ದೇವರಗುಡ್ಡದ ಕಾರ್ಣಿಕ ಭವಿಷ್ಯವಾಣಿ: ಯುವಕನಿಗೆ ಮುಖ್ಯಮಂತ್ರಿ ಪಟ್ಟ, ಸಮೃದ್ಧ ಬೆಳೆ
ಹಾವೇರಿ, ಅಕ್ಟೋಬರ್, 04: 'ಗುಡ್ಡಕ್ಕಲೆ ಶಿಶು ಏರಿತಲೇ ಪರಾಕ್' ಎಂದು ದೇವರಗುಡ್ಡದ ಗೊರವಪ್ಪ ನಾಗಪ್ಪ ಉರ್ಮಿ ಬಿಲ್ಲನ್ನೇರಿ ಇಂದು ಕಾರ್ಣಿಕವನ್ನು ನುಡಿದರು. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗಿ ಆಗಿದ್ದರು. ದಸರಾ ಹಬ್ಬದ ಸಮಯದಲ್ಲಿ ನಡೆಯುವ ಮಾಲತೇಶ ದೇವರ ಕಾರ್ಣಿಕೋತ್ಸವ, ವರ್ಷದ ಭವಿಷ್ಯವಾಣಿ ಅಂತಲೇ ನಂಬಲಾಗುತ್ತದೆ. ಹಾಗೂ ಇದು ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ.
ಸಣ್ಣ - ಸಣ್ಣ ರೈತರಿಗೂ ಜೀವನದ ಹಾದಿ ಉತ್ತಮ ಆಗಲಿದ್ದು, ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ದೊರೆಯಲಿದೆ. ಇನ್ನು ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ಕಾರ್ಣಿಕವನ್ನು ವಿಶ್ಲೇಷಿಸಿದ್ದಾರೆ. ಈ ಕುರಿತು ದೇವರಗುಡ್ಡ ದೇವಸ್ಥಾನದ ಪ್ರಧಾನ ಅರ್ಚಕರು ಗುರೂಜಿ ಸಂತೋಷ ಭಟ್ ಮಾಹಿತಿಯನ್ನು ನೀಡಿದ್ದಾರೆ.

ಗೊರವಪ್ಪ ಏರಿದ ಬಿಲ್ಲಿನ ಅಳತೆ?
ದೇವರಗುಡ್ಡ ಗ್ರಾಮದ ಮಾಲತೇಶ ದೇವರ ಕಾರ್ಣಿಕೋತ್ಸವ ಮಂಗಳವಾರ ಸಂಜೆ ನಡೆಯಿತು. ಸುಮಾರು 20 ಅಡಿ ಬಿಲ್ಲನ್ನೇರಿದ ಗೊರವಪ್ಪ ಕಾರ್ಣಿಕ ನುಡಿದು ಬಿಲ್ಲಿನಿಂದ ಕೆಳಗೆ ದುಮುಕಿದ್ದಾರೆ. 'ಆಕಾಶದೆತ್ತರದ ಗುಡ್ಡಕ್ಕೆ ಶಿಶು ಏರೀತಲೇ ಪರಾಕ್' ಎಂದು ಕೇಳಿ ಗೊರವಪ್ಪ ನಾಗಪ್ಪ ಕೆಳಗೆ ಧುಮುಕುತ್ತಿದ್ದಂತೆ ಭಕ್ತರು ನೆಲಕ್ಕೆ ತಾಗದಂತೆ ಅವರನ್ನು ಹಿಡಿದುಕೊಂಡಿದ್ದಾರೆ.
ದೇವರಗುಡ್ಡದ ಕಾರ್ಣಿಕ: ಗೊರವಪ್ಪ ನಾಗಪ್ಪ ಉರ್ಮಿ ಬಿಲ್ಲನ್ನೇರಿ ಇಂದು ನುಡಿದಿದ್ದೇನು? ವಿಡಿಯೋ ನೋಡಿ#haveri #karnika #video #karnataka #Prediction pic.twitter.com/UXBBtjHANx
— oneindiakannada (@OneindiaKannada) October 4, 2022
ಗೊರವಪ್ಪನ ದೇಹ ಯಾವ ಕಡೆ ಬೀಳುತ್ತದೆ, ತಲೆ ಯಾವ ಕಡೆ ಬೀಳುತ್ತದೆ ಎಂದು ನೋಡಲಾಗುತ್ತಿದೆ. ಯಾವ ಕಡೆ ತಲೆ ಬೀಳುತ್ತದೆಯೋ ಆ ಕಡೆ ಉತ್ತಮವಾಗಿ ಬೆಳೆ ಮಳೆ ಆಗುತ್ತೆ ಎಂದು ಭಕ್ತರು ನಂಬಿಕೆ ಆಗಿದೆ. ಕಾರ್ಣಿಕ ಆಗುತ್ತಿದ್ದಂತೆ ಭಕ್ತರು ಪ್ರಸ್ತುತ ಕಾರ್ಣಿಕದ ಅರ್ಥವನ್ನು ವಿಶ್ಲೇಷಿಸಿದ್ದಾರೆ.

ಗೊರವಪ್ಪರ ಪಾದಯಾತ್ರೆ ಹೇಗಿರುತ್ತದೆ?
ಈ ಭವಿಷ್ಯವಾಣಿಯನ್ನು ಮೈಲಾರಲಿಂಗೇಶ್ವರನೇ ಗೊರವಪ್ಪನಿಗೆ ನುಡಿಸುತ್ತಾನೆ ಎಂದು ಭಕ್ತರ ನಂಬಿಕೆ ಆಗಿದೆ. ಇನ್ನು ಕಾರ್ಣಿಕೋತ್ಸವ ಕೇಳಲು ರಾಜ್ಯದ ವಿವಿಧಡೆಯಿಂದ ಭಕ್ತರು ಸಾಗರವೇ ಆಗಮಿಸಿತ್ತು. ಕಾರ್ಣಿಕೋತ್ಸವ ಹಿನ್ನೆಲೆಯಲ್ಲಿ ದೇವರಗುಡ್ಡದ ಮಾಲತೇಶ ಗಂಗಮ್ಮ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.
ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿವಿಧ ಅಭಿಷೇಕ, ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ಆಯುಧ ಪೂಜೆ ದಿನ ಇಲ್ಲಿ ಕಾರ್ಣಿಕೋತ್ಸವ ನಡೆದರೆ, ಮರುದಿನ ಪವಾಡಗಳು ನಡೆಯುತ್ತವೆ. ಕಂಚಾವೀರರು ಮುಳ್ಳಿನ ಪವಾಡ, ಸರಪಳಿ ಪವಾಡ, ಗೂಟದ ಪವಾಡ ಸೇರಿದಂತೆ ವಿವಿಧ ಪವಾಡಗಳನ್ನು ಮಾಡುವ ಮೂಲಕ ದೇವರಿಗೆ ನಮನ ಸಲ್ಲಿಸುತ್ತಾರೆ. ದೂರದ ಊರುಗಳಿಂದ ಗೊರವಪ್ಪರು ಪಾದಯಾತ್ರೆ ಮೂಲಕ ದೇವರಗುಡ್ಡಕ್ಕೆ ಆಗಮಿಸಿದ್ದರು. ಭಕ್ತರು ಬಾರಕೋಲ್ ಸೇವೆ ಸೇರಿದಂತೆ ಪಡ್ಡಲಗೆ ಸೇವೆ ಸಲ್ಲಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications