ಕಾಂಗ್ರೆಸ್ ಪಕ್ಷಕ್ಕೆ ಬದ್ಧತೆ ಇಲ್ಲ, ಬಿಜೆಪಿ ಗೆಲುವು ನಿಶ್ಚಿತ: ಸುಧಾಕರ್
ಹಾನಗಲ್, ಅಕ್ಟೋಬರ್ 18: ''ಹಾನಗಲ್ ಕ್ಷೇತ್ರದ ಜನರು ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಅವರಿಗೆ ಮತ ನೀಡಿದರೆ ನೇರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಬಲಿಸಿದಂತಾಗುತ್ತದೆ,'' ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಹಾನಗಲ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ''ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರಳ, ಸಜ್ಜನ ವ್ಯಕ್ತಿಯಾಗಿದ್ದು, ಕಾಮನ್ ಮ್ಯಾನ್ ಸಿಎಂ ಆಗಿದ್ದಾರೆ ಹಾಗೂ ಇದೇ ಹಾವೇರಿ ಜಿಲ್ಲೆಯವರಾಗಿದ್ದಾರೆ. ಆದ್ದರಿಂದ ಮುಖ್ಯಮಂತ್ರಿಗಳಿಗೆ ಬೆಂಬಲ ನೀಡಲು ಇದೊಂದು ಅವಕಾಶವಾಗಿದೆ. ರಾಜ್ಯದ ಜನರೆಲ್ಲರೂ ಮುಖ್ಯಮಂತ್ರಿಗಳನ್ನು ಪ್ರೀತಿಯಿಂದ ನೋಡುತ್ತಿದ್ದಾರೆ. ಹೀಗಾಗಿ ಕ್ಷೇತ್ರದ ಜನರು ನೀಡುವ ಮತ ನೇರವಾಗಿ ಮುಖ್ಯಮಂತ್ರಿಗಳಿಗೆ ನೀಡಿದಂತಾಗುತ್ತದೆ. ಇದು ಬಸವರಾಜ ಬೊಮ್ಮಾಯಿರವರು ಸಿಎಂ ಆದ ಬಳಿಕ ಎದುರಿಸುತ್ತಿರುವ ಮೊದಲ ಉಪಚುನಾವಣೆಯಾಗಿದ್ದರೂ, ಪ್ರತಿಷ್ಠೆ ಅಲ್ಲ ಎಂದು ಅವರೇ ಹೇಳಿದ್ದಾರೆ. ಆದರೆ ಇದು ಹಾನಗಲ್ ಕ್ಷೇತ್ರದ ಭವಿಷ್ಯದ ಪ್ರಶ್ನೆಯಾಗಿದೆ ಎಂದು ಸಿಎಂ ಹೇಳಿದ್ದಾರೆ,'' ಎಂದರು.

ಹಾವೇರಿಗೆ ಏನು ಮಾಡಬೇಕು ಎಂಬ ಚಿಂತನೆ
ಒಂದೂವರೆ ವರ್ಷದ ಅವಧಿಯಲ್ಲಿ ತವರು ಜಿಲ್ಲೆ ಹಾವೇರಿಗೆ ಏನು ಮಾಡಬೇಕು ಎಂಬ ಚಿಂತನೆ ಮುಖ್ಯಮಂತ್ರಿಗಳಿಗಿದೆ. ಬಿಜೆಪಿಯನ್ನು ಗೆಲ್ಲಿಸಿದರೆ ಅದನ್ನು ಅನುಷ್ಠಾನಕ್ಕೆ ತರಲು ಸಹಾಯಕವಾಗುತ್ತದೆ. ಬೇರೆ ಪಕ್ಷದವರನ್ನು ಗೆಲ್ಲಿಸಿದರೆ ಅಭಿವೃದ್ಧಿ ಕಾರ್ಯ ಸಾಧ್ಯವಾಗುವುದಿಲ್ಲ. ಬಿಜೆಪಿ ಗೆಲ್ಲಿಸಿದರೆ ಸಿ.ಎಂ.ಉದಾಸಿ ಅವರ ಅಭಿವೃದ್ಧಿ ಕಾರ್ಯಗಳು ಮುಂದುವರಿಯುತ್ತವೆ. 2018 ರಲ್ಲಿ ಹಾನಗಲ್ ಜನತೆ ಅಭೂತಪೂರ್ವ ಜಯವನ್ನು ಬಿಜೆಪಿಗೆ ತಂದುಕೊಟ್ಟಿದ್ದರು. ಅಂದರೆ ಐದು ವರ್ಷಗಳ ಕಾಲ, 2023 ರವರೆಗೂ ಹಾನಗಲ್ ಜನರು ಬಿಜೆಪಿಗೆ ಅವಕಾಶ ನೀಡಿದ್ದಾರೆ ಎಂದರು.

ಬದ್ಧತೆ ಇಲ್ಲದ ಕಾಂಗ್ರೆಸ್
500 ಕೋಟಿ ರೂ. ಗೂ ಅಧಿಕ ಮೊತ್ತದ ಎರಡು ಏತ ನೀರಾವರಿ ಯೋಜನೆಗೆ ಹಿಂದಿನ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದರು. ಕಾಂಗ್ರೆಸ್ ನವರು ಇದನ್ನು ಮಾಡಲಿಲ್ಲ. ಹಾವೇರಿ ಜಿಲ್ಲೆಗೆ ಮೆಡಿಕಲ್ ಕಾಲೇಜನ್ನೂ ನೀಡಲಾಗಿದೆ. ಕಾಂಗ್ರೆಸ್ ನವರು ಹಾವೇರಿಗೆ ಮಂಜೂರಾದ ಕಾಲೇಜನ್ನು ಬೇರೆ ಜಿಲ್ಲೆಗೆ ತೆಗೆದುಕೊಂಡು ಹೋಗಿದ್ದರು. ಜಿಲ್ಲೆಯ ಜನರ ಬಗ್ಗೆ ಅವರಿಗೆ ಯಾವುದೇ ಬದ್ಧತೆ ಇಲ್ಲ ಎಂದು ಸುಧಾಕರ್ ಹೇಳಿದರು.

ಕೋವಿಡ್ ಲಸಿಕೆ ವಿಷಯದಲ್ಲಿ ಕಾಂಗ್ರೆಸ್ ರಾಜಕೀಯ
ಗೆದ್ದ ಮೇಲೆ ಏನು ಮಾಡುತ್ತೇವೆಂದು ಕಾಂಗ್ರೆಸ್ನ ಒಬ್ಬರೂ ಹೇಳುತ್ತಿಲ್ಲ. ಆದರೆ ಮುಖ್ಯಮಂತ್ರಿಗಳು ವಿಷನ್ ಡಾಕ್ಯುಮೆಂಟ್ ರೂಪಿಸುತ್ತೇವೆ ಎಂದು ಹೇಳಿದ್ದಾರೆ. ರಾಜ್ಯ ದೇಶದಲ್ಲೇ ಅತ್ಯುತ್ತಮವಾಗಿ ಕೋವಿಡ್ ನಿರ್ವಹಿಸಿದೆ ಎಂದು ಇಂಡಿಯಾ ಟುಡೇಯಿಂದ ಪ್ರಶಸ್ತಿ ಪಡೆದಿದೆ. ಕೋವಿಡ್ ಲಸಿಕೆ ಸೇರಿದಂತೆ ಎಲ್ಲ ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯ ಮಾಡಿದ್ದು, ಇದನ್ನು ಜನರು ಕ್ಷಮಿಸುವುದಿಲ್ಲ. ಮೋದಿ ವ್ಯಾಕ್ಸಿನ್ ಎಂದು ಟೀಕೆ ಮಾಡಿದವರು ನಂತರ ಲಸಿಕೆ ಪಡೆಯಲು ಸಾಲಿನಲ್ಲಿ ನಿಂತರು ಎಂದರು.
Recommended Video

ನವೆಂಬರ್ ಎರಡರಂದು ಫಲಿತಾಂಶ
ಸಿ.ಎಂ.ಉದಾಸಿ ನಿಧನದಿಂದ ಹಾನಗಲ್ ಮತ್ತು ಮನಗೂಳಿ ನಿಧನದಿಂದ ಸಿಂಧಗಿ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದ್ದು, ಅಕ್ಟೋಬರ್ ಮೂವತ್ತರಂದು ಚುನಾವಣೆ ನಡೆಯಲಿದೆ. ನವೆಂಬರ್ ಎರಡರಂದು ಫಲಿತಾಂಶ ಹೊರಬೀಳಲಿದೆ. ಹಾನಗಲ್ನಲ್ಲಿ ಸದ್ಯ ಕಾಂಗ್ರೆಸ್ಸಿಗೆ ಪೂರಕವಾದ ವಾತಾವರಣವಿದ್ದರೆ, ಸಿಂಧಗಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಸಮನಾದ ಫೈಟ್ ಇದೆ. ಹಾನಗಲ್ ನಲ್ಲಿ ಸಿ.ಎಂ.ಉದಾಸಿ ಕುಟುಂಬದ ಸದಸ್ಯರು ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕು. ಇಲ್ಲದಿದ್ದರೆ, ಬಿಜೆಪಿಗೆ ಪ್ರತಿಕೂಲವಾಗುವ ಸಾಧ್ಯತೆ ಹೆಚ್ಚು ಎಂದು ಖಾಸಗಿ ಸಂಸ್ಥೆಯೊಂದರ ವರದಿ ಹೇಳಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications