ಹಾವೇರಿ ಶಿಕ್ಷಕನಿಗೆ ಒಲಿದ ಫ್ರೀಡಂ ಜಾರ್ಕಾರ್ ಆಫರ್
ಬೆಂಗಳೂರು, 15 ಫೆಬ್ರವರಿ 2018: ಫ್ರೀಡಂ ರೀಫೈನ್ಡ್ ಸನ್ಫ್ಲವರ್ ಆಯಿಲ್ 'ಫ್ರೀಡಂ ಜಾರ್ಕಾರ್ ಆಫರ್'ನ ಬಂಪರ್ ಡ್ರಾದಲ್ಲಿ ವಿಜೇತರಾದವರ ಹೆಸರನ್ನು ಪ್ರಕಟಿಸಿದೆ. ಹಾವೇರಿ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ ದೇವರಾಜ್ ಎಂಬುವರು 'ಬಂಪರ್ ಬಹುಮಾನ' ಗೆದ್ದುಕೊಂಡಿದ್ದಾರೆ.
ಕನ್ನಡದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಮತ್ತು ಫ್ರೀಡಂ ರೀಫೈನ್ಡ್ ಸನ್ಫ್ಲವರ್ ಆಯಿಲ್ ಸಂಸ್ಥೆಯ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ಉಪಾಧ್ಯಕ್ಷ ಪಿ.ಚಂದ್ರಶೇಖರ ರೆಡ್ಡಿ ಅವರು ವಿಜೇತರಿಗೆ ಬಹುಮಾನವನ್ನು ವಿತರಿಸಿದರು.
ಗ್ರಾಹಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಫ್ರೀಡಂ ರೀಫೈನ್ಡ್ ಸನ್ಫ್ಲವರ್ ಆಯಿಲ್ ಸಂಸ್ಥೆಯು 2017 ರ ನವೆಂಬರ್ 1 ರಿಂದ 2018 ರ ಜನವರಿ 31 ರವರೆಗೆ ಜಾರ್ಕಾರ್ ಲಕ್ಕಿ ಡ್ರಾ ಯೋಜನೆಯನ್ನು ಆಯೋಜಿಸಿತ್ತು. 2, 3, 5 ಮತ್ತು 15 ಲೀಟರ್ನ ಫ್ರೀಡಂ ರೀಫೈನ್ಡ್ ಆಯಿಲ್ ಖರೀದಿ ಮಾಡಿದ ಗ್ರಾಹಕರಿಗೆ ಈ ಬಹುಮಾನ ಯೋಜನೆಯನ್ನು ಪ್ರಕಟಿಸಲಾಗಿತ್ತು.

ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಒಡಿಶಾ ರಾಜ್ಯಗಳ ಗ್ರಾಹಕರಿಗೆ ಮಾತ್ರ ಈ ಯೋಜನೆ ಜಾರಿಯಲ್ಲಿತ್ತು. ಕಳೆದ ಮೂರು ತಿಂಗಳಲ್ಲಿ 19 ಲಕ್ಷಕ್ಕೂ ಅಧಿಕ ಗ್ರಾಹಕರು ಈ ಲಕ್ಕಿ ಡ್ರಾ ಯೋಜನೆಯಲ್ಲಿ ಪಾಲ್ಗೊಳ್ಳುವ ಮೂಲಕ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಈ ಬಹುಮಾನ ಯೋಜನೆಯಲ್ಲಿ ಪಾಲ್ಗೊಳ್ಳಲು ಗ್ರಾಹಕರು 2, 3, 5 ಅಥವಾ 15 ಲೀಟರ್ ನ ಫ್ರೀಡಂ ರೀಫೈನ್ಡ್ ಸನ್ಫ್ಲವರ್ ಆಯಿಲ್ನ ಜಾರ್ ಅನ್ನು ಖರೀದಿ ಮಾಡಬೇಕಿತ್ತು. ಮತ್ತು ಜಾರ್ ನೊಂದಿಗೆ ಬಂದಿದ್ದ ಸ್ಕ್ರ್ಯಾಚ್ ಕಾರ್ಡ್ ಅನ್ನು ಪಡೆದ ಕಾರ್ಡನ್ನು ಸ್ಕ್ರ್ಯಾಚ್ ಮಾಡಿ ಅದರಲ್ಲಿ ಮುದ್ರಿಸಲಾಗಿದ್ದ ಕೋಡ್ ಸಂಖ್ಯೆಯನ್ನು ಎಸ್ಎಂಎಸ್ ಮಾಡುವ ಮೂಲಕ ನೋಂದಣಿಯಾಗಲು ಅವಕಾಶ ಕಲ್ಪಿಸಲಾಗಿತ್ತು.

ಎಲ್ಲಾ ಅರ್ಹ ಕೋಡ್ಗಳನ್ನು ವಿಶೇಷವಾಗಿ ಅಭಿವೃದ್ಧಿಪಡಿಸಿರುವ ಸಾಫ್ಟ್ ವೇರ್ನಲ್ಲಿ ಸುರಕ್ಷಿತವಾಗಿ ದಾಖಲಿಸಲಾಗಿತ್ತು. ಈ ಯೋಜನೆಯ ಎಲ್ಲಾ ಪ್ರಕ್ರಿಯೆಗಳ ಉಸ್ತುವಾರಿ ಮತ್ತು ಮೌಲ್ಯಮಾಪನ ಮಾಡಲು ಕೆಪಿಎಂಜಿ ಸಂಸ್ಥೆಯನ್ನು ನೇಮಕ ಮಾಡಲಾಗಿತ್ತು.
ಎರಡು ಬಾರಿ ಲಕ್ಕಿ ಡ್ರಾ ಮಾಡಲಾಗಿದ್ದು, ನಾಲ್ಕು ರಾಜ್ಯಗಳ 100 ಅದೃಷ್ಟಶಾಲಿಗಳಿಗೆ ಚಿನ್ನದ ನಾಣ್ಯಗಳನ್ನು ನೀಡಲಾಗಿದೆ. ಅಂತಿಮ ಬಂಪರ್ ಡ್ರಾ ಫೆಬ್ರವರಿ ಮೊದಲ ವಾರದಲ್ಲಿ ನಡೆದಿದೆ. ಅದೇ ರೀತಿ 200 ಅದೃಷ್ಠಶಾಲಿಗಳನ್ನು ತಲಾ 5 ಗ್ರಾಂ ಚಿನ್ನದ ನಾಣ್ಯಗಳ ಬಹುಮಾನಕ್ಕೆ ಆಯ್ಕೆ ಮಾಡಲಾಗಿತ್ತು.
ನಾಲ್ವರು ವಿಜೇತರನ್ನು ಬಂಪರ್ ಬಹುಮಾನಕ್ಕೆ ಆಯ್ಕೆ ಮಾಡಲಾಗಿದ್ದು, ಅವರು ಮಾರುತಿ ಆಲ್ಟೋ 800 -ಎಸಿ ಕಾರನ್ನು ಪಡೆಯುತ್ತಿದ್ದಾರೆ. ಇಂದು ಕರ್ನಾಟಕದ ಬಂಪರ್ ಬಹುಮಾನ ವಿಜೇತರಿಗೆ ಮಾರುತಿ ಆಲ್ಟೋ 800- ಎಸಿ ಕಾರನ್ನು ವಿತರಿಸಲಾಯಿತು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications