ಕಾಂಗ್ರೆಸ್ ಪಕ್ಷಕ್ಕೆ ಬದ್ಧತೆ ಇಲ್ಲ, ಬಿಜೆಪಿ ಗೆಲುವು ನಿಶ್ಚಿತ: ಸುಧಾಕರ್
ಹಾನಗಲ್, ಅಕ್ಟೋಬರ್ 18: ''ಹಾನಗಲ್ ಕ್ಷೇತ್ರದ ಜನರು ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಅವರಿಗೆ ಮತ ನೀಡಿದರೆ ನೇರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಬಲಿಸಿದಂತಾಗುತ್ತದೆ,'' ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಹಾನಗಲ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ''ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರಳ, ಸಜ್ಜನ ವ್ಯಕ್ತಿಯಾಗಿದ್ದು, ಕಾಮನ್ ಮ್ಯಾನ್ ಸಿಎಂ ಆಗಿದ್ದಾರೆ ಹಾಗೂ ಇದೇ ಹಾವೇರಿ ಜಿಲ್ಲೆಯವರಾಗಿದ್ದಾರೆ. ಆದ್ದರಿಂದ ಮುಖ್ಯಮಂತ್ರಿಗಳಿಗೆ ಬೆಂಬಲ ನೀಡಲು ಇದೊಂದು ಅವಕಾಶವಾಗಿದೆ. ರಾಜ್ಯದ ಜನರೆಲ್ಲರೂ ಮುಖ್ಯಮಂತ್ರಿಗಳನ್ನು ಪ್ರೀತಿಯಿಂದ ನೋಡುತ್ತಿದ್ದಾರೆ. ಹೀಗಾಗಿ ಕ್ಷೇತ್ರದ ಜನರು ನೀಡುವ ಮತ ನೇರವಾಗಿ ಮುಖ್ಯಮಂತ್ರಿಗಳಿಗೆ ನೀಡಿದಂತಾಗುತ್ತದೆ. ಇದು ಬಸವರಾಜ ಬೊಮ್ಮಾಯಿರವರು ಸಿಎಂ ಆದ ಬಳಿಕ ಎದುರಿಸುತ್ತಿರುವ ಮೊದಲ ಉಪಚುನಾವಣೆಯಾಗಿದ್ದರೂ, ಪ್ರತಿಷ್ಠೆ ಅಲ್ಲ ಎಂದು ಅವರೇ ಹೇಳಿದ್ದಾರೆ. ಆದರೆ ಇದು ಹಾನಗಲ್ ಕ್ಷೇತ್ರದ ಭವಿಷ್ಯದ ಪ್ರಶ್ನೆಯಾಗಿದೆ ಎಂದು ಸಿಎಂ ಹೇಳಿದ್ದಾರೆ,'' ಎಂದರು.

ಹಾವೇರಿಗೆ ಏನು ಮಾಡಬೇಕು ಎಂಬ ಚಿಂತನೆ
ಒಂದೂವರೆ ವರ್ಷದ ಅವಧಿಯಲ್ಲಿ ತವರು ಜಿಲ್ಲೆ ಹಾವೇರಿಗೆ ಏನು ಮಾಡಬೇಕು ಎಂಬ ಚಿಂತನೆ ಮುಖ್ಯಮಂತ್ರಿಗಳಿಗಿದೆ. ಬಿಜೆಪಿಯನ್ನು ಗೆಲ್ಲಿಸಿದರೆ ಅದನ್ನು ಅನುಷ್ಠಾನಕ್ಕೆ ತರಲು ಸಹಾಯಕವಾಗುತ್ತದೆ. ಬೇರೆ ಪಕ್ಷದವರನ್ನು ಗೆಲ್ಲಿಸಿದರೆ ಅಭಿವೃದ್ಧಿ ಕಾರ್ಯ ಸಾಧ್ಯವಾಗುವುದಿಲ್ಲ. ಬಿಜೆಪಿ ಗೆಲ್ಲಿಸಿದರೆ ಸಿ.ಎಂ.ಉದಾಸಿ ಅವರ ಅಭಿವೃದ್ಧಿ ಕಾರ್ಯಗಳು ಮುಂದುವರಿಯುತ್ತವೆ. 2018 ರಲ್ಲಿ ಹಾನಗಲ್ ಜನತೆ ಅಭೂತಪೂರ್ವ ಜಯವನ್ನು ಬಿಜೆಪಿಗೆ ತಂದುಕೊಟ್ಟಿದ್ದರು. ಅಂದರೆ ಐದು ವರ್ಷಗಳ ಕಾಲ, 2023 ರವರೆಗೂ ಹಾನಗಲ್ ಜನರು ಬಿಜೆಪಿಗೆ ಅವಕಾಶ ನೀಡಿದ್ದಾರೆ ಎಂದರು.

ಬದ್ಧತೆ ಇಲ್ಲದ ಕಾಂಗ್ರೆಸ್
500 ಕೋಟಿ ರೂ. ಗೂ ಅಧಿಕ ಮೊತ್ತದ ಎರಡು ಏತ ನೀರಾವರಿ ಯೋಜನೆಗೆ ಹಿಂದಿನ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದರು. ಕಾಂಗ್ರೆಸ್ ನವರು ಇದನ್ನು ಮಾಡಲಿಲ್ಲ. ಹಾವೇರಿ ಜಿಲ್ಲೆಗೆ ಮೆಡಿಕಲ್ ಕಾಲೇಜನ್ನೂ ನೀಡಲಾಗಿದೆ. ಕಾಂಗ್ರೆಸ್ ನವರು ಹಾವೇರಿಗೆ ಮಂಜೂರಾದ ಕಾಲೇಜನ್ನು ಬೇರೆ ಜಿಲ್ಲೆಗೆ ತೆಗೆದುಕೊಂಡು ಹೋಗಿದ್ದರು. ಜಿಲ್ಲೆಯ ಜನರ ಬಗ್ಗೆ ಅವರಿಗೆ ಯಾವುದೇ ಬದ್ಧತೆ ಇಲ್ಲ ಎಂದು ಸುಧಾಕರ್ ಹೇಳಿದರು.

ಕೋವಿಡ್ ಲಸಿಕೆ ವಿಷಯದಲ್ಲಿ ಕಾಂಗ್ರೆಸ್ ರಾಜಕೀಯ
ಗೆದ್ದ ಮೇಲೆ ಏನು ಮಾಡುತ್ತೇವೆಂದು ಕಾಂಗ್ರೆಸ್ನ ಒಬ್ಬರೂ ಹೇಳುತ್ತಿಲ್ಲ. ಆದರೆ ಮುಖ್ಯಮಂತ್ರಿಗಳು ವಿಷನ್ ಡಾಕ್ಯುಮೆಂಟ್ ರೂಪಿಸುತ್ತೇವೆ ಎಂದು ಹೇಳಿದ್ದಾರೆ. ರಾಜ್ಯ ದೇಶದಲ್ಲೇ ಅತ್ಯುತ್ತಮವಾಗಿ ಕೋವಿಡ್ ನಿರ್ವಹಿಸಿದೆ ಎಂದು ಇಂಡಿಯಾ ಟುಡೇಯಿಂದ ಪ್ರಶಸ್ತಿ ಪಡೆದಿದೆ. ಕೋವಿಡ್ ಲಸಿಕೆ ಸೇರಿದಂತೆ ಎಲ್ಲ ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯ ಮಾಡಿದ್ದು, ಇದನ್ನು ಜನರು ಕ್ಷಮಿಸುವುದಿಲ್ಲ. ಮೋದಿ ವ್ಯಾಕ್ಸಿನ್ ಎಂದು ಟೀಕೆ ಮಾಡಿದವರು ನಂತರ ಲಸಿಕೆ ಪಡೆಯಲು ಸಾಲಿನಲ್ಲಿ ನಿಂತರು ಎಂದರು.
Recommended Video

ನವೆಂಬರ್ ಎರಡರಂದು ಫಲಿತಾಂಶ
ಸಿ.ಎಂ.ಉದಾಸಿ ನಿಧನದಿಂದ ಹಾನಗಲ್ ಮತ್ತು ಮನಗೂಳಿ ನಿಧನದಿಂದ ಸಿಂಧಗಿ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದ್ದು, ಅಕ್ಟೋಬರ್ ಮೂವತ್ತರಂದು ಚುನಾವಣೆ ನಡೆಯಲಿದೆ. ನವೆಂಬರ್ ಎರಡರಂದು ಫಲಿತಾಂಶ ಹೊರಬೀಳಲಿದೆ. ಹಾನಗಲ್ನಲ್ಲಿ ಸದ್ಯ ಕಾಂಗ್ರೆಸ್ಸಿಗೆ ಪೂರಕವಾದ ವಾತಾವರಣವಿದ್ದರೆ, ಸಿಂಧಗಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಸಮನಾದ ಫೈಟ್ ಇದೆ. ಹಾನಗಲ್ ನಲ್ಲಿ ಸಿ.ಎಂ.ಉದಾಸಿ ಕುಟುಂಬದ ಸದಸ್ಯರು ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕು. ಇಲ್ಲದಿದ್ದರೆ, ಬಿಜೆಪಿಗೆ ಪ್ರತಿಕೂಲವಾಗುವ ಸಾಧ್ಯತೆ ಹೆಚ್ಚು ಎಂದು ಖಾಸಗಿ ಸಂಸ್ಥೆಯೊಂದರ ವರದಿ ಹೇಳಿದೆ.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications