ಅನಧಿಕೃತ ಬಡಾವಣೆಗಳ ನಿವೇಶನ ಖರೀದಿಸಬೇಡಿ: ಸಾರ್ವಜನಿಕರಿಗೆ ಹಾವೇರಿ ಜಿಲ್ಲಾಧಿಕಾರಿ ಎಚ್ಚರಿಕೆ
ಹಾವೇರಿ, ಆಗಸ್ಟ್ 23: ನಾಗರಿಕರು ನಿವೇಶನಗಳನ್ನು ಖರೀದಿಸುವ ಪೂರ್ವದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ವಿನ್ಯಾಸಗಳಿಗೆ ಅನುಮೋದನೆ ಪಡೆದು ಮುಕ್ತಾಯ ಪ್ರಮಾಣ ಪತ್ರ ಪಡೆದಿರುವ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿ ಖರೀದಿಸಬೇಕು ಎಂದು ಹಾವೇರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚಿಸಿದ್ದಾರೆ.
ಹಾವೇರಿ ನಗರಸಭೆ ಸೇರಿದಂತೆ 15 ಹಳ್ಳಿಗಳನ್ನು ಒಳಗೊಂಡ ಪ್ರದೇಶಕ್ಕೆ ಸ್ಥಳೀಯ ಯೋಜನಾ ಪ್ರದೇಶವೆಂದು ಘೋಷಿಸಲಾಗಿದೆ. ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಪ್ರಾಧಿಕಾರದ ಅನುಮತಿ ಇಲ್ಲದೇ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ತೆಗೆದುಕೊಳ್ಳಲು ಅವಕಾಶ ಇರುವುದಿಲ್ಲ.

ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೇ ಖಾಸಗಿ ಬಡಾವಣೆಗಳನ್ನು ರಚಿಸಿ ಅಕ್ರಮವಾಗಿ ನಿವೇಶನಗಳನ್ನು ರಚಿಸಿ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಇಂತಹ ಅಕ್ರಮ ಬಡಾವಣೆಗಳಲ್ಲಿ ನಿವೇಶನಗಳನ್ನು ಖರೀದಿಸಿದಲ್ಲಿ ಯಾವುದೇ ಮೂಲ ಸೌಕರ್ಯಗಳನ್ನು ಅವರು ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಅಲ್ಲದೇ ಕೃಷಿ ಜಮೀನುಗಳಲ್ಲಿ ಅನಧಿಕೃತವಾಗಿ ಖಾಸಗಿ ಬಡಾವಣೆಗಳನ್ನು ರಚಿಸಿ ಮಾರಾಟ ಮಾಡುತ್ತಿರುವುದು ಕಾನೂನು ಬಾಹಿರವಾಗಿರುತ್ತದೆ. ಆದ್ದರಿಂದ ಹಾವೇರಿ ನಗರದ ನಾಗರಿಕರು ಇಂತಹ ನಿವೇಶನಗಳನ್ನು ಖರೀದಿಸಿ ಮೋಸ ಹೋಗಬಾರದೆಂದು ಎಚ್ಚರಿಸಲಾಗಿದೆ. ಒಂದು ವೇಳೆ ಖರೀದಿಸಿದ್ದಲ್ಲಿ ಅದಕ್ಕೆ ತಾವೇ ಹೊಣೆಗಾರರಾಗುತ್ತೀರಿ ಮತ್ತು ನಗರಸಭೆ ವತಿಯಿಂದ ಯಾವುದೇ ಮೂಲ ಸೌಲಭ್ಯಗಳನ್ನು ಒದಗಿಸುವುದಿಲ್ಲ ಎಂದು ಡಿಸಿ ತಿಳಿಸಿದ್ದಾರೆ.
ನಿಮ್ಮ ಸುತ್ತಮುತ್ತ ಅನಧಿಕೃತ ಬಡಾವಣೆಗಳನ್ನು ರಚಿಸುತ್ತಿರುವ ಬಗ್ಗೆ ತಿಳಿದಲ್ಲಿ ತಕ್ಷಣ ಪ್ರಾಧಿಕಾರಕ್ಕೆ ಮಾಹಿತಿ ನೀಡಿ ಹಾವೇರಿ ನಗರದಲ್ಲಿ ಬರುತ್ತಿರುವ ಅನಧಿಕೃತ ಬಡಾವಣೆಗಳನ್ನು ನಿರ್ಮೂಲನೆ ಮಾಡಲು ಪ್ರಾಧಿಕಾರದ ಜತೆ ಕೈಜೋಡಿಸಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಅನಧಿಕೃತ ಬಡಾವಣೆ ತೆರವು
ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1916 ಕಲಂ 15(4) ಹಾಗೂ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ 1987ರ ಕಲಂ 33ರ ಅಡಿಯಲ್ಲಿ ಹಾವೇರಿ ನಗರಾಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಅನಧಿಕೃತ ಬಡಾವಣೆಗಳನ್ನು ಪ್ರಾಧಿಕಾರದ ವತಿಯಿಂದ ತೆರೆವುಗೊಳಿಸಲಾಗುವುದು ಎಂದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications