Heavy Rain: ಹಾವೇರಿ ಜಿಲ್ಲೆಯ ಈ ಭಾಗದಲ್ಲಿ ಭಾರೀ ಮಳೆಯಿಂದ ಬೆಳೆಗಳು ಜಲಾವೃತ-ಅನ್ನದಾತ ಕಂಗಾಲು
ಹಾವೇರಿ, ಅಕ್ಟೋಬರ್, 12: ಈಗಾಗಲೇ ನಿನ್ನೆ (ಅಕ್ಟೋಬರ್ 11) ಮೈಸೂರು ಸೇರಿದಂತೆ ರಾಜ್ಯಾದ್ಯಂತ ಆಯುಧ ಪೂಜೆ ಕಾರ್ಯಕ್ರಮ ಮುಗಿದಿದೆ. ಆದರೆ ವಿಜಯ ದಶಮಿ ಹಬ್ಬದ ದಿನದಂದೇ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದ ಯುಟಿಪಿ ಕಾಲುವೆ ಒಡೆದಿದ್ದು, ಇದರಿಂದ ಸಾವಿರಾರು ಹೆಕ್ಟೇರ್ನಲ್ಲಿ ಬೆಳೆದಿದ್ದ ಬೆಳೆ ಜಲಾವೃತವಾಗಿ ಅನ್ನದಾತರು ಕಣ್ಣೀರಿಡುತ್ತಿದ್ದಾರೆ.
ಭಾರೀ ಮಳೆಯಿಂದ ನಿನ್ನೆ ಹಾವೇರಿ ಜಿಲ್ಲೆಯ ಕನಕಾಪುರ ಗ್ರಾಮದ ಬಳಿಯಿರುವ ಉಟಿಬಿ ಕಾಲುವೆ ಒಡೆದು ಸಾವಿರಾರು ಹೆಕ್ಟೇರ್ನಲ್ಲಿ ಬೆಳೆದಿದ್ದ ಹತ್ತಿ, ಗೋವಿನಜೋಳ, ಶೇಂಗಾ ಸೋಯಾಬಿನ್, ಕಬ್ಬು ಬೆಳೆ ಜಲಾವೃತವಾಗಿವೆ. ಇಷ್ಟೆಲ್ಲ ಅವಾಂತರಗಳು ಸಂಭವಿಸಿದ್ರೂ ಕೂಡ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಘಟನಾ ಸ್ಥಳಕ್ಕೆ ಬಂದಿಲ್ಲ ಎಂದು ರೈತರು ಆಕ್ರೋಶ ಹೊರಹಾಕುತ್ತಿದ್ದಾರೆ

ಹಬ್ಬದ ಸಂಭ್ರಮ ಕಸಿದ ಕಾಡಾನೆ: ಮತ್ತೊಂದೆಡೆ ಆಹಾರ ಅರಸಿ ಬಂದ ಒಂಟಿ ಸಲಗವೊಂದು ಜಮೀನುಗಳಿಗೆ ಲಗ್ಗೆ ಇಟ್ಟು ಟೊಮೆಟೊ ಫಸಲನ್ನು ತುಳಿದು, ತಿಂದು ನಾಶ ಪಡಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ, ಹೊಸಪುರದಲ್ಲಿ ನಡೆದಿದ್ದು, ಆಯುಧ ಪೂಜೆ ಸಡಗರದಲ್ಲಿದ್ದ ರೈತರು ಕಂಗಲಾಗಿದ್ದಾರೆ.
ಯಡವನಹಳ್ಳಿ ಗ್ರಾಮದ ಜವರನಾಯಕ, ಮಾದೇಶ್, ಪಾಪನಾಯಕ ಎಂಬವರಿಗೆ ಸೇರಿದ ಜಮೀನುಗಳಿಗೆ ಒಂಟಿ ಸಲಗ ದಾಳಿ ಮಾಡಿ ಫಸಲು ನಾಶ ಮಾಡಿದೆ. ಜವರನಾಯಕ ಎಂಬವರಿಗೆ ಸೇರಿದ ಒಂದು ಹೆಕ್ಟೇರ್, ಪಾಪನಾಯಕಗೆ ಸೇರಿದ ಮುಕ್ಕಾಲು ಹೆಕ್ಟೇರ್, ಮಾದೇಶ್ ಅವರಿಗೆ ಸೇರಿದ ಒಂದು ಹೆಕ್ಟೇರ್ ಟೊಮೆಟೊ ನಾಶವಾಗಿದ್ದು, ರೈತರು ಕಂಗಲಾಗಿದ್ದಾರೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯದಲ್ಲಿ ಈ ದಾಳಿ ನಡೆದಿದೆ.
ಕಾರ್ಣಿಕ ಏನು?: ಅಕ್ಟೋಬರ್ 11ರಂದು ಹಾವೇರಿ ಜಿಲ್ಲೆಯ ರಾಣೆ ಬೆನ್ನೂರು ತಾಲ್ಲೂಕಿನ ದೇವರಗುಡ್ಡದ ಮಾಲತೇಶ ಸ್ವಾಮಿ ಕಾರ್ಣಿಕೋತ್ಸವ ನಡೆಯಿತು. ಈ ಕಾರ್ಣಿಕೋತ್ಸವದಲ್ಲಿ ದೇವರಗುಡ್ಡದ ಮಾಲತೇಶಸ್ವಾಮಿಯ ಗೊರವಯ್ಯ ನಾಗಪ್ಪಜ್ಜ ಉರ್ಮಿ ಅವರು ವಾರ್ಷಿಕ ಕಾರ್ಣಿಕ ನುಡಿಯನ್ನು ನುಡಿದಿದ್ದಾರೆ.
"ಆಕಾಶನ ಚಿಗುರೀತಲೇ, ಬೇರೆಲ್ಲಾ ಮುತ್ತಾಯಿತಲೇ ಪರಾಕ್" ಎಂಬುದಾಗಿ ಭವಿಷ್ಯ ವಾಣಿಯನ್ನು ಗೊರವಪ್ಪ ನಾಗಪ್ಪಜ್ಜ ಉರ್ಮಿ ನುಡಿದಿದ್ದಾರೆ. ಇದರ ಅರ್ಥವನ್ನು ದೇವರಗುಡ್ಡದಲ್ಲಿ ಮಾಲತೇಶ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸಂತೋಷ್ ಭಟ್ ಗುರೂಜಿ ವಿವರಿಸಿದ್ದು, ರಾಜ್ಯದಲ್ಲಿ ಮಳೆ, ಬೆಳೆ, ರಾಜಕೀಯ ಅನಾಹುತದ ಬಗ್ಗೆ ಭವಿಷ್ಯವಾಣಿ ಇದಾಗಿದೆ ಎಂದರು.
'ಆಕಾಶದತ್ತ ಚಿಗುರಿತಲೆ' ಎಂದರೆ ಒಳ್ಳೆ ಮಳೆ ಆಗುತ್ತೆ, 'ಬೇರೆಲ್ಲ ಮುದ್ದಾಯಿತಲೇ' ಅಂದರೆ ರೈತರಿಗೆ ಒಳ್ಳೆ ಬೆಳೆ ಬರುತ್ತೆ ಅದನ್ನು ತೆಗೆದುಕೊಳ್ಳೋ ಫಲಾನುಭವಿಗಳಿಗೂ ಒಳ್ಳೆಯದಾಗುತ್ತೆ ಅಂತಾ ವಿಶ್ಲೇಷಣೆಯನ್ನು ಸಂತೋಷ್ ಭಟ್ ಗುರೂಜಿ ವಿವರಿಸಿ ಹೇಳಿದರು.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications