಸದಸ್ಯರು, ಪಟ್ಟಣ ಪಂಚಾಯತ್ ಸದಸ್ಯರಾದರೆ ಸಾಕು ಐಷಾರಮಿ ಕಾರಿನಲ್ಲಿ ಓಡಾಡುವ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ಧಿ ಸಾಮಾನ್ಯ ಪ್ರಯಾಣಿಕರಂತೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಸರಳತೆ ಮೆರೆದಿದ್ದಾರೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕೆಎಸ್ಆರ್ಟಿಸಿ ನಿಲ್ದಾಣದಲ್ಲಿ ಶಾಂತಾರಾಮ್ ಸಿದ್ಧಿಯವರು ಸಾಮಾನ್ಯ ಪ್ರಯಾಣಿಕರಂತೆ ಕುಳಿತು ಬಸ್ಗಾಗಿ ಕಾಯುತ್ತಿದ್ದರು. ಅವರನ್ನು ನೋಡಿದವರಾರೂ ಇವರು ರಾಷ್ಟ್ರೀಯ ಪಕ್ಷವೊಂದರ ವಿಧಾನ ಪರಿಷತ್ ಸದಸ್ಯರು ಎಂಬುದನ್ನು ಗುರುತಿಸಿಲ್ಲ.
ಸರಳವಾಗಿ ಜೀವನ ನಡೆಸುತ್ತಿರುವ ಶಾಂತಾರಾಮ್ ಸಿದ್ಧಿ ವಿಧಾನ ಪರಿಷತ್ ಸದಸ್ಯರಾದ ಬಳಿಕವೂ ತಮ್ಮ ಓಡಾಡಕ್ಕೆ ಸಾರ್ವಜನಿಕ ಸಂಪರ್ಕವಾದ ಸಾರಿಗೆ ವ್ಯವಸ್ಥೆಯನ್ನೇ ಅವಲಂಬಿಸಿದ್ದಾರೆ. ಮಾತ್ರವಲ್ಲ ಶಾಂತಾರಾಮ್ ಸಿದ್ಧಿಯವರ ಬಳಿ ದುಬಾರಿ ವಾಚ್, ಶೂ, ಫೋನ್, ಬೆಲೆಬಾಳುವ ಉಡುಪು, ಸಹಾಯಕರು ಕೂಡ ಇಲ್ಲ.

ಆಫ್ರಿಕನ್ ಮೂಲದ ಸಿದ್ಧಿ ಸಮುದಾಯದಿಂದ ಕರ್ನಾಟಕದ ಮೊದಲ ವಿಧಾನ ಪರಿಷತ್ ಸದಸ್ಯರಾಗಿರುವ ಶಾಂತಾರಾಮ್ ಸಿದ್ದಿ ಬಸ್ಗಾಗಿ ಕಾಯುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಧಾನ ಪರಿಷತ್ ಸದಸ್ಯರಾಗಿದ್ದರೂ ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುತ್ತಿರುವ ಇವರ ಸರಳ ಜೀವನಕ್ಕೆ ಇದೀಗ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದವರಾದ ಶಾಂತಾರಾಮ್ ಸಿದ್ದಿ, ಹಿತ್ಲಳ್ಳಿಯ ಸಣ್ಣ ನಿವಾಸದಲ್ಲಿ ತಮ್ಮ ಪತ್ನಿ ಹಾಗೂ ಮಕ್ಕಳ ಜೊತೆ ವಾಸವಾಗಿದ್ದಾರೆ. ಮೂರು ದಶಕಗಳಿಂದ ಸಮಾಜ ಸೇವೆ ಹಾಗೂ ಪರಿಸರ ರಕ್ಷಣೆಯಲ್ಲಿ ದುಡಿಯುತ್ತಿರುವ ಶಾಂತಾರಾಮ್ ಸಿದ್ಧಿ, ಮಲೆನಾಡು, ಕರಾವಳಿಯಲ್ಲಿರುವ ಸಿದ್ದಿ, ಗೌಳಿ, ಕುಣಬಿ, ಗೊಂಡ, ಹಾಲಕ್ಕಿ ಮುಂತಾದ ಬುಡಕಟ್ಟು ಸಮುದಾಯಗಳ ಆರ್ಥಿಕ ಹಾಗೂ ಸಾಮಾಜಿಕ, ಶೈಕ್ಷಣಿಕ ಉನ್ನತಿಗಾಗಿ ಶ್ರಮಿಸುತ್ತಾ ಬಂದಿದ್ದಾರೆ.
ವಿಶೇಷವಾಗಿ ವನವಾಸಿಗಳ ವಸತಿ ಶಾಲೆ, ಸಮುದಾಯ ಶಿಕ್ಷಣ, ಆರೋಗ್ಯ ಶಿಬಿರ, ಕೌಶಲ್ಯ ತರಬೇತಿಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದು, ಹಳ್ಳಿಗರನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.
ಆರಂಭದಿಂದಲೂ ಬಿಜೆಪಿ ಹಾಗೂ ಆರ್ಎಸ್ಎಸ್ನಲ್ಲಿ ಗುರುತಿಸಿಕೊಂಡ ಶಾಂತಾರಾಮ್ ಸಿದ್ಧಿಯವರನ್ನು ಬಿಜೆಪಿ ಗುರುತಿಸಿ ವಿಧಾನ ಪರಿಷತ್ಗೆ ನಾಮನಿರ್ದೇಶನಗೊಳಿಸಿದೆ. ಇದು ಎಲ್ಲರ ಅಚ್ಚರಿಗೂ ಕಾರಣವಾಗಿತ್ತು. ವಿಧಾನ ಪರಿಷತ್ಗೆ ನೇಮಕವಾದ ಮೇಲೂ ಶಾಂತಾರಾಮ್ ಸಿದ್ಧಿ ಹಿಂದಿನಂತೆ ಸರಳ ಜೀವನವನ್ನು ಮುಂದುವರೆಸಿಕೊಂಡು ಬಂದಿದ್ದು ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ.
Recommended Video
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications