ಉಕ್ರೇನ್ನಲ್ಲಿ ಸಾವನ್ನಪ್ಪಿದ ನವೀನ್ ಮನೆಗೆ ಸಿಎಂ ಭೇಟಿ: 25 ಲಕ್ಷ ಪರಿಹಾರ ವಿತರಣೆ
ಹಾವೇರಿ, ಮಾರ್ಚ್ 5: ರಷ್ಯಾದ ಶೆಲ್ ದಾಳಿಗೆ ಉಕ್ರೇನ್ನಲ್ಲಿ ಸಾವನ್ನಪ್ಪಿದ ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ನವೀನ್ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರದಂದು ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿಯಲ್ಲಿರುವ ಉಕ್ರೇನ್ನಲ್ಲಿ ಮೃತಪಟ್ಟ ವೈದ್ಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಅವರ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಿ, ಪರಿಹಾರದ ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಶ್ರೀಗಳು, ಕೃಷಿ ಸಚಿವ ಬಿ.ಸಿ. ಪಾಟೀಲ್, ಹಾವೇರಿ-ಗದಗ ಸಂಸದ ಶಿವಕುಮಾರ್ ಉದಾಸಿ, ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್.ವಿ. ಸಂಕನೂರ್ ಮತ್ತು ಇತರರು ಉಪಸ್ಥಿತರಿದ್ದರು.

ಸಿಎಂ ಬಸವರಾಜ ಬೊಮ್ಮಾಯಿಯವರು ನವೀನ್ ಅವರ ತಂದೆ ಶೇಖರಗೌಡ ಗ್ಯಾನಗೌಡರ್ ಅವರಿಗೆ 25 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.
ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, "ನವೀನ್ ಪಾರ್ಥಿವ ಶರೀರ ತಾಯ್ನಾಡಿಗೆ ತರುವ ಪ್ರಯತ್ನವಾಗುತ್ತಿದೆ. ಈ ಬಗ್ಗೆ ವಿದೇಶಾಂಗ ಸಚಿವರ ಜೊತೆಗೆ ಸಂಪರ್ಕದಲ್ಲಿದ್ದೇವೆ. ಉಕ್ರೇನ್ನಲ್ಲಿ ಬಾಂಬಿಂಗ್ ಆಗುತ್ತಿದೆ, ಹೀಗಾಗಿ ತರಲು ಆಗುತ್ತಿಲ್ಲ. ಆದಷ್ಟು ಬೇಗ ಪಾರ್ಥಿವ ಶರೀರ ತರಲು ಪ್ರಯತ್ನಿಸುತ್ತೇವೆ," ಎಂದು ಹೇಳಿದ್ದಾರೆ.
ಮಗನ ಪಾರ್ಥಿವ ಶರೀರ ಬರುವುದಾಗಿ ಸಿಎಂ ಹೇಳಿದ್ದಾರೆ: ಶೇಖರಗೌಡ
"ಮಗನ ಪಾರ್ಥಿವ ಶರೀರವನ್ನು ಶೀಘ್ರದಲ್ಲಿ ತರುವ ಪ್ರಯತ್ನ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಉಕ್ರೇನ್ನಲ್ಲಿರುವ ಉಳಿದ ಮಕ್ಕಳನ್ನು ಕರೆಸುವಂತೆ ಹೇಳಿದ್ದೇವೆ," ಎಂದು ಮೃತ ನವೀನ್ ತಂದೆ ಶೇಖರಗೌಡ ಮನವಿ ಮಾಡಿದ್ದಾರೆ.
ನವೀನ ಪಾರ್ಥಿವ ಶರೀರವನ್ನು ಸುರಕ್ಷಿತವಾಗಿಡಲಾಗಿದೆ: ವಚನಾನಂದ ಸ್ವಾಮೀಜಿ
"ಮೇಲ್ವರ್ಗದಲ್ಲಿ ಹುಟ್ಟಿದ್ದೆ ತಪ್ಪಾ ಅಂತಾ ನವೀನ್ ತಾಯಿ ಕೇಳಿದರು. ಪ್ರತಿಭಾವಂತ ಮಕ್ಕಳು ಏನು ಆಗಬೇಕು ಅಂದುಕೊಂಡಿದ್ದಾರೋ ಅದು ಆಗುತ್ತಿಲ್ಲ. ಪ್ರತಿಭೆಗೆ ಪ್ರೋತ್ಸಾಹ ಕೊಡಬೇಕು ಅನ್ನುವುದು ಪ್ರತಿಯೊಬ್ಬ ತಾಯಿಯ ಕನಸು. ಒಬ್ಬ ತಾಯಿಯ ನೋವು ಮತ್ತೊಬ್ಬ ತಾಯಿಗೆ ಮಾತ್ರ ಗೊತ್ತಾಗುತ್ತದೆ. ನವೀನ್ ಪಾರ್ಥಿವ ಶರೀರವನ್ನು ಸುರಕ್ಷಿತವಾಗಿ ಇಡಲಾಗಿದೆ," ಎಂದು ವಚನಾನಂದ ಸ್ವಾಮೀಜಿ ತಿಳಿಸಿದರು.
"ಯುದ್ಧ ನಿಂತ ಮೇಲೆ ಪಾರ್ಥಿವ ಶರೀರ ತರುವ ಪ್ರಯತ್ನ ಮಾಡುತ್ತಿರುವುದಾಗಿ ಸಿಎಂ ಹೇಳಿದ್ದಾರೆ. ಅಲ್ಲಿರುವ ಎಲ್ಲ ಮಕ್ಕಳು ವಾಪಸ್ ಬರಬೇಕು. ಶಿಕ್ಷಣಕ್ಕಾಗಿ ಹೊರದೇಶಕ್ಕೆ ಹೋಗುವ ವಾತಾವರಣ ಆಗಬಾರದು. ಒನ್ ನೇಷನ್ ಒನ್ ರಿಸರ್ವೇಶನ್ ಆಗಬೇಕು. ಒನ್ ನೇಶನ್ ಒನ್ ಲಾ ಆಗಬೇಕು. ನಮ್ಮಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಸರಕಾರ ಎಲ್ಲ ರೀತಿಯಿಂದ ಈ ವಿಚಾರಗಳನ್ನು ಗಮನಿಸುತ್ತಿದೆ," ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications