ಜೈಲಿಗೆ ಹೋಗಿ ಬಂದ ಡಿಕೆಶಿ ಆಟ ಹಾವೇರಿಯಲ್ಲಿ ನಡೆಯಲ್ಲ: ಬಿ.ಸಿ.ಪಾಟೀಲ್
ಹಾವೇರಿ, ಡಿಸೆಂಬರ್ 02: ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿ ಬಂದವರು, ಅವರ ಆಟ ನಮ್ಮ ಹಾವೇರಿ ಜಿಲ್ಲೆಯಲ್ಲಿ ನಡೆಯುವುದಿಲ್ಲ ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಹಿರೇಕೆರೂರಿನಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್ ಅವರು ಡಿ.ಕೆ.ಶಿವಕುಮಾರ್ ಅವರು ಇಷ್ಟು ದಿನ ಜೈಲಿಗೆ ಹೋಗಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿ ಬಂದಿದ್ದಾರೆ, ಅವರ ಹಿನ್ನೆಲೆ ಏನು ಎಂಬುದು ಗೊತ್ತಿದೆ ಎಂದು ಟೀಕಿಸಿದ್ದಾರೆ.
ಈಗಾಗಲೇ ಎಲ್ಲಾ ಗ್ರಾಮಗಳಲ್ಲಿ ಪ್ರಚಾರ ಮುಗಿಸಲಾಗಿದೆ, ಈ ಉಪ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಡಿಕೆಶಿಯಂತಹ ಹತ್ತು ಮಂದಿ ಬಂದರೂ ಏನು ಮಾಡಲಾಗುವುದಿಲ್ಲ ಎಂದರು.

ಪಾಟೀಲ್ ನೋಟು, ಬನ್ನಿಕೋಡಗೆ ಓಟು ಎಂದು ಹೇಳಲು ಕನಕಪುರದಿಂದ ಬರಬೇಕಾಯಿತು, ಅವರು ಆಚಾರ, ವಿಚಾರದ ಬಗ್ಗೆ ಮಾತನಾಡುವಷ್ಟು ದೊಡ್ಡವರಲ್ಲ, ಅದನ್ನು ಅವರು ಕಳೆದಿಕೊಂಡಿದ್ದಾರೆ. ಅವರ ಹಿನ್ನೆಲೆ ಏನು ಎಂಬುದು ರಾಜ್ಯದ ಜನಕ್ಕೆ ಗೊತ್ತಾಗಿದೆ ಎಂದು ಹರಿಹಾಯ್ದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನದು ದಿನಕ್ಕೊಂದು ನಾಟಕ, ಇವರ ನಾಟಕ ನೋಡಿ ಜನರು ನಗುತ್ತಿದ್ದಾರೆ, ಇವರ ನಾಟಕಕ್ಕೆ ಜನರಿಗೆ ಟೈಟಲ್ ಕೊಡಲು ಆಗುತ್ತಿಲ್ಲ ಎಂದರು. ಯು.ಬಿ.ಬಣಕಾರ್ ಹಾಗೂ ನನ್ನ ನಡುವೆ ಜಗಳ ಹಚ್ಚಿ ಲಾಭ ಪಡೆಯಲು ನೋಡುತ್ತಿದ್ದಾರೆ, ಅದು ಶಿವಕುಮಾರ್ ಭ್ರಮೆಯಲ್ಲಿದ್ದಾರೆ.
ಆದರೆ ಯು.ಬಿ.ಬಣಕಾರ್ ಬಹಳ ಬುದ್ದಿವಂತರು, ಇಂತವರ ಹೇಳಿಕೆಗಳಿಗೆ ತಲೆಕೆಡಿಸಿಕೊಳ್ಳವವರಲ್ಲ ಎಂದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಎರಡು ಬಾರಿ ಈ ರಾಜ್ಯದ ಮುಖ್ಯಮಂತ್ರಿಯಾದವರು ನಾಲಿಗೆ ಮೇಲೆ ಹಿಡಿತವಿರಬೇಕು, ಅವರ ಹಿತಿಹಾಸವೇ ಸರಿಯಾಗಿಲ್ಲ, ಅವರ ಘನತೆ, ಗೌರವಕ್ಕೆ ತಕ್ಕುದ್ದಾದ ಮಾತನಾಡಬೇಕು ಎಂದು ಛೇಡಿಸಿದರು.
ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ.ಸಿ.ಪಾಟೀಲ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಹೆಚ್.ಬನ್ನಿಕೋಡ್ ಉಪ ಚುನಾವಣಾ ಆಖಾಡದಲ್ಲಿದ್ದಾರೆ. ಡಿಸೆಂಬರ್ 05 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 09 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications