Get Updates
Get notified of breaking news, exclusive insights, and must-see stories!

ಜೈಲಿಗೆ ಹೋಗಿ ಬಂದ ಡಿಕೆಶಿ ಆಟ ಹಾವೇರಿಯಲ್ಲಿ ನಡೆಯಲ್ಲ: ಬಿ.ಸಿ.ಪಾಟೀಲ್

ಹಾವೇರಿ, ಡಿಸೆಂಬರ್ 02: ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿ ಬಂದವರು, ಅವರ ಆಟ ನಮ್ಮ ಹಾವೇರಿ ಜಿಲ್ಲೆಯಲ್ಲಿ ನಡೆಯುವುದಿಲ್ಲ ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಹಿರೇಕೆರೂರಿನಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್ ಅವರು ಡಿ.ಕೆ.ಶಿವಕುಮಾರ್ ಅವರು ಇಷ್ಟು ದಿನ ಜೈಲಿಗೆ ಹೋಗಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿ ಬಂದಿದ್ದಾರೆ, ಅವರ ಹಿನ್ನೆಲೆ ಏನು ಎಂಬುದು ಗೊತ್ತಿದೆ ಎಂದು ಟೀಕಿಸಿದ್ದಾರೆ.

ಈಗಾಗಲೇ ಎಲ್ಲಾ ಗ್ರಾಮಗಳಲ್ಲಿ ಪ್ರಚಾರ ಮುಗಿಸಲಾಗಿದೆ, ಈ ಉಪ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಡಿಕೆಶಿಯಂತಹ ಹತ್ತು ಮಂದಿ ಬಂದರೂ ಏನು ಮಾಡಲಾಗುವುದಿಲ್ಲ ಎಂದರು.

 DK Shivakumar went to jail, didnt His Game in Haveri: BC Patil

ಪಾಟೀಲ್ ನೋಟು, ಬನ್ನಿಕೋಡಗೆ ಓಟು ಎಂದು ಹೇಳಲು ಕನಕಪುರದಿಂದ ಬರಬೇಕಾಯಿತು, ಅವರು ಆಚಾರ, ವಿಚಾರದ ಬಗ್ಗೆ ಮಾತನಾಡುವಷ್ಟು ದೊಡ್ಡವರಲ್ಲ, ಅದನ್ನು ಅವರು ಕಳೆದಿಕೊಂಡಿದ್ದಾರೆ. ಅವರ ಹಿನ್ನೆಲೆ ಏನು ಎಂಬುದು ರಾಜ್ಯದ ಜನಕ್ಕೆ ಗೊತ್ತಾಗಿದೆ ಎಂದು ಹರಿಹಾಯ್ದರು.

ಕಾಂಗ್ರೆಸ್ ಮತ್ತು ಜೆಡಿಎಸ್ ನದು ದಿನಕ್ಕೊಂದು ನಾಟಕ, ಇವರ ನಾಟಕ ನೋಡಿ ಜನರು ನಗುತ್ತಿದ್ದಾರೆ, ಇವರ ನಾಟಕಕ್ಕೆ ಜನರಿಗೆ ಟೈಟಲ್ ಕೊಡಲು ಆಗುತ್ತಿಲ್ಲ ಎಂದರು. ಯು.ಬಿ.ಬಣಕಾರ್ ಹಾಗೂ ನನ್ನ ನಡುವೆ ಜಗಳ ಹಚ್ಚಿ ಲಾಭ ಪಡೆಯಲು ನೋಡುತ್ತಿದ್ದಾರೆ, ಅದು ಶಿವಕುಮಾರ್ ಭ್ರಮೆಯಲ್ಲಿದ್ದಾರೆ.

ಆದರೆ ಯು.ಬಿ.ಬಣಕಾರ್ ಬಹಳ ಬುದ್ದಿವಂತರು, ಇಂತವರ ಹೇಳಿಕೆಗಳಿಗೆ ತಲೆಕೆಡಿಸಿಕೊಳ್ಳವವರಲ್ಲ ಎಂದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಎರಡು ಬಾರಿ ಈ ರಾಜ್ಯದ ಮುಖ್ಯಮಂತ್ರಿಯಾದವರು ನಾಲಿಗೆ ಮೇಲೆ ಹಿಡಿತವಿರಬೇಕು, ಅವರ ಹಿತಿಹಾಸವೇ ಸರಿಯಾಗಿಲ್ಲ, ಅವರ ಘನತೆ, ಗೌರವಕ್ಕೆ ತಕ್ಕುದ್ದಾದ ಮಾತನಾಡಬೇಕು ಎಂದು ಛೇಡಿಸಿದರು.

ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ.ಸಿ.ಪಾಟೀಲ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಹೆಚ್.ಬನ್ನಿಕೋಡ್ ಉಪ ಚುನಾವಣಾ ಆಖಾಡದಲ್ಲಿದ್ದಾರೆ. ಡಿಸೆಂಬರ್ 05 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 09 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+